ಆದರ್ಶ ಗುಣಗಳಿಂದ ಸಮಾಜ ಬದಲಾವಣೆ


Team Udayavani, Nov 25, 2017, 3:23 PM IST

25-Nov-14.jpg

ನಗರ : ಯೇಸುಕ್ರಿಸ್ತರ ಕರೆಗೆ ಓಗೊಟ್ಟು ಅವರ ಅನುಯಾಯಿ ಆಗುವುದೆಂದರೆ ಅದು ಪಾವಿತ್ರ್ಯದ ಕಡೆಗೆ ಸಾಗಲು ನೀಡಿದ ಆಹ್ವಾನ. ಅದರಂತೆ ಯೇಸು ಕ್ರಿಸ್ತರ ಆದರ್ಶ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜದಲ್ಲಿ, ಕುಟುಂಬದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ಪುತ್ತೂರು ಮಲಂಕರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ| ಡಾ| ಗೀವರ್ಗೀಸ್‌ ಮಾರ್‌ ಮಕಾರಿಯೋಸ್‌ ಹೇಳಿದರು.

ಮಂಗಳೂರು ಕೆಥೋಲಿಕ್‌ ಧರ್ಮಪ್ರಾಂತ್ಯದ ಪುತ್ತೂರು ಸಂತ ಪೌಲರ ವಲಯ ಚರ್ಚ್‌ ಪಾಲನ ಪರಿಷತ್‌ ವತಿಯಿಂದ ಪುತ್ತೂರು ಮಾಯಿದೆ ದೇವುಸ್‌ ಸಭಾಂಗಣದಲ್ಲಿ ನಡೆದ ಪುತ್ತೂರು ವಲಯಕ್ಕೆ ಸಂಬಂಧಪಟ್ಟ ಹತ್ತು ಚರ್ಚ್‌ಗಳ ಕಿರು ಕ್ರೈಸ್ತ ಸಮುದಾಯದ ಪುತ್ತೂರು ವಲಯ ಸಮ್ಮೇಳನದಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದರು.

ಜಾತ್ಯತೀತ ಧರ್ಮದ ಮುಖಮುದ್ರೆ
ಜಾತ್ಯತೀತ ಎಂಬುದು ನಮ್ಮ ಧರ್ಮದ ಮುಖಮುದ್ರೆ. ಸಂವಿಧಾನದಲ್ಲಿ ಬದುಕಲು ಸಾಕಷ್ಟು ಅಡ್ಡಗೋಡೆಗಳಿವೆ. ಮತೀಯ ಚಿಂತನೆ, ಸ್ವಾರ್ಥ ಬದುಕು ಸಮಾಜದಲ್ಲಿ ಉತ್ತಮ ಬದುಕು ಸಾಗಿಸಲು ಕಷ್ಟವೆನಿಸಬಹುದು. ತನ್ನಲ್ಲಿನ ನಂಬಿಕೆ ಹಾಗೂ ಆಚರಣೆಯಲ್ಲಿ ವಿಶೇಷವಾಗಿ ಕ್ರೈಸ್ತ ಧರ್ಮದ ಧರ್ಮಸಭೆ ನಿಂತಿದೆ. ಯಾವುದೇ ಅನೀತಿಯಿಲ್ಲದೆ, ಭ್ರಷ್ಟಾಚಾರವಿಲ್ಲದೆ, ಪಕ್ಷಪಾತ ಮಾಡದೇ ಸೇವೆ ನೀಡುತ್ತಿರುವ ಸಮುದಾಯ ಎಂದರೆ ಅದು ಕ್ರೈಸ್ತ ಸಮುದಾಯ. ಧರ್ಮಸಭೆಯ ಪ್ರತಿ ಕುಟುಂಬಗಳು ಯೇಸುಕ್ರಿಸ್ತರ ಬದುಕಿನಂತೆ ಬಾಳಿದಾಗ ಯೇಸುಕ್ರಿಸ್ತರ ಕೃಪೆಯು ಅನುದಿನವೂ ನಮಗೆ ವರದಾನವಾಗಿ ಪ್ರಾಪ್ತಿಯಾಗಬಲ್ಲುದು ಎಂದರು.

ಇನ್ನಷ್ಟು ಸಕ್ರಿಯ
ಕಿರು ಕ್ರೈಸ್ತ ಸಮುದಾಯದ ಮಂಗಳೂರು ಡಯೋಸಿಸ್‌ನ ಪುತ್ತೂರು ವಲಯದ ಸಂಚಾಲಕ ಹಾಗೂ ಕೊಕ್ಕಡ ಚರ್ಚ್‌ನ ಪ್ರಧಾನ ಧರ್ಮಗರು ವಂ| ಫ್ರೆಡ್ರಿಕ್‌ ಮೊಂತೇರೋ ಮಾತನಾಡಿ, ಕ್ರೈಸ್ತ ಧರ್ಮಸಭೆಯ ಕೆಲ ಚರ್ಚ್‌ಗಳಲ್ಲಿ ಕಿರು ಕ್ರೈಸ್ತ ಸಮುದಾಯ ಸಕ್ರಿಯವಾಗಿಲ್ಲ. ಆದರೆ ಪುತ್ತೂರು ವಲಯಕ್ಕೆ ಸಂಬಂಧಪಟ್ಟ ಚರ್ಚ್‌ ಗಳಲ್ಲಿ ಕಿರು ಕ್ರೈಸ್ತ ಸಮುದಾಯ ಬಹಳ ಸಕ್ರಿಯವಾಗಿದೆ. ಆದ್ದರಿಂದ ಪ್ರತಿಯೊಂದು ಚರ್ಚ್‌ಗಳಲ್ಲಿ ಕಿರು ಕ್ರೈಸ್ತ ಸಮುದಾಯವನ್ನು ಸಕ್ರಿಯಗೊಳಿಸಲು ಪ್ರತಿಯೊಬ್ಬರೂ ಪ್ರಯತ್ನ ಪಡಬೇಕಾಗಿದೆ ಎಂದರು.

ಮಾಯಿದೆ ದೇವುಸ್‌ ಚರ್ಚ್‌ನ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆ.ಪಿ. ರೊಡ್ರಿಗಸ್‌, ಧರ್ಮಭಗಿನಿಯರ ಪರವಾಗಿ ಭಗಿನಿ ಮೋನಿಕಾ ಉಪಸ್ಥಿತರಿದ್ದರು.

ಪಂಜ ಚರ್ಚ್‌ನ ಧರ್ಮಗುರು ವಂ| ಅನಿಲ್‌ ಡಿ’ಮೆಲ್ಲೋ, ಸುಳ್ಯ ಚರ್ಚ್‌ನ ಧರ್ಮಗುರು ವಂ| ವಿನ್ಸೆಂಟ್‌ ಡಿ’ಸೋಜಾ, ಸಂಪಾಜೆ ಚರ್ಚ್‌ನ ಧರ್ಮಗುರು ವಂ| ವಿನ್ಸೆಂಟ್‌ ಅನಿಲ್‌ ಮಿನೇಜಸ್‌, ನಿಡ್ಪಳ್ಳಿ ಚರ್ಚ್‌ನ ಧರ್ಮಗುರು ಜೋನ್‌ ಡಿ’ಸೋಜಾ, ಮರೀಲ್‌ ಸೆಕ್ರೇಡ್‌ ಹಾರ್ಟ್‌ ಚರ್ಚ್‌ನ ಧರ್ಮಗುರು ವಂ| ಫ್ರಾನ್ಸಿಸ್‌ ಅಸ್ಸಿಸಿ ಡಿ’ಅಲ್ಮೇಡ, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ವಂ| ವಿಜಯ್‌ ಲೋಬೋ, ಫಿಲೋಮಿನಾ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ವಂ| ರಿತೇಶ್‌ ರೊಡ್ರಿಗಸ್‌ ಮೊದಲಾದವರು ಉಪಸ್ಥಿತರಿದ್ದರು.

ಕೊಕ್ಕಡ ಚರ್ಚ್‌ ಸಹಾಯಕ ಧರ್ಮಗುರು ವಂ| ಸ್ಟ್ಯಾನಿ ಫೆರ್ನಾಂಡಿಸ್‌ ನೇತೃತ್ವದಲ್ಲಿ ಪ್ರಾರ್ಥಿಸಿದರು. ಪುತ್ತೂರು ವಲಯದ ಹಾಗೂ ಮಾಯಿದೆ ದೇವುಸ್‌ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಆಲ್ಫ್ರೆಡ್  ಜಾನ್‌ ಪಿಂಟೋ ಸ್ವಾಗತಿಸಿ, ಮಾಯಿದೆ ದೇವುಸ್‌ ಚರ್ಚ್‌ನ ಕಿರು ಕ್ರೈಸ್ತ ಸಮುದಾಯದ ಸಂಚಾಲಕ ತೋಮಸ್‌ ಲೂವಿಸ್‌ ವಂದಿಸಿದರು. ಬನ್ನೂರು ಸಂತ ಅಂತೋನಿ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಪ್ರಶಾಂತ್‌ ಫೆರ್ನಾಂಡಿಸ್‌ ಸಮ್ಮಾನಿತ ಧರ್ಮಾಧ್ಯಕ್ಷರ ಸಮ್ಮಾನ ಪತ್ರವನ್ನು ವಾಚಿಸಿದರು. ವಲಯ ಕಾರ್ಯದರ್ಶಿ ಇನಾಸ್‌ ಗೊನ್ಸಾಲ್ವಿಸ್‌ ಬನ್ನೂರು ನಿರೂಪಿಸಿದರು.

ಸಾಕಷ್ಟು ಬದಲಾವಣೆ
ಕೆಲರಾಯಿ ಚರ್ಚ್‌ನ ಪ್ರಧಾನ ಧರ್ಮಗುರು ವಂ| ಜೋಕಿಂ ಫೆರ್ನಾಂಡಿಸ್‌ ಮಾತನಾಡಿ, ಕಿರು ಕ್ರೈಸ್ತ ಸಮುದಾಯವು ಅಸ್ತಿತ್ವಕ್ಕೆ ಬಂದ ಮೇಲೆ ಧರ್ಮಸಭೆಯಲ್ಲಿ ಹಾಗೂ ಧರ್ಮಸಭೆಯ ಕ್ರೈಸ್ತ ವಿಶ್ವಾಸಿಗಳಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ಕಿರು ಕ್ರೈಸ್ತ ಸಮುದಾಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಬಳಿಕ ಕ್ರೈಸ್ತ ವಿಶ್ವಾಸಿ ಭಕ್ತರಲ್ಲಿ ಪ್ರಬುದ್ಧತೆ ಬೆಳೆದಿದೆ. ಮಾತ್ರವಲ್ಲ ಯೇಸುಕ್ರಿಸ್ತರ ಸಾಕ್ಷಿಗಳಾಗಿ ಬೆಳೆಯಲು ಸಾಧ್ಯವಾಗಿದೆ ಎಂದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.