ಇನ್ನಿಂಗ್ಸ್‌ ಮುನ್ನಡೆಗಾಗಿ ರೈಲ್ವೇಸ್‌ ಹೋರಾಟ


Team Udayavani, Nov 27, 2017, 12:16 PM IST

27-24.jpg

ಹೊಸದಿಲ್ಲಿ: ರಣಜಿ ಟ್ರೋಫಿ ಕ್ರಿಕೆಟ್‌ ಕೂಟದ ಅಂತಿಮ ಲೀಗ್‌ ಪಂದ್ಯದಲ್ಲಿ ವಿನಯ್‌ ಕುಮಾರ್‌ ನೇತೃತ್ವದ ಕರ್ನಾಟಕ ಪಡೆ ನೀಡಿರುವ ಸವಾಲಿಗೆ ರೈಲ್ವೇಸ್‌ ದಿಟ್ಟ ಉತ್ತರ ನೀಡುತ್ತಿದೆ. ದ್ವಿತೀಯ ದಿನದಾಟದ ಅಂತ್ಯಕ್ಕೆ ರೈಲ್ವೇಸ್‌ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟಿಗೆ 241 ರನ್‌ ಗಳಿಸಿದೆ. ರೈಲ್ವೇಸ್‌ ಇನ್ನಿಂಗ್ಸ್‌ ಮುನ್ನಡೆ ಪಡೆಯಬೇಕಾದರೆ ಇನ್ನು ಉಳಿದ 6 ವಿಕೆಟ್‌ನಲ್ಲಿ 194 ರನ್‌ ಬಾರಿಸಬೇಕಾಗಿದೆ.

ಮೊದಲ ದಿನದ ಅಂತ್ಯಕ್ಕೆ ಕರ್ನಾಟಕ 6 ವಿಕೆಟ್‌ಗೆ 355 ರನ್‌ ಬಾರಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿತ್ತು. ರವಿವಾರ ಬ್ಯಾಟಿಂಗ್‌ ಮುಂದುವರಿಸಿದ ಕರ್ನಾಟಕ ತನ್ನ ಮೊತ್ತವನ್ನು 434 ರನ್ನಿಗೆ ವಿಸ್ತರಿಸಿತು. ಶ್ರೇಯಸ್‌, ಮಿಥುನ್‌ ವೇಗದ ಆಟ: ಒಂದು ಹಂತದಲ್ಲಿ ಕರ್ನಾಟಕ ತಂಡ 9 ವಿಕೆಟ್‌ಗೆ 388 ರನ್‌ ಬಾರಿಸಿ ಇನ್ನೇನು 400 ಗಡಿ ದಾಟುವುದು ಅನುಮಾನದಲ್ಲಿತ್ತು. ಆದರೆ ಶ್ರೇಯಸ್‌ ಗೋಪಾಲ್‌ ಮತ್ತು ಅಭಿಮನ್ಯು ಮಿಥುನ್‌ ಅಂತಿಮ ವಿಕೆಟಿಗೆ 46 ರನ್‌ಗಳ ಜತೆಯಾಟ ನೀಡಿದರು. ಆದರೆ ಮಿಥುನ್‌ ಅವರನ್ನು ಔಟ್‌ ಮಾಡುವ ಮೂಲಕ ಅಮಿತ್‌ ಮಿಶ್ರಾ ಈ ಜೋಡಿಯನ್ನು ಬೇರ್ಪಡಿಸಿದರು. ಶ್ರೇಯಸ್‌ 65 ಎಸೆತದಲ್ಲಿ ಅಜೇಯ 44 ರನ್‌ ಬಾರಿಸಿದರು. ಮಿಥುನ್‌ 30 ಎಸೆತದಲ್ಲಿ 31 ರನ್‌ ಬಾರಿಸಿ ಔಟ್‌ ಆದರು.

ಆರಂಭದಲ್ಲಿ ಎಡವಿದ ರೈಲ್ವೇಸ್‌: ಇನ್ನಿಂಗ್ಸ್‌ ಆರಂಭಿಸಿದ ರೈಲ್ವೇಸ್‌ಗೆ ಕರ್ನಾಟಕ ಬೌಲರ್‌ಗಳು ಆರಂಭದಲ್ಲಿಯೇ ಆಘಾತ ನೀಡಿದ್ದರು. ಶಿವಕಾಂತ್‌ ಶುಕ್ಲಾ (28 ರನ್‌), ಮ್ರುನಲ್‌ ದೇವಧರ್‌ (7 ರನ್‌), ಪ್ರಥಮ್‌ ಸಿಂಗ್‌ (35 ರನ್‌), ನಿತಿನ್‌ ಭಿಲ್ಲೆ (7 ರನ್‌) ಅಲ್ಪ ಮೊತ್ತಕ್ಕೆ ವಿಕೆಟ್‌ ಕಳೆದುಕೊಂಡು ಪೆವಿಲಿಯನ್‌ ಸೇರಿದರು. ಈ ಹಂತದಲ್ಲಿ ತಂಡದ ಮೊತ್ತ 4 ವಿಕೆಟಿಗೆ 83 ರನ್‌. ಮಿಥುನ್‌ ಮತ್ತು ಕೆ.ಗೌತಮ್‌ ತಲಾ 2 ವಿಕೆಟ್‌ ಪಡೆದು ಭರ್ಜರಿ ಆಘಾತ ನೀಡಿದ್ದರು.

ರೈಲ್ವೇಸ್‌ ಹಳಿ ಹತ್ತಿಸಿದ ಘೋಷ್‌, ರಾವತ್‌: ಹಳಿ ತಪ್ಪಿದ ರೈಲ್ವೇಸ್‌ ತಂಡವನ್ನು ಪುನಃ ಹಳಿಗೆ ತಂದ ಕೀರ್ತಿ ಅರಿಂದಮ್‌ ಘೋಷ್‌ ಮತ್ತು ಮಹೇಶ್‌ ರಾವತ್‌ಗೆ ಸೇರುತ್ತದೆ. 5ನೇ ವಿಕೆಟಿಗೆ ಈ ಜೋಡಿ ಕರ್ನಾಟಕ ಬೌಲರ್‌ಗಳಿಗೆ ದಿಟ್ಟ ಪ್ರತ್ಯುತ್ತರ ನೀಡಿದರು. ಆರಂಭದಲ್ಲಿ ನಿಧಾನವಾಗಿ ಆಡಿದ ಈ ಜೋಡಿ ಅನಂತರ ರನ್‌ ವೇಗವನ್ನು ಹೆಚ್ಚಿಸಿದರು. 

ಅಂತಿಮವಾಗಿ ಈ ಜೋಡಿ 158 ರನ್‌ಗಳ ಜತೆಯಾಟ ಆಡಿ 3ನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಘೋಷ್‌ 133 ಎಸೆತದಲ್ಲಿ 10 ಬೌಂಡರಿ, 2 ಸಿಕ್ಸರ್‌ ಸೇರಿದಂತೆ ಅಜೇಯ 70 ರನ್‌ ಬಾರಿಸಿದ್ದಾರೆ. ರಾವತ್‌ 97 ಎಸೆತದಲ್ಲಿ 10 ಬೌಂಡರಿ, 2 ಸಿಕ್ಸರ್‌ ಸೇರಿದಂತೆ ಅಜೇಯ 86 ರನ್‌ ಬಾರಿಸಿದ್ದಾರೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.