ಶೀಘ್ರ ತಲಾಖ್ ನಿಷೇಧಕ್ಕೆ ಮಸೂದೆ?
Team Udayavani, Nov 22, 2017, 6:00 AM IST
ಹೊಸದಿಲ್ಲಿ: ಮುಸ್ಲಿಮರಲ್ಲಿ ಜಾರಿಯಲ್ಲಿರುವ ಒಂದೇ ಬಾರಿಗೆ ತ್ರಿವಳಿ ತಲಾಖ್ ಹೇಳುವ ಪದ್ಧತಿಗೆ ಕೊನೆ ಹಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಕೇಂದ್ರ ಸರಕಾರ, ಸಂಸತ್ನ ಚಳಿಗಾಲದ ಅಧಿವೇಶನದಲ್ಲೇ ಇದಕ್ಕೆ ಸಂಬಂಧಿಸಿದ ಮಸೂದೆ ಮಂಡಿಸಲು ನಿರ್ಧರಿಸಿದೆ.
ಒಮ್ಮೆಗೆ ಮೂರು ಬಾರಿ ತಲಾಖ್ ನೀಡುವ ಕ್ರಮವನ್ನು ಸುಪ್ರೀಂ ಕೋರ್ಟ್ ರದ್ದುಮಾಡಿದ ಬಳಿಕವೂ ಹಲವರು ಅದನ್ನೇ ಅನುಸರಿಸುತ್ತಿರು ವುದು ಕಂಡುಬಂದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಇಂತಹ ತಲಾಖ್ ಅನ್ನು ಅಪರಾಧ ಎಂದು ಪರಿಗಣಿಸುವಂಥ ಕಾನೂನು ತರಲು ಅಥವಾ ಪ್ರಸ್ತುತ ಇರುವ ಕಾನೂನಿಗೆ ತಿದ್ದುಪಡಿ ತರುವ ಕುರಿತು ಪರಿಶೀಲಿಸಲು ಸಂಸದೀಯ ಸಮಿತಿ ರಚಿಸಲಾಗಿದೆ. ಸೂಕ್ತ ಕಾನೂನು ಜಾರಿ ಯಲ್ಲಿ ಇಲ್ಲದ ಕಾರಣ, ತ್ರಿವಳಿ
ತಲಾಖ್ನ ಸಂತ್ರಸ್ತೆಯರು ಅಸಹಾಯ ಕತೆಗೆ ಸಿಲುಕಿದ್ದಾರೆ. ಪೊಲೀಸರಿಗೆ ಕೂಡ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯ ವಾಗುತ್ತಿಲ್ಲ. ಹೀಗಾಗಿ, ಈ ನಿಟ್ಟಿನಲ್ಲಿ ಕಠಿನ ಕಾನೂನು ತರಲು ಸರಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಈ ಕುರಿತ ಮಸೂದೆ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗಲಿದೆ. ಒಂದೇ ಬಾರಿಗೆ ಹೇಳುವ ತ್ರಿವಳಿ ತಲಾಖ್ ಅಸಾಂವಿಧಾನಿಕ ಮತ್ತು ನಿರಂಕುಶ ಎಂದು ಹೇಳಿದ್ದ ಸುಪ್ರೀಂ ಕೋರ್ಟ್ ಕಳೆದ ಆಗಸ್ಟ್ ನಲ್ಲಿ ಈ ನಿಯಮವನ್ನು ರದ್ದು ಮಾಡಿ ಐತಿಹಾಸಿಕ ತೀರ್ಪು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ