ಡೈರೆಕ್ಟರ್ ಸ್ಪೆಷಲ್‌!


Team Udayavani, Nov 24, 2017, 11:48 AM IST

Kanaka_(174).jpg

ಅತ್ತ ಕಡೆ ದುನಿಯಾ ವಿಜಯ್‌ ಫ್ಯಾಮಿಲಿ, ಇತ್ತ ಕಡೆ ನಿರ್ದೇಶಕ ಆರ್‌.ಚಂದ್ರು ಫ್ಯಾಮಿಲಿ, ಅದರ ಜೊತೆಗೆ ಚಿತ್ರರಂಗದ ಕುಟುಂಬ… ಹೀಗೆ ಕುಟುಂಬಗಳೆಲ್ಲವೂ ಒಟ್ಟಾಗಿ ಸಂಭ್ರಮಿಸಿದ್ದು “ಕನಕ’ ಚಿತ್ರದ ಆಡಿಯೋ ಬಿಡುಗಡೆಯ ವಿಶೇಷ ಎನ್ನಬಹುದು. ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ “ಕನಕ’ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಗರದ ಲಲಿತ್‌ ಅಶೋಕ ಹೋಟೆಲ್‌ನಲ್ಲಿ ನಡೆಯಿತು.

ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲು ನಿರ್ದೇಶಕರುಗಳಾದ ಯೋಗರಾಜ್‌ ಭಟ್‌, ಸೂರಿ ಹಾಗೂ ಶಶಾಂಕ್‌ ಬಂದಿದ್ದರು. ಅವರೆಲ್ಲರೂ ಒಂದೊಂದು ಹಾಡುಗಳನ್ನು ಬಿಡುಗಡೆ ಮಾಡಿದರು. ಇನ್ನು, ದುನಿಯಾ ವಿಜಯ್‌ ಕುಟುಂಬ ಒಂದು ಹಾಡು ಬಿಡುಗಡೆ ಮಾಡಿದರೆ, ಉಳಿದಂತೆ ಯೋಗರಾಜ್‌ ಭಟ್‌, ಸೂರಿ, ಶಶಾಂಕ್‌ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. 

ಚಂದ್ರು ಸಿನಿಮಾಕ್ಕಾಗಿ ಬಡಿದಾಡುವ ಮನುಷ್ಯ ಎಂದು ಭಟ್ರಾ ಹೇಳಿದರೆ, ಚಂದ್ರು ಸಿನಿಮಾವನ್ನು ಪ್ರೀತಿಸುವ ವ್ಯಕ್ತಿ ಎಂದರು ಸೂರಿ. ಇನ್ನು, ಶಶಾಂಕ್‌ ಅವರಿಗೆ ಚಂದ್ರು ಅವರ ಮೇಕಿಂಗ್‌ ಶೈಲಿ ಇಷ್ಟವಂತೆ. ಜೊತೆಗೆ ಯಾವುದೇ ಒಂದು ಜಾನರ್‌ಗೆ ಅಂಟಿಕೊಳ್ಳದೇ, ಎಲ್ಲಾ ತರಹ ಪ್ರಯತ್ನಿಸುತ್ತಾರೆಂದರು ಶಶಾಂಕ್‌. ಆಡಿಯೋ ಬಿಡುಗಡೆಗೆ ಆರ್‌.ಚಂದ್ರು ಊರಾದ ಶಿಡ್ಲಘಟ್ಟದಿಂದಲೂ ಸಾಕಷ್ಟು ಮಂದಿ ಹಿತೈಷಿಗಳು ಬಂದಿದ್ದರು.

ಚಿಕ್ಕಬಳ್ಳಾಪುರ ಶಾಸಕ ಸುಧಾಕರ್‌, “ಚಂದ್ರು ಅವರಿಗೆ ನಾಯಕತ್ವ ಗುಣವಿದೆ. ಅವರು ಬೇಕಾದರೆ ರಾಜಕೀಯಕ್ಕೂ ಬರಬಹುದು’ ಎನ್ನುತ್ತಾ “ಕನಕ’ ಚಿತ್ರಕ್ಕೆ ಶುಭಕೋರಿದರು. ತಾವು ಆಹ್ವಾನಿಸಿದವರೆಲ್ಲಾ ಕಾರ್ಯಕ್ರಮಕ್ಕೆ ಬಂದಿದ್ದರಿಂದ ಆರ್‌.ಚಂದ್ರು ಖುಷಿಯಾಗಿದ್ದರು. “ಇವತ್ತು ಮೂವರು ನಿರ್ದೇಶಕರನ್ನು ಕರೆದು ಅವರಿಂದ ಹಾಡು ಬಿಡುಗಡೆ ಮಾಡಿಸಿ, ಸನ್ಮಾನಿಸಿದ್ದು ಖುಷಿ ಕೊಟ್ಟಿದೆ. ಅವರು ಚಿತ್ರರಂಗಕ್ಕೆ ಬಂದು ಹತ್ತು ವರ್ಷ ಕಳೆದಿದೆ.

ನಾನು ಅವರನ್ನು ನೋಡಿ ಸಾಕಷ್ಟು ಕಲಿತಿದ್ದೇನೆ’ ಎಂದರು. “ದುನಿಯಾ’ ವಿಜಯ್‌ ಕೂಡಾ “ಕನಕ’ ಬಗ್ಗೆ ಮಾತನಾಡಿದರು. ಇನ್ನು, “ಕನಕ’ ಚಿತ್ರದ ಮೂಲಕ ಗಾಯಕ ನವೀನ್‌ ಸಜ್ಜು ಸಂಗೀತ ನಿರ್ದೇಶಕರಾಗಿದ್ದಾರೆ. ತಮಗೆ ಅವಕಾಶ ಕೊಟ್ಟ ವಿಜಯ್‌ ಹಾಗೂ ಚಂದ್ರು ಅವರನ್ನು ಯಾವತ್ತೂ ಮರೆಯಲ್ಲ ಎಂದರು. ಕಾರ್ಯಕ್ರಮದಲ್ಲಿ ಚಿತ್ರದ ಹಾಡು ಹಾಗೂ ಟ್ರೇಲರ್‌ ಪ್ರದರ್ಶಿಸಲಾಯಿತು. ನಾಯಕಿಯರಾದ ಮಾನ್ವಿತಾ ಹಾಗೂ ಹರಿಪ್ರಿಯಾ ಗೈರಾಗಿದ್ದರು. 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.