ಪೊಲೀಸ್‌ ಇಲಾಖೆಗಾಗಿಯೇ ರಾಜ್ಯದಲ್ಲಿ ಪ್ರತ್ಯೇಕ ವಿವಿ


Team Udayavani, Nov 24, 2017, 8:47 AM IST

24-7.jpg

ವಿಧಾನಪರಿಷತ್ತು: ಅಪರಾಧ ಪ್ರಕರಣಗಳ ಪತ್ತೆ ಹಾಗೂ ತನಿಖೆ, ವಿಧಿ ವಿಜ್ಞಾನ ಪ್ರಯೋಗಾಲಯದ ಉನ್ನತೀಕರಣ, ಕಾನೂನು-ಸುವ್ಯವಸ್ಥೆ ನಿರ್ವಹಣೆಯಲ್ಲಿ ಅತ್ಯಾಧುನಿಕ ತಂತ್ರ ಜ್ಞಾನದ ಅಳವಡಿಕೆ ಮತ್ತು ಕಲಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಇಲಾಖೆ ವತಿಯಿಂದ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಗುರುವಾರ ಬಿಜೆಪಿಯ ತಾರಾ ಅನೂರಾಧ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ರೀತಿಯ ವಿಶ್ವವಿದ್ಯಾಲಯ ಪುಣೆ ಮತ್ತಿತರ ಕಡೆ ಇದೆ. ಅಲ್ಲೆಲ್ಲ ಹಿರಿಯ ಅಧಿಕಾರಿಗಳು ಹೋಗಿ ಕಾರ್ಯ ನಿರ್ವಹಣೆ ಬಗ್ಗೆ ಅಧ್ಯಯನ ಮಾಡಿ ಕೊಂಡು ಬಂದಿದ್ದಾರೆ. ವಿವಿಯ ಸ್ಥಾಪನೆ ಕುರಿತು ಮುಂದಿನ ಬಜೆಟ್‌ ವೇಳೆ ಪ್ರಸ್ತಾವನೆ ಮಂಡಿಸಲಾ ಗುವುದು ಎಂದರು. ಅಪರಾಧ ಪ್ರಕರಣಗಳ ತನಿಖೆಗೆ ಮತ್ತು ಪೊಲೀಸ್‌ ವ್ಯವಸ್ಥೆ ನಿರ್ವಹಣೆಗೆ ಸಾಧ್ಯವಿರುವ ಎಲ್ಲ ರೀತಿಯ ಹೊಸ ತಂತ್ರಜ್ಞಾನ ಹಾಗೂ ವಿಧಾನಗಳನ್ನು ಬಳಸಿ 
ಕೊಳ್ಳಲಾಗುತ್ತಿದೆ. 30 ಕೋಟಿ ರೂ. ವೆಚ್ಚದಲ್ಲಿ ಎಫ್‌ಎಸ್‌ ಎಲ್‌ ಉನ್ನತೀಕರಣ ಹಾಗೂ 80 ಕೋಟಿ ರೂ.ವೆಚ್ಚದಲ್ಲಿ
ಕಮಾಂಡ್‌ ಕಂಟ್ರೋಲ್‌ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಪೊಲೀಸ್‌ ಕಾನ್‌ಸ್ಟೆಬಲ್‌ ದರ್ಜೆಯಿಂದ ಐಪಿಎಸ್‌ ವೃಂದದ ಅಧಿಕಾರಿಗಳವರೆಗೆ ಎಲ್ಲ ಸಿಬ್ಬಂದಿಗೆ ಕಾಲ-ಕಾಲಕ್ಕೆ ಸೈಬರ್‌ ಅಪರಾಧಗಳ ತನಿಖೆ, ಅಪರಾಧ ಪ್ರಕರಣಗಳ ವೈಜ್ಞಾನಿಕ ತನಿಖೆ, ಡಿಜಿಟಲ್‌ ಸಾಕ್ಷಗಳ ಸಂಗ್ರಹಣೆ, ಸಂರಕ್ಷಣೆ ಮೊದಲಾದ ವಿಷಯಗಳ ಬಗ್ಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದರು. 

ಸೈಬರ್‌ ಕ್ರೈಂ, ಮೊಬೈಲ್‌ ಫೂರೆನ್ಸಿಕ್‌, ಗುಪ್ತಚರ ಮಾಹಿತಿ ಸಂಗ್ರಹಣೆ ಮತ್ತು ವಿಚಾರಣೆ ತಂತ್ರಗಾರಿಕೆ, ಸಂಚಾರ ನಿರ್ವಹಣೆಯ ಜತೆಗೆ ಆಧುನಿಕ ಅಪರಾಧಗಳ ಪತ್ತೆಗೆ ನೆರ ವಾಗುವಂತಹ ತರಬೇತಿಗಳಿಗೆ ಪೊಲೀಸ್‌ ಸಿಬ್ಬಂದಿ ಮತ್ತು ಆಧಿಕಾರಿಗಳನ್ನು ನಿಯೋಜಿ ಸಲಾಗುತ್ತಿದೆ. ವಿದೇಶದಲ್ಲಿ ನಡೆಯುವ ತರಬೇತಿಗಳಲ್ಲೂ ಪಾಲ್ಗೊಳ್ಳಲು ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಸರ್ಕಾರ
ಅನುಮತಿ ನೀಡುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು. ಈ ವರ್ಷ 7,563 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. 2018-19ರಲ್ಲಿ 4,357 ಹುದ್ದೆಗಳ ಭರ್ತಿಗೆ ಮಂಜೂರಾತಿ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದರು.

ಪೊಲೀಸ್‌ ನೀತಿ ಜಾರಿಗೆ ತನ್ನಿ: ತಾರಾ ಪೊಲೀಸ್‌ ಕೆಲಸಕ್ಕೆ ಸೇರಿ ಸಮಾಜದ ಸೇವೆ ಮಾಡುವ ಕನಸು ಹೊತ್ತು ಬರುವವರಿಗೆ ಹಿರಿಯ ಅಧಿಕಾರಿಗಳ ಮನೆ ಚಾಕರಿ ಮಾಡಿಸುವ ಅನಿಷ್ಠ ಆರ್ಡರ್ಲಿ ಪದ್ಧತಿ ರದ್ದು ಪಡಿಸಿ. ಗೃಹ ಸಚಿವರಾಗಿ ನೀವು ಬೆಂಗಾವಲು ವಾಹನ, ಹೆಚ್ಚುವರಿ ಭದ್ರತಾ ಸಿಬ್ಬಂದಿ, ಶೂನ್ಯ ಸಂಚಾರ ಸೌಲಭ್ಯ ಈ ರೀತಿ ಯಾವುದನ್ನೂ ಬಳಸಿಕೊಳ್ಳುವುದಿಲ್ಲ. ಇದೇ ಆದರ್ಶವನ್ನು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪಾಲಿಸುವಂತೆ ಹೇಳಿ. ಪೊಲೀಸ್‌ ಸಿಬ್ಬಂದಿ ಕಲ್ಯಾಣ ಕಾರ್ಯಕ್ರಮಗಳಿಗೆ ತಾತ್ಕಾಲಿಕ ಯೋಜನೆಗಳನ್ನು ರೂಪಿಸುವುದು ಬಿಟ್ಟು ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪೊಲೀಸ್‌ ನೀತಿ ಜಾರಿಗೆ ತನ್ನಿ ಎಂದು ತಾರಾ ಅನೂರಾಧ ಸಲಹೆ ನೀಡಿದರು.

ಪೀಕ್‌ ಅವರ್ನಲ್ಲಿ ವಾಹನ ತಪಾಸಣೆ ಮಾಡದಂತೆ ಸೂಚನೆ
ವಿಧಾನಪರಿಷತ್ತು: ಸಂಚಾರ ದಟ್ಟಣೆ  ಹೆಚ್ಚಿರುವ ಬೆಳಗ್ಗೆ ಮತ್ತು ಸಂಜೆ ವೇಳೆ (ಪೀಕ್‌ ಅವರ್) ರಸ್ತೆ ಬದಿ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಕಾಂತ ರಾಜು ಮಾತನಾಡಿ, ಪೀಕ್‌ ಅವರ್ಗಳಲ್ಲಿ ಸಂಚಾರ ನಿರ್ವಹಣೆ ಮಾಡುವ ಬದಲು ಪೊಲೀಸರು ವಾಹನ ತಪಾಸಣೆ ಮಾಡುತ್ತಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದರು. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರಿನಲ್ಲಿ ಈ ಸಮಸ್ಯೆ ಹೆಚ್ಚು. ಆದ್ದರಿಂದ ಪೀಕ್‌ ಅವರ್ ಗಳಲ್ಲಿ ವಾಹನ ತಪಾಸಣೆ ಮಾಡದಂತೆ ಸಿಬ್ಬಂದಿಗೆ ಸೂಚನೆ ನೀಡುವಂತೆ ಆಯುಕ್ತರಿಗೆ ನಿರ್ದೇಶನ ನೀಡುತ್ತೇನೆ ಎಂದರು.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.