ಪ್ರತಾಪ್‌ ಸಿಂಹ ವಿರುದ್ಧ ಮೊಕದಮೆಗೆ ನಿರ್ಧಾರ


Team Udayavani, Nov 24, 2017, 9:42 AM IST

24-15.jpg

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ಮತ್ತು ಟ್ವಿಟರ್‌ಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸಿದ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಬಹುಭಾಷಾ ನಟ ಪ್ರಕಾಶ್‌ ರೈ ನಿರ್ಧರಿಸಿದ್ದು, ಈ ಕುರಿತು ನೋಟಿಸ್‌ ಕಳುಹಿಸಿದ್ದಾರೆ. ಜತೆಗೆ, ಫೋಟೋಗಳನ್ನು ಬಳಸಿಕೊಂಡು ಮತ್ತೂಬ್ಬರ ಬಗ್ಗೆ ಹಾಸ್ಯಾಸ್ಪದ ಹೇಳಿಕೆಗಳನ್ನು ಹಾಕಿ ಪ್ರಚಾರ ಪಡೆಯುತ್ತಿದ್ದ ಟ್ರೋಲ್‌ ಗಳ ವಿರುದ್ಧವೂ ಹರಿಹಾಯ್ದಿರುವ ಪ್ರಕಾಶ್‌ ರೈ, “ಜಸ್ಟ್‌ ಆಸ್ಕಿಂಗ್‌’ ಎಂಬ ಹ್ಯಾಷ್‌ಟ್ಯಾಗ್‌ ಹೆಸರಿನಲ್ಲಿ “ಟ್ರೋಲ್‌ ಗೂಂಡಾಗಿರಿ’ ಎಂಬ ಅಭಿಯಾನ ಆರಂಭಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್‌ ಸಿಂಹ ವಿರುದ್ಧ ಹರಿಹಾಯ್ದರಲ್ಲದೆ, “ಹಣಕ್ಕಾಗಿ ನಾನು ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿಲ್ಲ. ತಮ್ಮ ಪ್ರಕಟಣೆಗಳ ಕುರಿತು ಪ್ರತಾಪ್‌ ಸಿಂಹ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಜತೆಗೆ ಟ್ವಿಟರ್‌ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಬೇಕು’ ಎಂದು ಒತ್ತಾಯಿಸಿದರು. ಈ ಮಧ್ಯೆ, “ನನ್ನ ಈ ಹೋರಾಟ ಯಾವುದೇ ಪಕ್ಷ ಅಥವಾ ಗುಂಪಿನ ವಿರುದ್ಧ ಅಲ್ಲ’ ಎಂದೂ ಸ್ಪಷ್ಟಪಡಿಸಿದರು. “ಪ್ರತಾಪ್‌ ಸಿಂಹ ತಮ್ಮ ಟ್ವಿಟರ್‌ ಖಾತೆಯಲ್ಲಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕಟಿಸಿದ್ದು, ರೀಲ್‌ನಲ್ಲಿ ಮಾತ್ರವಲ್ಲದೆ ರಿಯಲ್‌ ಲೈಫ್ನಲ್ಲೂ ಪ್ರಕಾಶ್‌ ರೈ “ಖಳನಾಯಕ’ ಎಂದು ಜರಿದಿದ್ದಾರೆ. 5 ವರ್ಷದ ಮಗನ ಸಾವಿನ ದುಃಖದ ಲ್ಲಿದ್ದ ಹೆಂಡತಿಯನ್ನು ಬಿಟ್ಟು ಡ್ಯಾನ್ಸರ್‌ ಹಿಂದೆ ಓಡಿದ ರೈ, ತನ್ನ ಅನುಕೂಲಕ್ಕೆ ತಕ್ಕಂತೆ ಹೆಸರು ಮತ್ತು ಗುರುತನ್ನು ಬದ ಲಾಯಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ಇಷ್ಟೇ ಅಲ್ಲ, ಹತ್ಯೆಯಾಗಿದ್ದ ಗೌರಿ ಸಾವಿಗೆ ಬರುವ ಮೊದಲು ಯಾರ ಮಗ್ಗುಲಲ್ಲಿ ಮಲಗಿದ್ದೆ ಎಂದು ಬರೆದಿರುವ ಲೇಖನ ಶೇರ್‌ ಮಾಡಿದ್ದಾರೆ. ಇದು ಸರಿಯೇ’ ಎಂದು ಪ್ರಶ್ನಿಸಿದರು.

“ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕ ಎಂದು ನಾನು ಅವರನ್ನು ಪ್ರಶ್ನಿಸುತ್ತಿಲ್ಲ. ದೇಶದ ಪ್ರಜೆಯಾಗಿ ಪ್ರಧಾನಿ ಮೋದಿಗೆ ಪ್ರಶ್ನಿಸಿದ್ದೇನೆ. ಇದನ್ನು ತೀವ್ರವಾಗಿ ಖಂಡಿಸಿ ಅವಹೇಳನಕಾರಿ ಯಾಗಿ ಪೋಸ್ಟ್‌ಗಳನ್ನು ಮಾಡುತ್ತಾರೆ. ಇದು ನನಗೆ ತುಂಬಾ ನೋವು ತಂದಿದೆ. ಹೀಗಾಗಿ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದು, 10 ದಿನಗಳ ಒಳಗೆ ಪ್ರತಾಪ್‌ ಸಿಂಹ ತಮ್ಮ ನೋಟಿಸ್‌ಗೆ ಉತ್ತರ ನೀಡದಿದ್ದಲ್ಲಿ ಕ್ರಿಮಿನಲ್‌ ಮಾನನಷ್ಟ ಪ್ರಕರಣ ದಾಖಲಿಸಿ ಕಾನೂನು ಹೋರಾಟ ನಡೆಸುತ್ತೇನೆ’ ಎಂದು ಎಚ್ಚರಿಸಿದರು.

ರೈ ನೋಟಿಸ್‌ಗೆ ವಾಗ್ಬಾಣ 
ಮೈಸೂರು: “ನಿಮಗೆ ಜನರನ್ನು ಎದುರಿಸುವ ಶಕ್ತಿ ಇದ್ದರೆ ರಾಜಕೀಯಕ್ಕೆ ಬನ್ನಿ, ಯುವಜನತೆ ಬೆಂಬಲ ಯಾರಿಗಿದೆ ಎಂಬುದನ್ನು ಸಾಬೀತುಪಡಿಸೋಣ’ ಇದು ಸಂಸದ ಪ್ರತಾಪ್‌ ಸಿಂಹ ಅವರು ಬಹುಭಾಷಾ ನಟ ಪ್ರಕಾಶ್‌ ರೈ ಅವರಿಗೆ ನೀಡಿದ ಬಹಿರಂಗ ಆಹ್ವಾನ. ತಮ್ಮ ಹೇಳಿಕೆಗಳಿಗೆ ಟ್ರೋಲ್‌ ಮೂಲಕ ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿ ನಟ ಪ್ರಕಾಶ್‌ ರೈ ನೋಟಿಸ್‌ ನೀಡಿರುವುದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಪ್ರತಾಪ್‌ ಸಿಂಹ, “ನಾನು ಐದು ವರ್ಷ ಪತ್ರಿಕೋದ್ಯಮ ಓದಿದ್ದೇನೆ, ನಿಮ್ಮ ನೋಟಿಸ್‌ನಲ್ಲಿ ಯಾವ ಆಕ್ಟ್ ಇದೆ ಹೇಳಿ’ ಎಂದು ಪ್ರಶ್ನಿಸಿದ್ದಾರೆ. “ಪ್ರಕಾಶ್‌ ರೈಗೆ ಜನರನ್ನು ಎದುರಿಸುವ ಶಕ್ತಿ ಇಲ್ಲ, ಇನ್ನು ಬಿಜೆಪಿಯನ್ನು ಎದುರಿಸುವ ಶಕ್ತಿ ಇದೆಯೇ?’ ಎಂದು ಪ್ರಶ್ನಿಸಿದ ಅವರು, ಒಂದೊಮ್ಮೆ ಬಿಜೆಪಿಯನ್ನು ಎದುರಿಸುವ ಶಕ್ತಿ ಇದ್ದರೆ ರಾಜಕೀಯಕ್ಕೆ ಬಂದು ಜನರ ಮುಂದೆ ಮಾತನಾಡಲಿ ಎಂದು ಟೀಕಿಸಿದರು. ತಮಿಳುನಾಡಿನಲ್ಲಿ ಒಂದು ಹೆಸರು, ಕರ್ನಾಟಕದಲ್ಲಿ ಒಂದು ಹೆಸರು ಇಟ್ಟು ಕೊಂಡಿರುವ ನಟ ಪ್ರಕಾಶ್‌ ರೈ ಅವರು ಮೊದಲು ತಮ್ಮ ನಿಜವಾದ ಹೆಸರನ್ನು ಸ್ಪಷ್ಟಪಡಿಸಬೇಕಿದೆ ಎಂದರು.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.