ಭೂಸ್ವಾಧೀನ ಬಳಿಕ ತೋಕೂರು ಶಾಲೆ ಅತಂತ್ರ


Team Udayavani, Nov 22, 2017, 1:55 PM IST

22-Nov-10.jpg

ಬಜಪೆ: ಜೋಕಟ್ಟೆ ಗ್ರಾಮದ 62ನೇ ತೋಕೂರು ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಅಳಿವು-ಉಳಿವಿನ ಅಂಚಿನಲ್ಲಿದೆ. ಮಂಗಳೂರು ವಿಶೇಷ ಅರ್ಥಿಕ ವಲಯಕ್ಕಾಗಿ ಸುತ್ತಲಿನ ಭೂಮಿ, ಮನೆಗಳನ್ನು ಸ್ವಾಧೀನ ಮಾಡಿಕೊಂಡು, ಶಾಲೆಯನ್ನು ಮಾತ್ರ ಬಿಟ್ಟಿದ್ದು ಈ ದುಃ ಸ್ಥಿತಿಗೆ ಕಾರಣ. ರಸ್ತೆಗಳು ಹದಗೆಟ್ಟಿದ್ದು, ನಿರ್ಜನ ಪ್ರದೇಶದಲ್ಲಿರುವ ಶಾಲೆಗೆ ಬರಲು ವಿದ್ಯಾರ್ಥಿಗಳಿಗೂ ಕಷ್ಟವಾಗುತ್ತಿದೆ.

ಹಿಂದೆ ಇಲ್ಲಿ ಸುಮಾರು 200 ಮನೆಗಳಿದ್ದವು. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಎಂಎಸ್‌ಇಝಡ್‌, ದ.ಕ.ಜಿ.ಪಂ. ಹಿ.ಪ್ರಾ. ಶಾಲೆ 62ನೇ ತೋಕೂರು ಶಾಲೆಯ ಸುಮಾರು 3 ಎಕರೆ ಜಾಗ ಬಿಟ್ಟು ಮನೆಯಿರುವ ಪ್ರದೇಶವನ್ನು ಸ್ವಾಧೀನಪಡಿಸಲಾಗಿತ್ತು. ಹದಗೆಟ್ಟ ರಸ್ತೆ ಹೊರತುಪಡಿಸಿ ಬೇರೆಲ್ಲ ಸವಲತ್ತುಗಳಿದ್ದರೂ ಶಾಲೆಯ ಪರಿಸರದಲ್ಲಿ ಮನೆಗಳಿಲ್ಲ. ವಿದ್ಯಾರ್ಥಿಗಳ ಕೊರತೆಯಿದ್ದು, ಮುಚ್ಚುವ ಪರಿಸ್ಥಿತಿಯಲ್ಲಿದೆ. ಇದನ್ನು ಸ್ಥಳಾಂತರಗೊಳಿಸಲು ಮನವಿ ಮಾಡಿದರೂ ಸ್ಪಂದನೆ ಇಲ್ಲ.

1959ರ ಆ. 19ರಂದು ಸ್ಥಾಪನೆಗೊಂಡ ಈ ಶಾಲೆ ಸುವರ್ಣ ಮಹೋತ್ಸವ ಆಚರಿಸಿದೆ. ಮೊದಲು 4 ತರಗತಿಗಳಿದ್ದು, 2011 ರಿಂದ 8ನೇ ತರಗತಿ ತನಕ ನಡೆಯುತ್ತಿದೆ. ಈಗ ಒಟ್ಟು 64 ವಿದ್ಯಾರ್ಥಿಗಳಿದ್ದಾರೆ.

ಕಾಡು, ಗುಡ್ಡಗಳು ಮಾತ್ರ
ಇಲ್ಲಿನ ಕೆಲವು ಕಂಪೆನಿಗಳು ಹೊರಸೂಸುವ ಹೊಗೆ ಪರಿಸರದಲ್ಲಿ ಉಸಿರಾಟಕ್ಕೆ, ಶಬ್ದ ಮಾಲಿನ್ಯದಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಶಾಲೆಗೆ ಬರುವ ಮಣ್ಣು ರಸ್ತೆಯೂ ಧೂಳುಮಯವಾಗಿದೆ. ಸಮೀಪವೇ ಕಾಡು ಇರುವುದರಿಂದ ಹಾವು, ಹೆಬ್ಟಾವು, ಕತ್ತೆ ಕಿರುಬಗಳ ಕಾಟವಿದ್ದು, ವಿದ್ಯಾರ್ಥಿಗಳಿಗೆ ಭಯದ ವಾತಾವರಣವಿದೆ.

ಮನವಿ ಬಂದಿಲ್ಲ
ಸ್ಥಳಾಂತರ, ಕಟ್ಟಡಕ್ಕೆ ಅನುದಾನದ ನೀಡುವ ಬಗ್ಗೆ ಯಾವುದೇ ಮನವಿ ಬಂದಿಲ್ಲ. ಈ ಪ್ರದೇಶದ ಜಿಲ್ಲಾ ಪಂಚಾಯತ್‌ ಸದಸ್ಯರು ಸಾಧನಾ ಸಾಮಗ್ರಿಗೆಂದು 70 ಸಾವಿರ ರೂ.ಅನುದಾನ ಮೀಸಲಿಟ್ಟಿದ್ದಾರೆ.
ಮಂಜುಳಾ,
   ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ 

ಮಕ್ಕಳಿಗೆ ಅನುಕೂಲ ಕಲ್ಪಿಸಿ
ಶಾಲೆ ಉಳಿಸಿಕೊಳ್ಳುವ ಜತೆಗೆ, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ. 58 ವರ್ಷಗಳನ್ನು ಕಂಡ ಶಾಲೆಯ ಪರಿಸರದಲ್ಲಿ ಭೂಸ್ವಾಧೀನದ ಪರಿಣಾಮ ಯಾವುದೇ ಮನೆಗಳು ಉಳಿದಿಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಶಾಲೆ ಸ್ಥಳಾಂತರವಾಗಿ, ಮೀಸಲಿಟ್ಟ ಜಾಗದಲ್ಲಿ ನಿರ್ಮಾಣವಾಗಬೇಕು. ಸರಕಾರಿ ಶಾಲೆಗೆ ಹೆಚ್ಚಾಗಿ ಬಡ ಮಕ್ಕಳು ಬರುವ ಕಾರಣ ಅವರ ಶಿಕ್ಷಣಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಸರಕಾರ ಹಾಗೂ ಕಂಪೆನಿಗಳು ಶೀಘ್ರ ಕಾರ್ಯ ಪ್ರವೃತ್ತವಾಗಬೇಕು.
– ಸುರೇಂದ್ರ ಕುಲಾಲ್‌, ಸ್ಥಳೀಯ

 ಸುಬ್ರಾಯ ನಾಯಕ್‌ 

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.