ಮಂದಿರ, ಗೋ, ಅಸ್ಪೃಶ್ಯತೆ ಇತ್ಯಾದಿ ನಿರ್ಣಯ


Team Udayavani, Nov 23, 2017, 9:09 AM IST

23-11.jpg

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಗೋಹತ್ಯೆ ನಿಷೇಧ, ಅಸ್ಪೃಶ್ಯತೆ ನಿವಾರಣೆಗೆ ಇನ್ನಷ್ಟು ಒತ್ತು ಇತ್ಯಾದಿ ವಿಷಯಗಳ ಬಗೆಗೆ ಸಂತರು ಚರ್ಚಿಸಿ ನಿರ್ಣಯ ಕೈಗೊಳ್ಳುವರು ಎಂದು ಪರ್ಯಾಯ ಶ್ರೀ ಪೇಜಾವರ ಮಠಾಧೀಶರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸುದ್ದಿಗಾರರ ವಿವಿಧ ಪ್ರಶ್ನೆಗಳಿಗೆ ಉತ್ತರಿ ಸಿದ ಅವರು, ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿದೆ. ಇದಕ್ಕಾಗಿ ಸಂಧಾನ ನಡೆಸುತ್ತಿರುವ ರವಿಶಂಕರ್‌ ಗುರೂಜಿಯವರು ಧರ್ಮಸಂಸದ್‌ಗೂ ಬರಲಿದ್ದಾರೆ. ಉ.ಪ್ರ. ಮತ್ತು ಕೇಂದ್ರ ಸರಕಾರ ಮಂದಿರ ನಿರ್ಮಾಣಕ್ಕೆ ಪೂರಕವಾಗಿರುವುದರಿಂದ ಹೊಸ ವಿಧೇಯಕ ವನ್ನೂ ಮಂಡಿಸಬಹುದು. ಈ ಕುರಿತು ಸಂತರು ಯಾವ ರೀತಿ ನಿರ್ಣಯ ಮಂಡಿಸು ತ್ತಾರೆಂದು ನೋಡಬೇಕು ಎಂದರು.

ಗೋಹತ್ಯೆ ನಿಷೇಧದ ಕುರಿತು ಆಚಾರ್ಯ ವಿನೋಬಾ ಭಾವೆಯವರು ಉಪವಾಸ ವ್ರತ ಕೈಗೊಂಡಾಗ ಪ್ರಧಾನಿ ಮೊರಾರ್ಜಿ ದೇಸಾಯಿಯವರು ಗೋಹತ್ಯೆ ನಿಷೇಧಕ್ಕೆ ಪ್ರಯತ್ನಿಸಿದರು. ಆದರೆ ಕೇರಳದಲ್ಲಿದ್ದ ಕಮ್ಯು ನಿಸ್ಟ್‌ ಅಂಥ ರಾಜ್ಯ ಸರಕಾರಗಳ ಅಸಹ ಕಾರದಿಂದ ಕೈಗೂಡಲಿಲ್ಲ. ಈಗಲೂ ಅದೇ ಸ್ಥಿತಿ ಇದೆ ಎಂದು ಸ್ವಾಮೀಜಿ ತಿಳಿಸಿದರು.

ಅಸ್ಪೃಶ್ಯತೆ ವಿರುದ್ಧ ಹಿಂದೆಯೇ ನಿರ್ಣಯ ತಳೆದಿದ್ದರೂ ಇದನ್ನು ಮತ್ತಷ್ಟು ತೀವ್ರವಾಗಿ ಪರಿಗಣಿಸಬೇಕಾ ಗಿದೆ ಎಂದರು. ಪ್ರಶ್ನೆಗೆ ಉತ್ತರಿಸಿದ ಅವರು ರಾಜಕೀಯಕ್ಕೂ ಧರ್ಮ ಸಂಸದ್‌ಗೂ ಯಾವುದೇ ಸಂಬಂಧವಿಲ್ಲ ಎಂದರು.

ಪರ್ಯಾಯ ಸ್ವಾಮಿಗಳಿಗೆ ಗಡಿ
ಎಂಜಿಎಂ ಕಾಲೇಜಿನ ಮೈದಾನದಲ್ಲಿ ನಡೆಯುವ ಹಿಂದೂ ಸಮಾಜೋತ್ಸವಕ್ಕೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ ಅವರು, ಹಿಂದೆ ಪಿಪಿಸಿ ಬಳಿ ಕಡೆಕೊಪ್ಲದಲ್ಲಿ ಸಂಸ್ಕೃತ ಕಾಲೇಜು ಇತ್ತು. ಅಲ್ಲಿಗೆ ಪರ್ಯಾಯ ಸ್ವಾಮಿಗಳು ಹೋಗುತ್ತಿದ್ದರು. ಆಚಾರ್ಯ ಮಧ್ವರ ಸಹೋದರ ವಿಷ್ಣುತೀರ್ಥರ “ಸನ್ಯಾಸ ಪದ್ಧತಿ’ ಗ್ರಂಥದಲ್ಲಿ ಚಾತುರ್ಮಾಸ್ಯ ವ್ರತಕ್ಕೆ ಗಡಿ ಗುರುತು ಉಲ್ಲೇಖವಿದೆ. ಅದರ ಪ್ರಕಾರ ಒಂದು ಯೋಜನಾರ್ಧದ ಅರ್ಧದಷ್ಟು ದೂರ ಹೋಗಬಹುದು ಎಂದಿದೆ. ಅದು ಎರಡು ತಿಂಗಳಿನ ವ್ರತವಾದರೆ, ಪರ್ಯಾಯ ಎರಡು ವರ್ಷಗಳ ವ್ರತ. ಇದರ ಪ್ರಕಾರ 8 ಕಿ.ಮೀ.ನ ನಾಲ್ಕನೇ ಒಂದು ಭಾಗ= 2 ಕಿ.ಮೀ. ದೂರ ಹೋಗಬಹುದು. ಆದ್ದರಿಂದ ಎಂಜಿಎಂ ಕಾಲೇಜಿಗೆ ಹೋಗಬೇಕೋ ಬೇಡವೋ ಎಂಬ ಬಗ್ಗೆ ವಿಚಾರ ಮಾಡುತ್ತೇನೆ ಎಂದು ತಿಳಿಸಿದರು.

ಹಿಂದೂ ವ್ಯಾಖ್ಯೆ ದೊಡ್ಡದು
ವಿಶ್ವ ಹಿಂದೂ ಪರಿಷದ್‌ ಹಿಂದೂ ಶಬ್ದಕ್ಕೆ ಮಾಡಿದ ವ್ಯಾಖ್ಯೆ ಪ್ರಕಾರ ಭಾರತೀಯ ಪ್ರವಾದಿಗಳು ಪ್ರವರ್ತಿಸಿದ ಧರ್ಮಗಳೆಲ್ಲವೂ ಒಳಗೊಳ್ಳುತ್ತವೆ. ಜೈನರು, ಬೌದ್ಧರು, ಲಿಂಗಾಯತರು, ವೀರಶೈವರು ಹೀಗೆ ವೇದವನ್ನು ಒಪ್ಪುವವರು/ ಒಪ್ಪದವರು, ಜಾತಿ ಒಪ್ಪುವವರು/ಒಪ್ಪದವರು ಎಲ್ಲರೂ ಹಿಂದೂ ಧರ್ಮದ ವ್ಯಾಖ್ಯೆಯೊಳಗೆ ಬರು ತ್ತಾರೆ. ಹಿಂದೆ ನಡೆದ ಧರ್ಮ ಸಂಸದ್‌ ಅಧಿವೇಶನವನ್ನು ದಲಾೖ ಲಾಮಾ ಉದ್ಘಾಟಿಸಿದ್ದರು ಎಂದರು.

ಟಾಪ್ ನ್ಯೂಸ್

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.