ಅಲ್ಪಸಂಖ್ಯಾತರಿಗಿಲ್ಲ ರಕ್ಷಣೆ: ವರ್ತೂರು


Team Udayavani, Nov 28, 2017, 2:22 PM IST

R-1.jpg

ಮುದ್ದೇಬಿಹಾಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಿಪ್ಪು ಜಯಂತಿ ಬೇಕು. ಆದರೆ ಮೆರವಣಿಗೆ ಬೇಡ ಎಂದರೆ
ಹೇಗೆ? ಇದಕ್ಕಾಗಿ ಅವರು ತಲೆತಗ್ಗಿಸಬೇಕು. ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅಹಿಂದ
ಮುಖಂಡ, ಮಾಜಿ ಸಚಿವ, ಕೋಲಾರ ಶಾಸಕ ವರ್ತೂರು ಪ್ರಕಾಶ ಕಿಡಿಕಾರಿದರು.

ಇಲ್ಲಿನ ವಿಬಿಸಿ ಪ್ರೌಢಶಾಲೆ ಮೈದಾನದಲ್ಲಿ ತಾಲೂಕು ಕುರುಬರ ಸಂಘ, ಅಹಿಂದ ಸಂಘಟನೆ ನೇತೃತ್ವದಲ್ಲಿ ಅಹಿಂದ ಸ್ವಾಭಿಮಾನಿ ಸಮಾವೇಶ, ಸಂತಕ ಕನಕದಾಸ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುರುಬ ಸಮಾಜದ ನಾಯಕ ಸಿದ್ದರಾಮಯ್ಯ ಸಿಎಂ ಆಗುವ ಕನಸು ಕಂಡವರಲ್ಲಿ ನಾನೂ ಒಬ್ಬ. ಸಿದ್ದರಾಮಯ್ಯ
ಮುಖ್ಯಮಂತ್ರಿಯಾಗಲು ಕುರುಬ, ಅಹಿಂದ ಸಮಾಜ ಬಳಸಿಕೊಂಡು ಅಧಿಕಾರ ಸಿಕ್ಕ ಮೇಲೆ ಅವರನ್ನೆಲ್ಲಾ
ಕಡೆಗಣಿಸಿದ್ದಾರೆ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಪ್ರತಿನಿಧಿಸುವ ಕಾಂಗ್ರೆಸ್‌ ಪಕ್ಷಕ್ಕೆ ಪರ್ಯಾಯವಾಗಿ ಕುರುಬರ, ಅಹಿಂದ ವರ್ಗದ ನಾಯಕರನ್ನು ಒಗ್ಗೂಡಿಸಿ ನಮ್ಮ ಕಾಂಗ್ರೆಸ್‌ ಹೆಸರಿನ ನೂತನ ಪಕ್ಷ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಡಿ. 19ರಂದು ಬಾಗಲಕೋಟೆ ಜಿಲ್ಲೆ ಕೂಡಲ ಸಂಗಮದಲ್ಲಿ 5 ಲಕ್ಷ ಜನ ಸೇರಿಸಿ ಪಕ್ಷ ಉದ್ಘಾಟಿಸುತ್ತೇನೆ. 50-60 ಕ್ಷೇತ್ರಗಳಲ್ಲಿ ಅಹಿಂದ ವರ್ಗದವರಿಗೆ ಟಿಕೆಟ್‌ ಕೊಡುತ್ತೇನೆ. 2018ರ ಚುನಾವಣೆಯಲ್ಲಿ ನಮ್ಮ ಪಕ್ಷದವರೇ ಹೆಚ್ಚು ಗೆಲ್ಲುತ್ತಾರೆ ಎಂದು ಘೋಷಿಸಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎಚ್‌.ಹಾಲಣ್ಣವರ ಮಾತನಾಡಿ, ಟಿಪ್ಪು ಜಯಂತಿ
ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್‌ಎಸ್‌ ಎಸ್‌, ಬಜರಂಗದಳದವರಿಗೆ ಹೆದರಿದರು. ಅವರು ಅಹಿಂದ
ಮರೆತಿದ್ದಾರೆ ಎಂದು ಟೀಕಿಸಿದರು. ಅಹಿಂದ ಸಂಘಟನೆ ತಾಲೂಕು ಅಧ್ಯಕ್ಷ ಕೃಷ್ಣಾ ಬಿಳೇಭಾವಿ, ದಲಿತ ಮುಖಂಡರಾದ
ಡಿ.ಬಿ. ಮುದೂರ, ಸಿ.ಜಿ. ವಿಜಯಕರ್‌, ಹರೀಶ ನಾಟಿಕಾರ, ಮಲಕೇಂದ್ರಗೌಡ ಪಾಟೀಲ ಮಾತನಾಡಿದರು. ತುಮಕೂರಿನ ನಿಕಿತ್‌ಕುಮಾರ್‌, ರಾಜ್ಯ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ರಾಜ್ಯಾಧ್ಯಕ್ಷ ಹಾಸಿಂಪೀರ ವಾಲಿಕಾರ ಉಪನ್ಯಾಸ ನೀಡಿದರು. ಮಲ್ಲಾಲಿಂಗ ಶ್ರೀ, ಅಗತೀರ್ಥ ಸರೂರಿನ ಗುರು ಶ್ರೀ ಆಶೀರ್ವಚನ ನೀಡಿದರು.

ಮಾಜಿ ಶಾಸಕ ಎಂ.ಎಂ. ಸಜ್ಜನ, ಪ್ರಮುಖರಾದ ಡಾ| ಸಿ.ಎಚ್‌. ನಾಗರಬೆಟ್ಟ, ರಸೂಲ ದೇಸಾಯಿ, ನಿಂಗಪ್ಪಗೌಡ ಬಪ್ಪರಗಿ, ಬಿ.ಕೆ. ಬಿರಾದಾರ, ಮಲ್ಲಿಕಾರ್ಜುನ ಮದರಿ, ಚಿದಾನಂದ ಸೀತಿಮನಿ, ಸಾಯಬಣ್ಣ ಆಲ್ಯಾಳ, ಬಿ.ಜಿ.ಜಗ್ಗಲ್‌, ಎಸ್‌.ಟಿ.ಗೌಡರ, ಮೈಬೂಬ ಕುಂಟೋಜಿ, ಅಲ್ಲಾಭಕ್ಷ ನಮಾಜಕಟ್ಟಿ, ಪರಶುರಾಮ ನಾಲತವಾಡ, ಶೇಖು
ಅಂಬಿಗೇರ, ಬಸವರಾಜ ಗುಳಬಾಳ, ಮಲ್ಲು ಅಪರಾ, ಅಲ್ಲಅಭಕ್ಷ ಢವಳಗಿ, ರಕ್ಷಕ ಜಾನ್ವೇಕರ್‌, ಎಂ.ಎಸ್‌.
ಅಮಲ್ಯಾಳ, ಎಸ್‌.ಬಿ.ಬಾಚಿಹಾಳ, ಎಚ್‌.ವೈ.ಪಾಟೀಲ, ಎನ್‌.ಆರ್‌.ಮೊಕಾಶಿ, ಎಂ.ಆರ್‌.ಮುಲ್ಲಾ, ಅಶೋಕ ಇರಕಲ್ಲ,
ಮುತ್ತಣ್ಣ ಹುಂಡೇಕಾರ ವೇದಿಕೆಯಲ್ಲಿದ್ದರು. ಇದೇ ವೇಳೆ 15ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ಎಸ್‌.ಕೆ.ಹರನಾಳ ಸ್ವಾಗತಿಸಿದರು. ಜಿ.ಎನ್‌.ಹೂಗಾರ, ಟಿ.ಡಿ.ಲಮಾಣಿ, ಎಂ.ಎ.ತಳ್ಳಿಕೇರಿ ನಿರೂಪಿಸಿದರು. ವಕೀಲ
ಎಸ್‌.ಎಸ್‌.ಬಿರಾದಾರ ವಂದಿಸಿದರು. 

ಅದ್ದೂರಿ ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಬನಶಂಕರಿ ದೇವಸ್ಥಾನದಿಂದ ಸಂತ ಕನಕದಾಸರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.