ಆಸ್ಪತ್ರೆ ಬಿಲ್‌ ಬಾಕಿ: ಮಹಿಳೆ ಒತ್ತೆ; 7 ವರ್ಷದ ಮಗನಿಂದ ಭಿಕ್ಷೆ


Team Udayavani, Nov 28, 2017, 11:50 AM IST

Child-beggar-700.jpg

ಪಟ್ನಾ : ಬಿಲ್‌ ಪಾವತಿಸದ ಕಾರಣಕ್ಕೆ ಆಸ್ಪತ್ರೆ ಅಧಿಕಾರಿಗಳು ಒತ್ತೆ ಇರಿಸಿಕೊಂಡಿರುವ ತನ್ನ ತಾಯಿಯ ಮೆಡಿಕಲ್‌ ಬಿಲ್‌ ಪಾವತಿಸಲು ಆಕೆಯ 7 ವರ್ಷ ಪ್ರಾಯದ ಮಗ ಇಲ್ಲಿನ ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದಾನೆ.

31 ವರ್ಷ ಪ್ರಾಯದ ಗರ್ಭಿಣಿ ಲಲಿತಾ ದೇವಿ ಕಳೆದ ವಾರ ಮೃತ ಮಗವನ್ನು ಹೆತ್ತಿದ್ದಳು. ಆಸ್ಪತ್ರೆಯವರು ಆಕೆಯ ಹೆರಿಗೆ – ಚಿಕಿತ್ಸೆಗೆ ಸಂಬಂಧಿಸಿ 70,000 ರೂ. ಬಿಲ್‌ ಮಾಡಿದ್ದರು. ಬಿಲ್‌ ಪಾವತಿಸದೆ ಮಹಿಳೆಯನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಆಕೆಯನ್ನು ಆಸ್ಪತ್ರೆ ಅಧಿಕಾರಿಗಳು ಒತ್ತೆ ಇರಿಸಿಕೊಂಡಿದ್ದರು. 

ತುಂಬು ಗರ್ಭಿಣಿ ಲಲಿತಾ ದೇವಿಯನ್ನು ಆಕೆಯ ಮನೆಯವರು ಇಲ್ಲಿನ ಮಾ ಶೀತಲಾ ಎಮರ್ಜೆನ್ಸಿ ಹಾಸ್ಪಿಟಲ್‌ ಪ್ರೈವೇಟ್‌ ಲಿಮಿಟೆಡ್‌ಗೆ ಏಜಂಟ್‌ ಒಬ್ಬರ ಮೂಲಕ ಸೇರಿಸಿದ್ದರು. ಆಸ್ಪತ್ರೆಯವರು ಆಕೆಗೆ 1.5 ಲಕ್ಷ ರೂ. ಬಿಲ್‌ ಮಾಡಿದ್ದರು. ಅನಂತರ ಇದನ್ನು 70,000 ರೂ.ಗೆ ಇಳಿಸಿದ್ದರು.

ಲಲಿತಾ ದೇವಿಯನ್ನು ಆಸ್ಪತ್ರೆಗೆ ಸೇರಿಸುವಾಗ ಏಜಂಟ್‌, ಆಕೆಯ ಪತಿ ನಿರ್ಧನ್‌ ರಾಮ್‌ ಗೆ ಕೇವಲ 25,000 ರೂ. ಪಾವತಿಸಿದರಾಯಿತು ಎಂದಿದ್ದ.

ಅಂತೆಯೇ ನಿರ್ಧನ್‌ ರಾಮ್‌ ತನ್ನಲ್ಲಿದ್ದ ಹಣವನ್ನೆಲ್ಲ ಒಟ್ಟುಗೂಡಿಸಿ ಹೇಗೋ 25,000 ರೂ. ಠೇವಣಿ ಇರಿಸಿದ್ದ. ಆದರೆ 70,000 ರೂ. ಪಾವತಿಸದೆ ಲಲಿತಾ ದೇವಿಯನ್ನು ಬಿಡುಗಡೆ ಮಾಡಲಾಗದು ಎಂದು ಆಸ್ಪತ್ರೆ ಅಧಿಕಾರಿಗಳು ಆಕೆಯನ್ನು ಒತ್ತೆ ಇರಿಸಿಕೊಂಡರು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ನಿರ್ಧನ್‌ ರಾಮ್‌ ನ 7 ವರ್ಷದ ಮಗ ಈಗ ತಂದೆಗೆ ಆಸ್ಪತ್ರೆ ಬಿಲ್‌ ಪಾವತಿಸಲು ನೆರವಾಗುವುದಕ್ಕಾಗಿ ಪಟ್ನಾದ ರಸ್ತೆಗಳಲ್ಲಿ ಭಿಕ್ಷೆ ಎತ್ತತ್ತಿದ್ದಾನೆ ಎಂದವರು ಹೇಳಿದರು. 

ಬಾಲಕನು ನಗರದ ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿರುವುದನ್ನು ಮಾಧ್ಯಮದವರು ಕಂಡು ವರದಿ ಮಾಡಿದರು. ಆ ಸಂದರ್ಭದಲ್ಲಿ ಮಾಧೇಪುರ ಸಂಸದ ಪಪ್ಪು ಯಾದವ್‌ ಮಧ್ಯ ಪ್ರವೇಶಿಸಿ ಬಾಲಕನ ತಾಯಿಯನ್ನು ಆಸ್ಪತ್ರೆಯಿಂದ ಬಿಡಿಸಿದರು. ಮಾತ್ರವಲ್ಲದೆ ಲಲಿತಾ ದೇವಿಗೆ 10,000 ರೂ. ಪರಿಹಾರವನ್ನು ಕೊಡುವಂತೆ ಆಸ್ಪತ್ರೆ ಅಧಿಕಾರಿಗಳಿಗೆ ಹೇಳಿ, ಆಕೆಯನ್ನು ಎಂಬುಲೆನ್ಸ್‌ನಲ್ಲಿ ಆಕೆಯ ಮನೆಗೆ ತಲುಪಿಸಿದರು. 

ಪೊಲೀಸರು ಆಸ್ಪತ್ರೆ ಆಡಳಿತೆ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.