ಹಾಂಕಾಂಗ್‌ ಓಪನ್‌: ಕಶ್ಯಪ್‌ ಪತನ; ಸಿಂಧು, ಸೈನಾ, ಪ್ರಣಯ್‌ ಮುನ್ನಡೆ


Team Udayavani, Nov 23, 2017, 10:14 AM IST

23-16.jpg

ಕೌಲೂನ್‌: ಭಾರತದ ಶಟ್ಲರ್‌ಗಳಾದ ಪಿವಿ ಸಿಂಧು, ಸೈನಾ ನೆಹ್ವಾಲ್‌ ಮತ್ತು ಎಚ್‌ಎಸ್‌ ಪ್ರಣಯ್‌ ಅವರು ಹಾಂಕಾಂಗ್‌ ಓಪನ್‌ ಸೂಪರ್‌ ಸೀರೀಸ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ದ್ವಿತೀಯ ಸುತ್ತಿಗೇರಿದ್ದಾರೆ. ಇದೇ ವೇಳೆ ಪಾರುಪಳ್ಳಿ ಕಶ್ಯಪ್‌ ಮತ್ತು ವನಿತೆಯರ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ-ಎನ್‌. ಸಿಕ್ಕಿ ರೆಡ್ಡಿ ಸೋತು ಹೊರಬಿದ್ದಿದ್ದಾರೆ.

ದ್ವಿತೀಯ ಶ್ರೇಯಾಂಕದ ಸಿಂಧು 4 ಲಕ್ಷ ಡಾಲರ್‌ ಬಹುಮಾನ ನಿಧಿಯ ಈ ಕೂಟದ ಮೊದಲ ಸುತ್ತಿನಲ್ಲಿ ಹಾಂಕಾಂಗ್‌ನ ಅರ್ಹತಾ ಆಟಗಾರ್ತಿ ಲಿಯುಂಗ್‌ ಯುಯೆಟ್‌ ಯೀ ಅವರನ್ನು 21-18, 21-10 ಗೇಮ್‌ಗಳಿಂದ ಉರುಳಿಸಿದರೆ ಸೈನಾ ಕಠಿನ ಹೋರಾಟದಲ್ಲಿ ಡೆನ್ಮಾರ್ಕ್‌ನ ಮೆಟ್ಟೆ ಪೌಲ್ಸೆನ್‌ ಅವರನ್ನು 21-19, 23-21 ಗೇಮ್‌ಗಳಿಂದ ಕೆಡಹಿದರು.

ವಿಶ್ವ ಚಾಂಪಿಯನ್‌ಶಿಪ್‌ನ ಕಂಚು ವಿಜೇತೆ ಸೈನಾ ಮುಂದಿನ ಸುತ್ತಿನಲ್ಲಿ ಪ್ರಬಲ ಎದುರಾಳಿ ಎಂಟನೇ ಶ್ರೇಯಾಂಕದ ಚೀನದ ಚೆನ್‌ ಯುಫೆಯಿ ಅವರ ಸವಾಲನ್ನು ಎದುರಿಸಲಿದ್ದಾರೆ. 

ಪ್ರಣಯ್‌ ದ್ವಿತೀಯ ಸುತ್ತಿಗೆ
ಪುರುಷರ ಸಿಂಗಲ್ಸ್‌ನಲ್ಲಿ ಪ್ರಣಯ್‌ ಅವರು ಹಾಂಕಾಂಗ್‌ನ ಹು ಯುನ್‌ ಅವರನ್ನು 19-21, 21-17, 21-15 ಗೇಮ್‌ಗಳಿಂದ ಸೋಲಿಸಿದರೆ ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ ಕಶ್ಯಪ್‌ ಮೊದಲ ಸುತ್ತಿನಲ್ಲಿ ಆಘಾತ ಅನುಭವಿಸಿದ್ದಾರೆ. ಒಂದು ತಾಸು ಮತ್ತು 9 ನಿಮಿಷಗಳ ಹೋರಾಟದಲ್ಲಿ ಅವರು ಕೊರಿಯದ ಲೀ ಡಾಂಗ್‌ ಕೆಯುನ್‌ ಅವರಿಗೆ 21-15, 9-21, 20-22 ಗೇಮ್‌ಗಳಿಂದ ಶರಣಾದರು. ಇನ್ನೊಂದು ಪಂದ್ಯದಲ್ಲಿ ಸೌರಭ್‌ ಇಂಡೋನೇಶ್ಯದ ಟಾಮಿ ಸುಜಿಯಾರ್ಟೊ ಅವರಿಗೆ 15-21, 8-21 ಗೇಮ್‌ಗಳಿಂದ ಸುಲಭವಾಗಿ ಸೋತರು.

ವನಿತೆಯರ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ ಮತ್ತು ಸಿಕ್ಕಿ ರೆಡ್ಡಿ ಅವರು ಗೆಲುವು ದಾಖಲಿಸಲು ಶಕ್ತಿಮೀರಿ ಪ್ರಯತ್ನಿಸಿದರು. ಆದರೆ ಚೀನದ ಹುವಾಂಗ್‌ ಡಾಂಗ್‌ಪಿಂಗ್‌ ಮತ್ತು ಲಿ ವೆನ್‌ಮೆಯಿ ಅವರಿಗೆ ಅಂತಿಮವಾಗಿ 21-11, 19-21, 21-19 ಗೇಮ್‌ಗಳಿಂದ ಸೋತು ಹೊರಬಿದ್ದರು.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.