ಕನ್ನಡ ವಿವಿ ಕೈಬಿಡದಿದ್ರೆ ಹೋರಾಟ


Team Udayavani, Nov 21, 2017, 7:19 PM IST

21-25.jpg

ಬಳ್ಳಾರಿ/ಹೊಸಪೇಟೆ: ಉದ್ದೇಶಿತ ಕರ್ನಾಟಕ ವಿಶ್ವವಿದ್ಯಾಲಯಗಳ ತಿದ್ದುಪಡಿ ಕಾಯ್ದೆಯ ವ್ಯಾಪ್ತಿಯಿಂದ ಹಂಪಿ ಕನ್ನಡ ವಿವಿಯನ್ನು ರಾಜ್ಯ ಸರ್ಕಾರ ಕೈ ಬಿಡದೆ ಹೋದಲ್ಲಿ ರಾಜ್ಯಾದ್ಯಂತ ಕನ್ನಡ ವಿಶ್ವವಿದ್ಯಾಲಯ ಉಳಿಸಿ ಹೆಸರಿನ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹಂಪಿ ವಿವಿಯ ಸ್ವಾಯತ್ತತೆಯ ಬೆಂಬಲಿಗರು, ವಿವಿಯ ವಿಶ್ರಾಂತ ಕುಲಪತಿಗಳು, ಚಿಂತಕರು, ಲೇಖಕರು ಘೋಷಿಸಿದರು. ಸೋಮವಾರ ವಿವಿಯ ಸೆಮಿನಾರ್‌ ಸಭಾಂಗಣದಲ್ಲಿ ಹಂಪಿ ಕನ್ನಡ ವಿವಿಯ ಸ್ವಾಯತ್ತತೆ ಉಳಿಸುವ ಕುರಿತಂತೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರೊಂದಿಗೆ ಚರ್ಚೆ ನಡೆಸಿದ ನಂತರ ಉನ್ನತ ನಾಡೋಜ ಪಾಟೀಲ ಪುಟ್ಟಪ್ಪನವರ
ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟವಾಯಿತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ| ಕೆ.ಮರುಳಸಿದ್ದಪ್ಪ, 
ಬೇರೆ ವಿವಿಗಳಂತೆ ಕನ್ನಡ ವಿವಿ ಅಲ್ಲ. ಕನ್ನಡ ಭಾಷೆ, ಸಂಸ್ಕೃತಿ, ಸಂಪ್ರದಾಯ, ನೆಲ-ಜಲಗಳ ಕುರಿತ, ಜಾನಪದ, ಸಾಹಿತ್ಯ,
ನಾಡಿನ ಅಭಿವೃದ್ಧಿ ಮುಂತಾದ ವೈವಿಧ್ಯಮಯ ವಿಷಯಗಳ ಕುರಿತ ಸಂಶೋಧನಾ ಕೇಂದ್ರಿತ ವಿವಿಯಾಗಿದೆ. ಇಂತಹ ವಿಶಿಷ್ಟ ಕನ್ನಡ
ವಿವಿಯನ್ನು ಇತರೆ ವಿವಿಗಳೊಂದಿಗೆ ಒಂದೇ ಎಂದು ಭಾವಿಸುವುದು ಸರಿಯಲ್ಲ. ಉದ್ದೇಶಿತ ಕರ್ನಾಟಕ ವಿವಿಗಳ ತಿದ್ದುಪಡಿ ಕಾಯ್ದೆಯ
ವ್ಯಾಪ್ತಿಗೆ ಹಂಪಿ ಕನ್ನಡ ವಿವಿಯನ್ನೂ ತರುವುದರಿಂದ ವಿವಿ ಸ್ಥಾಪನೆಯ ಮೂಲ ಉದ್ದೇಶವೇ ಬದಲಾಗುವ ಸಾಧ್ಯತೆಗಳಿವೆ
ಎಂದು ಅವರು ಆತಂಕ ವ್ಯಕ್ತಪಡಿಸಿದರು. ಆದ್ದರಿಂದ ಹಂಪಿ ಕನ್ನಡ ವಿವಿಯನ್ನು ವಿವಿಗಳ ತಿದ್ದುಪಡಿ ಕಾಯ್ದೆಯಿಂದ ಅದಕ್ಕೆ
ಅನುಮೋದನೆ ನೀಡುವ ಮುಂಚೆಯೆ ಕೈ ಬಿಡಬೇಕು. ಇಲ್ಲದೇ ಹೋದಲ್ಲಿ ವಿವಿಯನ್ನು ಕಾಯ್ದೆಯ ವ್ಯಾಪ್ತಿಯಿಂದ ಕೈಬಿಡುವವರೆಗೆ
ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹಂಪಿ ಕನ್ನಡ ವಿವಿಯನ್ನು ಉಳಿಸಿ ಹೋರಾಟ ಹಮ್ಮಿಕೊಳ್ಳಬೇಕು ಎನ್ನುವುದು ಸಭೆಯಲ್ಲಿ
ಉಪಸ್ಥಿತರಿದ್ದ ಎಲ್ಲರ ಏಕಾಭಿಪ್ರಾಯವಾಗಿದೆ ಎಂದರು.

ವಿವಿಗಳ ತಿದ್ದುಪಡಿ ಕಾಯ್ದೆಯನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ. ಒಂದು ವೇಳೆ ಈ ಕಾಯ್ದೆ ಜಾರಿಯಾದರೆ ಹಂಪಿ ಕನ್ನಡ
ವಿವಿ ತನ್ನ ಸ್ವಾಯತ್ತತೆಯನ್ನು ಕಳೆದುಕೊಳ್ಳುವ ಅಪಾಯವಿದೆ ಎನ್ನುವುದು ಎಲ್ಲರಿಗೂ ಮನವರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ
ಎಲ್ಲರೂ ಏಕಾಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದರು. ಹಂಪಿ ಕನ್ನಡ ವಿವಿಯ ಸ್ವಾಯತ್ತತೆ ಉಳಿಸುವ ಕುರಿತಂತೆ ವಿವಿಯ ಕುಲಪತಿ ಪ್ರೊ| ಮಲ್ಲಿಕಾ ಘಂಟಿ ಅವರ ನೇತೃತ್ವದಲಿ ಚಿಂತಕರು, ಲೇಖಕರು, ವಿವಿಯ ಕುರಿತು  ಅಭಿಮಾನ ಇಟ್ಟುಕೊಂಡಿರುವವರೆಲ್ಲರೂ ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೆವು. ಅದರ
ಮುಂದುವರಿಕೆಯಾಗಿ ಸಿಎಂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿಯವರನ್ನು ಇಲ್ಲಿ ಚರ್ಚಿಸಿ ವಿಷಯ ಸಂಗ್ರಹಿಸಲು
ಕಳುಹಿಸಿದ್ದರು.

ರಾಯರಡ್ಡಿ ಅವರೊಂದಿಗೆ ನಡೆದ ಚರ್ಚೆಯಲ್ಲಿ ಕನ್ನಡ ವಿವಿಗೆಂದೇ ಪ್ರತ್ಯೇಕ ವಿಧೇಯಕವಿದೆ. ಈ ಹಿನ್ನೆಲೆ ಕರ್ನಾಟಕ
ವಿವಿ ಕಾಯ್ದೆ-2000ರ ವ್ಯಾಪ್ತಿಯಿಂದ ಕನ್ನಡ ವಿವಿಯನ್ನು ಹೊರಗಿಟ್ಟು ಸ್ವಾಯತ್ತತೆಯನ್ನು ಉಳಿಸಲಾಗಿತ್ತು. ಆದರೆ, ಉದ್ದೇಶಿತ ತಿದ್ದುಪಡಿ ಕಾಯ್ದೆ ವ್ಯಾಪ್ತಿಗೆ ಇತರೆ ವಿವಿಗಳಂತೆ ಕನ್ನಡ ವಿವಿಯೂ ಬರಲಿದೆ. ಇದು ನಿಜಕ್ಕೂ ಆತಂಕದ ವಿಷಯ. ಇದು ನಡೆಯಬಾರದು ಎಂದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ| ಎಲ್‌.ಹನುಮಂತಯ್ಯ ಮಾತನಾಡಿ, ತಿದ್ದುಪಡಿ ವಿಧೇಯಕವನ್ನು ಸದನದ ಮುಂದಿಡುವ ಮುಂಚೆ ಸಂಪುಟ ಸಮಿತಿ ಸಭೆಯಲ್ಲಿ ಹಂಪಿ ಕನ್ನಡ ವಿವಿಯನ್ನು ಹೊರಗಿಡುವ ನಿರ್ಧಾರ ಕೈಗೊಂಡು ನಂತರ ಸದನದಲ್ಲಿ ಮಂಡಿಸಬೇಕೆಂದು ಒತ್ತಾಯಿಸಿದರು.

ಕನ್ನಡ ವಿವಿಯ ಕುಲಪತಿ ಪ್ರೊ| ಮಲ್ಲಿಕಾ ಘಂಟಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಎಸ್‌.ಜಿ.ಸಿದ್ಧರಾಮಯ್ಯ, ವಿಶ್ರಾಂತ ಪ್ರಾಧ್ಯಾಪಕ ಡಾ| ಜಿ.ರಾಮಕೃಷ್ಣ, ಡಾ| ಕಾಳೇಗೌಡ ನಾಗವಾರ, ಡಾ| ಹಿ.ಶಿ. ರಾಮಚಂದ್ರೇಗೌಡ, ವಿವಿಯ ವಿಶ್ರಾಂತ
ಕುಲಪತಿಗಳಾದ ಡಾ| ಎ.ಮುರಿಗೆಪ್ಪ, ಡಾ| ಹಿ.ಚಿ.ಬೋರಲಿಂಗಯ್ಯ, ವಿಶ್ರಾಂತ ಪ್ರಾಧ್ಯಾಪಕ ಡಾ| ಕೆ.ವಿ.ನಾರಾಯಣ, ಡಾ|
ಬಸವರಾಜ ಸಾದರ, ಪ್ರೊ| ಅಲ್ಲಮಪ್ರಭು ಬೆಟ್ಟದೂರು, ಡಾ| ಬಸವರಾಜ ಸಬರದ, ಕನ್ನಡ ವಿವಿಯ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಎ.ವಿ.ನಾವಡ, ವಿಎಸ್‌ಕೆ ವಿವಿಯ ಕುಲಪತಿ ಪ್ರೊ| ಎಂ.ಎಸ್‌.ಸುಭಾಷ್‌, ದಾವಣಗೆರೆ ವಿವಿ ಕುಲಪತಿ ಪ್ರೊ| ಬಿ.ಬಿ.ಕಲಿವಾಳ್‌
ಮುಂತಾದವರು ಉಪಸ್ಥಿತರಿದ್ದರು. 

ಬೇರೆ ವಿವಿಗಳಂತೆ ಕನ್ನಡ ವಿವಿ ಅಲ್ಲ. ಕನ್ನಡ ಭಾಷೆ, ಸಂಸ್ಕೃತಿ, ಸಂಪ್ರದಾಯ, ನೆಲ-ಜಲಗಳ ಕುರಿತ, ಜಾನಪದ, ಸಾಹಿತ್ಯ, ನಾಡಿನ ಅಭಿವೃದ್ಧಿ ಮುಂತಾದ ವೈವಿಧ್ಯಮಯ ವಿಷಯಗಳ ಕುರಿತ ಸಂಶೋಧನಾ ಕೇಂದ್ರಿತ ವಿವಿಯಾಗಿದೆ. ಇಂತಹ ವಿಶಿಷ್ಟ ಕನ್ನಡ ವಿವಿಯನ್ನು ಇತರೆ ವಿವಿಗಳೊಂದಿಗೆ ಒಂದೇ ಎಂದು ಭಾವಿಸುವುದು ಸರಿಯಲ್ಲ.  ಡಾ| ಕೆ.ಮರುಳಸಿದ್ದಪ್ಪ, ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರು. 

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.