ಮನೆ ಸದಸ್ಯರೆಲ್ಲರ ಪ್ರಜ್ಞೆ ತಪ್ಪಿಸಿ ಆಭರಣ ದೋಚಿದ ಕಳ್ಳ ಸ್ವಾಮಿ
Team Udayavani, Nov 23, 2017, 11:51 AM IST
ಆನೇಕಲ್: ಮೂರ್ಛೆ ರೋಗ ಮತ್ತು ಇನ್ನಿತರ ಕಾಯಿಲೆಗಳಿಗೆ ಔಷಧ ನೀಡುವುದಾಗಿ ಹೇಳಿದ ಕಳ್ಳ ಸ್ವಾಮಿ, ಸುಮಾರು 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಿತ್ತಗಾನಹಳ್ಳಿ ಗ್ರಾಮದ ಲಕ್ಷ್ಮೀದೇವಿ ಎಂಬುವವರ ಮನೆಗೆ ಬಂದ ಇಬ್ಬರು ಮಹಿಳೆಯರು, ಮೂರ್ಛೆ ರೋಗ ಇನ್ನಿತರ
ಕಾಯಿಲೆಗಳಿಗೆ ಔಷಧ ನೀಡುವುದಾಗಿ ಹೇಳಿ ಹೋಗಿದ್ದಾರೆ. ನಂತರ ಸ್ವಾಮೀಜಿ ವೇಶದಲ್ಲಿ ಬಂದ ಮತ್ತೂಬ್ಬ ವ್ಯಕ್ತಿ, ಮೂರ್ಛೆ ರೋಗಕ್ಕೆ ಔಷಧ ನೀಡುತ್ತೇನೆ ಮತ್ತು ಮಾಟ ಮಂತ್ರಗಳಿಗೆ ವಿಶೇಷ ಪೂಜೆ ಮಾಡುತ್ತೇನೆ ಎಂದು ಹೇಳಿದ್ದಾನೆ. ಅದರಂಥೆ ಮನೆಯವರು ಪೂಜೆಗೆ ಅವಕಾಶ ನೀಡಿದ್ದು, ಪೂಜೆ ಆರಂಭಿಸಿದ ಕಳ್ಳ ಸ್ವಾಮಿ, ಮನೆಯ
ಸದಸ್ಯರ ಪ್ರಜ್ಞೆ ತಪ್ಪಿಸಿ ಸುಮಾರು 5 ಲಕ್ಷ ರೂ. ಮೌಲ್ಯದ ಚಿನ್ನದ ಆಭರಣಗಳು ಮತ್ತು 15 ಸಾವಿರ ರೂ. ನಗದು ದೋಚಿ ಪರಾರಿಯಾಗಿದ್ದಾನೆ ಎಂದು ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೂರ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?