‘ಹೈನುಗಾರಿಕೆಗೆ ಡಾ| ಕುರಿಯನ್ ಕೊಡುಗೆ ಅಪಾರ’
Team Udayavani, Nov 23, 2017, 10:32 AM IST
ಮಹಾನಗರ: ಡಾ| ವರ್ಗೀಸ್ ಕುರಿಯನ್ ಅವರ 96ನೇ ಜನ್ಮದಿನಾಚರಣೆ ಅಂಗವಾಗಿ ಕೇರಳದಿಂದ ಗುಜರಾತಿನ ಆನಂದ್ ತನಕ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಮಂಗಳವಾರ ಬೆಳಗ್ಗೆ ಮಂಗಳೂರಿನ ದ.ಕ. ಹಾಲು ಒಕ್ಕೂಟಕ್ಕೆ ಆಗಮಿಸಿದ್ದು, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ ಸ್ವಾಗತಿಸಿದರು.
ಒಕ್ಕೂಟದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಲ್ಲ ಬೈಕ್ ಸವಾರರನ್ನು ಹೂಗುಚ್ಛ ನೀಡಿ ಸ್ವಾಗತಿಸಿ ಮಾತನಾಡಿದ ಡಾ| ಸತ್ಯನಾರಾಯಣ, ಡಾ| ಕುರಿಯನ್ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಪ್ರತಿಯೊಬ್ಬರು ನೆನಪಿನಲ್ಲಿಡಬೇಕು. ಭಾರತವು ಹಾಲು ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿರುವುದನ್ನು ತಿಳಿಸಿದರು.
ರ್ಯಾಲಿಯನ್ನು ಡ್ರೋಣ್ ಕೆಮರಾ ಮೂಲಕ ಚಿತ್ರೀಕರಿಸಿದ್ದು, ಮುಂದಿನ ದಿನಗಳಲ್ಲಿ ಡಾ| ಕುರಿಯನ್ ಬಗ್ಗೆ ಸಾಕ್ಷ್ಯ ಚಿತ್ರವನ್ನು ಗುಜರಾತ್ ಮಿಲ್ಕ್ ಫೆಡರೇಶನ್ ನಿರ್ಮಾಣ ಮಾಡುವ ವಿಚಾರವನ್ನು ತಿಳಿಸಿದರು.
ವ್ಯವಸ್ಥಾಪಕರಾದ ಜಿ. ರಾಯ್ಕರ್, ಶಿವಶಂಕರ ಸ್ವಾಮಿ, ನಿತ್ಯಾನಂದ ಭಕ್ತ, ಸುಮಾರು 40 ಮಂದಿ ಹಾಲು ಉತ್ಪಾ
ದಕರು, ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು, ಅಧ್ಯಾಪಕರು ಮೊದಲಾದವರು ಉಪಸ್ಥಿತರಿದ್ದರು. ಮಾರುಕಟ್ಟೆ ವಿಭಾಗದ ಹೇಮಶೇಖರಪ್ಪ ಎಸ್.ಪಿ. ಸ್ವಾಗತಿಸಿದರು. ಉಪ ವ್ಯವಸ್ಥಾಪಕ ಲಕ್ಕಪ್ಪ ವಂದಿಸಿದರು. ಕೆ. ಸುಬ್ಬರಾವ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ