ಹಾರಾಡಿ ಶಾಲಾ ಹೇಮಂತದ ಸಂಭ್ರಮ


Team Udayavani, Nov 24, 2017, 2:10 PM IST

24-Nov-10.jpg

ಪುತ್ತೂರು: ಸರಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕುಸಿತವಾಗುತ್ತಿದೆ ಎಂಬ ಅಂಕಿ-ಅಂಶ ಇದ್ದರೂ ವರ್ಷಂಪ್ರತಿ ಮಕ್ಕಳ ದಾಖಲಾತಿಯಲ್ಲಿ ಏರಿಕೆ ಕಂಡಿರುವುದಲ್ಲದೇ, ಮಕ್ಕಳ ಶ್ರೇಯೋಭಿವೃದ್ಧಿಗೆ ಪೂರಕ ಕಾರ್ಯಚಟುವಟಿಕೆ ಹಮ್ಮಿಕೊಳ್ಳುತ್ತಿರುವ ಹಾರಾಡಿ ಸರಕಾರಿ ಪ್ರಾಥಮಿಕ ಶಾಲೆ ಪ್ರಗತಿಯ ದಿಶೆಯಲ್ಲಿ ಮಾದರಿಯಾದದು ಎಂದು ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು ಹೇಳಿದರು. 

ಹಾರಾಡಿ ಉನ್ನತ ಹಿ.ಪ್ರಾ.ಶಾಲೆಯಲ್ಲಿ ಗುರುವಾರ ನಡೆದ ಹೇಮಂತದ ಸಂಭ್ರಮ-2017-18ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಗರಸಭೆ ವತಿಯಿಂದ ಶಾಲೆಯ ಮೂಲ ಸೌಕರ್ಯ ಒದಗಿಸಲು ಪೂರ್ಣ ಸಹಕಾರ ನೀಡಿದ್ದು, ಅಗತ್ಯ ಬೇಡಿಕೆಗೆ ಮುಂದೆಯು ಸ್ಪಂದಿಸಲಾಗುತ್ತದೆ ಎಂದು ಅವರು ಹೇಳಿದರು.

ಕಲಿಕೆ ಸ್ವಾಭಾವಿಕ ಪ್ರಕ್ರಿಯೆ
ವಿಶ್ರಾಂತ ಪ್ರಾಂಶುಪಾಲ ಡಾ| ಎಚ್‌. ಮಾಧವ ಭಟ್‌ ಮಾತನಾಡಿ, ಕಲಿಕೆ ಸ್ವಾಭಾವಿಕ ಪ್ರಕ್ರಿಯೆ. ಕಲಿಯುತ್ತಿರುವ ಮಕ್ಕಳಿಗೆ ಅದರ ವೇಗವನ್ನು ಹೆಚ್ಚಿಸುವ, ವಿನ್ಯಾಸವನ್ನು ವೃದ್ಧಿಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕು ಎಂದ ಅವರು, ಮಕ್ಕಳಿಗೆ ಮನೆಯಲ್ಲಿರುವಾಗ ಮನೆಯ, ಶಾಲೆಯಲ್ಲಿರುವಾಗ ಶಾಲೆಯ ಅನುಭವ ಕೊಡುವ ಶಿಕ್ಷಣದ ಅಗತ್ಯವಿದೆ ಎಂದರು.

ಶಿಕ್ಷಕರ ಕೆಲಸ ಪಾಠ ಹೇಳುವುದು ಎಂಬ ಭಾವನೆ ಇದೆ. ಅದು ಅಲ್ಲ. ಹೇಗೆ ಕಲಿಯಬೇಕು ಅನ್ನುವುದನ್ನು ತಿಳಿಸುವುದು. ಪರಿಸ್ಥಿತಿಯನ್ನು ನಿಭಾಯಿಸುವುದು, ಪ್ರತಿ ಸ್ಪಂದಿಸುವುದು ಹೇಗೆ ಎನ್ನುವುದರ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಬೇಕಿದೆ ಎಂದು ಅವರು ವಿಶ್ಲೇಷಿಸಿದರು.

ಸಭಾಧ್ಯಕ್ಷತೆ ವಹಿಸಿದ್ದ ನಗರಸಭೆ ಸದಸ್ಯೆ ಜಯಲಕ್ಷ್ಮೀ ಸುರೇಶ್‌ ಮಾತನಾಡಿ, ಶಾಲಾ ಪ್ರಗತಿಗೆ, ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಉದ್ಯಮಿ ರಮಾನಂದ ನಾಯಕ್‌, ಪ್ರಗತಿ ಎಜುಕೇಶನಲ್‌ ಫೌಂಡೇಶನ್‌ ಸ್ಥಾಪಕಾಧ್ಯಕ್ಷ ಗೋಕುಲ್‌ನಾಥ್‌ ಪಿ.ವಿ ಶುಭಕೋರಿದರು.

ಕ್ಷೇತ್ರ ಸಂಪನ್ಮೂಲ ಕೇಂದ್ರದ ಸವಿತಾ ಜಿ., ಸಿಆರ್‌ಪಿ ನಾರಾಯಣ ಡಿ. ಪುಣಚ, ವಿಜಯ ಕುಮಾರ್‌, ಶಾಲಾ ನಾಯಕಿ ದಿಶಾಪರ್ಲ್ ಮಸ್ಕರೇನ್ಹಸ್‌ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಮುದರ ಎಸ್‌. ವರದಿ ವಾಚಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಪ್ರತಿಮಾ ಯು.ರೈ ಸ್ವಾಗತಿಸಿ, ಶಿಕ್ಷಕ ರಾಮಣ್ಣ ರೈ ವಂದಿಸಿದರು. ಸಹ ಶಿಕ್ಷಕ ಪ್ರಶಾಂತ್‌ ಪಿ.ಎಲ್‌ ನಿರೂಪಿಸಿದರು.

ಶಿಕ್ಷಕರಾದ ಪ್ರಿಯಾ ಕುಮಾರಿ, ಶುಭಲತಾ, ಯಶೋದಾ ಐ., ಲಲ್ಲಿ ಡಿ’ಸೋಜಾ, ವಿಜಯ ಕೆ., ಯುಮುನಾ ಬಿ., ಗಂಗಾವತಿ ಪಿ., ಸರೋಜಿನಿ ಎನ್‌., ಸೆಲಿನ್‌ ಡಿ’ಸೋಜಾ, ಮಹಾಲಕ್ಷ್ಮೀ ಭಟ್‌, ಶುಭಲತಾ ಕೆ., ಅಶ್ವಿ‌ತಾ ಎ.ಎಸ್‌. ಅವರು ವಿವಿಧ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಅನಂತರ ಶಾಲಾ ಮಕ್ಕಳಿಂದ ನೃತ್ಯ ಸಂಭ್ರಮ, ಗಾನ ಸಂಭ್ರಮ, ನಾಟ್ಯ ಸಂಭ್ರಮ, ನಾಟಕ ಸಂಭ್ರಮ ನಡೆಯಿತು.

ಮಕ್ಕಳ ಬಾಲ್ಯ ಕಸಿಯದಿರಿ
ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳಬಾರದು. ಹೆತ್ತವರು ಅಂಕ ಗಳಿಕೆಯ ಹಪಾಹಪಿಕೆಯನ್ನು ಹೇರಬಾರದು. ಮಕ್ಕಳ ಮನಸ್ಸಿನಲ್ಲಿ ಬಲತ್ಕಾರದ ಮನೋಭಾವವನ್ನು ಮೂಡಿಸಿದರೆ, ಅದು ಹೆಮ್ಮರವಾಗಿ ಬೆಳೆದು ಸಮಾಜ ವಿದ್ರೋಹಿಗಳಾಗುವ ಅಪಾಯವಿದೆ. ಮಗು ಸೋತಿದೆ ಎಂದರೆ ಆಗ ಹೆತ್ತವರ ಅಗತ್ಯ ಹೆಚ್ಚು ಬೇಕು ಎಂದರ್ಥ. ಸೋತಾಗ ಹೇಗಿರಬೇಕು ಅನ್ನುವುದನ್ನು ಹೆತ್ತವರು ಕಲಿಸಬೇಕು. ಹಾಗಾಗಿ ಮನೆ ಡೆಮೋಕ್ರಾಟಿಕ್‌ ಸೊಸೈಟಿಯಂತಿರಬೇಕು ಎಂದು ಡಾ| ಎಚ್‌. ಮಾಧವ ಭಟ್‌ ಅಭಿಪ್ರಾಯಿಸಿದರು.

ಶ್ಲಾಘನೀಯ
ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್‌. ಮಾತನಾಡಿ, ಊರಿನ ಸಹಕಾರ, ಶಿಕ್ಷಕರ ಪ್ರಯತ್ನ ಇದ್ದಲ್ಲಿ ಶಾಲೆ ಪ್ರಗತಿ ಕಾಣಲು ಸಾಧ್ಯವಿದೆ. ಸರಕಾರಿ ಶಾಲೆಯಲ್ಲಿಯೇ 400ಕ್ಕೂ ಮಿಕ್ಕಿ ಮಕ್ಕಳಿದ್ದು, ಪ್ರತಿ ವರ್ಷ ಪ್ರಗತಿಯತ್ತ ದಾಪುಗಾಲಿಡುತ್ತಿರುವುದು ಶ್ಲಾಘನೀಯ ಎಂದರು.

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.