“ಅತಿರಥ’ ಚಿತ್ರ ಪ್ರದರ್ಶನಕ್ಕೆ ಹಿಂದೂ ಸಂಘಟನೆಗಳ ಅಡ್ಡಿ
Team Udayavani, Nov 26, 2017, 5:01 PM IST
“ಆ ದಿನಗಳು’ ಚೇತನ್ ನಟಿಸಿರುವ “ಅತಿರಥ’ ಚಿತ್ರಕ್ಕೆ ಈಗ ಧರ್ಮ ವಿವಾದ ಅಂಟಿಕೊಂಡಿದೆ. ಅದು ಹಿಂದೂ ಧರ್ಮ. ಹೌದು, ಚೇತನ್ ನಟಿಸಿರುವ “ಅತಿರಥ’ ಚಿತ್ರ ಶುಕ್ರವಾರ ತೆರೆಕಂಡಿದೆ. ಈಗ ಆ ಚಿತ್ರವನ್ನು ಪ್ರದರ್ಶನ ಮಾಡಬಾರದೆಂದು ಕೆಲ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಅದಕ್ಕೆ ಕಾರಣ ಚೇತನ್ ಹಿಂದೂ ವಿರೋಧಿ ಎಂಬುದು ಸಂಘಟನೆಗಳು ಕೊಡುತ್ತಿರುವ ಕಾರಣ.
ನಟ ಚೇತನ್ ಹಿಂದೂ ವಿರೋಧಿಯಾಗಿದ್ದು, ಹಿಂದೂ ಧರ್ಮದ, ಸ್ವಾಮೀಜಿಗಳ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಹಾಗಾಗಿ, ಅವರ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕೊಡಬಾರದು ಎಂದು ಕೆಲ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ತಮ್ಮ ಸಿನಿಮಾಕ್ಕೆ ಧರ್ಮ ತಳುಕು ಹಾಕಿಕೊಂಡು ಸಿನಿಮಾಕ್ಕೆ ಧಕ್ಕೆ ತರುವ ಹಾಗೂ ತಮ್ಮನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಬಗ್ಗೆ ಚೇತನ್ ಮಾತನಾಡಿದ್ದಾರೆ.
“ನಾನು ಹಿಂದೂ ಧರ್ಮದ ವಿರೋಧಿಯಲ್ಲ. ಹಿಂದೂ ಧರ್ಮದ ಬಹುಮುಖ್ಯತೆಯ ಬಗ್ಗೆ ನನಗೆ ಅಪಾರ ಗೌರವವಿದೆ. ಶಾಲಾ ದಿನಗಳಲ್ಲಿ ರಾಮಾಯಣ, ಮಹಾಭಾರತ ಪಾತ್ರಗಳ ಬಗ್ಗೆ ತಿಳಿದುಕೊಂಡು ಅದನ್ನು ಏಕಪಾತ್ರ ಅಭಿನಯ ಮಾಡಿ ತೋರಿಸಿದ್ದೇವೆ. ಹಿಂದೂ ಧರ್ಮದ ವೈವಿಧ್ಯತೆ, ಸಾಮರಸ್ಯ ನನಗೆ ಇಷ್ಟ. ಆದರೆ, ಹಿಂದುತ್ವದ ಹೆಸರಿನಲ್ಲಿ ನಡೆಸುತ್ತಿರುವ ಹಿಂಸೆಯ, ದಬ್ಟಾಳಿಕೆಯ ವಿರೋಧಿ ನಾನು.
ಅದು ಕೇವಲ ಹಿಂದೂ ಧರ್ಮವಲ್ಲ, ಇಸ್ಲಾಂ ಆಗಲೀ ಯಾವುದೇ ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸೆಯನ್ನು ನಾನು ವಿರೋಧಿಸುತ್ತೇನೆ. ಇದು ಸಂವಿಧಾನ ವಿರೋಧಿ ಚಟುವಟಿಕೆ. ಹಿಂಸೆ ಭಾರತದ ಕಲ್ಪನೆಗೆ ವಿರುದ್ಧವಾದುದು. ನಾನು ಹಿಂಸೆಯನ್ನು ವಿರೋಧಿಸುತ್ತಲೇ ಬಂದವನು. ಸಮಾನತೆ, ಸೌಹಾರ್ದತೆಯ ಕನಸು ಕಂಡವನು. ಇತ್ತೀಚೆಗೆ ಚಾಮರಾಜ ನಗರದಲ್ಲಿ ಕೆಲ ಸಂಘಟನೆ ಸಿನಿಮಾದ ಪ್ರದರ್ಶನಕ್ಕೆ ಅಡ್ಡಿಪಡಿಸಿದೆ.
ಹಿಂದುತ್ವದ ಹೆಸರಿನಲ್ಲಿ ಗೂಂಡಾಗಿರಿ ಮಾಡಲು ಹೊರಟಿದೆ. ನನ್ನ ವಿಚಾರಧಾರೆಗಳ ಬಗ್ಗೆ ಸಮಸ್ಯೆ ಇದ್ದರೆ ಆ ಬಗ್ಗೆ ಚರ್ಚೆ ಮಾಡುವ ಅವಕಾಶ ಈ ಸಂವಿಧಾನದಲ್ಲಿ ಇದೆ. ಅದು ಬಿಟ್ಟು ಓಡ್ತಾ ಇರೋ ಸಿನಿಮಾಕ್ಕೆ ಅಡ್ಡಿಪಡಿಸಿ ನಿರ್ಮಾಪಕರಿಗೆ ತೊಂದರೆ ಕೊಡೋದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ. ಆ ಸಂಘಟನೆಗೆ ಸಂಬಂಧಿಸಿದ ಪಕ್ಷ ಕೂಡಾ ಆ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಮುಂದೇನು ಮಾಡಬೇಕೆಂದು ಚರ್ಚಿಸುತ್ತೇವೆ’ ಎನ್ನುತ್ತಾರೆ ಚೇತನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.