ಹುತಾತ್ಮ ಯೋಧನ ಅಂತ್ಯಕ್ರಿಯೆ
Team Udayavani, Nov 29, 2017, 9:31 AM IST
ಧಾರವಾಡ: ಮಹಾರಾಷ್ಟ್ರದ ಗಡಚಿರೊಲಿ ಅರಣ್ಯದಲ್ಲಿ ನಕ್ಸಲರ ಕೂಂಬಿಂಗ್ ನಡೆಸುವಾಗ ಹುತಾತ್ಮನಾದ ಸಿಆರ್ಪಿಎಫ್ ಯೋಧ ಮನಗುಂಡಿ ಗ್ರಾಮದ ಮಂಜುನಾಥ ಶಿವಲಿಂಗಪ್ಪ ಜಕ್ಕಣ್ಣವರ ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ಮನಗುಂಡಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ನಾಗಪುರದಿಂದ ಪುಣೆವರೆಗೆ ವಿಮಾನ ಮೂಲಕ ಹಾಗೂ ಪುಣೆಯಿಂದ ಧಾರವಾಡವರೆಗೆ ವಾಹನದ ಮೂಲಕ ಯೋಧನ ಪಾರ್ಥಿವ ಶರೀರವನ್ನು ತರಲಾ ಯಿತು. ನಗರದ ಆರ್.ಎನ್.ಶೆಟ್ಟಿ ಮೈದಾನದ ಮುಂಭಾಗ ಬೆಳಗ್ಗೆ 11:00 ಗಂಟೆಗೆ ಆಗಮಿಸಿದ ಪಾರ್ಥಿವ
ಶರೀರವನ್ನು ಜಿಲ್ಲಾಡಳಿತ ಬರಮಾಡಿಕೊಂಡು ಗೌರವ ಸಲ್ಲಿಸಿತು. ಮಧ್ಯಾಹ್ನ 12:00 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.
ನಂತರ ಬೈಕ್ ರ್ಯಾಲಿ ಮೂಲಕ ಮನಗುಂಡಿ ಗ್ರಾಮದ ವರೆಗೆ ಪಾರ್ಥಿವ ಶರೀರ ಕೊಂಡೊಯ್ಯಲಾಯಿತು. ಪಾರ್ಥಿವ ಶರೀರವನ್ನು ಮನೆಯಲ್ಲಿ ಕೆಲ ಕಾಲ ಇರಿಸಿ, ಸಂಪ್ರದಾಯ ಪ್ರಕಾರ ತಂದೆ ಶಿವಲಿಂಗಪ್ಪ, ತಾಯಿ ರತ್ನವ್ವ, ಪತ್ನಿ ಲಲಿತಾ, ಮೂರೂವರೆ ವರ್ಷದ ಮಗ ಗಣೇಶ, ಎರಡು ವರ್ಷದ ಮಗಳು ಲಕ್ಷ್ಮೀ ಸೇರಿ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು. ಗ್ರಾಮದ ಸರಕಾರಿ ಹಿರಿಯ
ಪ್ರೌಢಶಾಲೆ ಆವರಣದಲ್ಲಿ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಗ್ರಾಮದ ಹೊರವಲಯದ ರುದ್ರಭೂಮಿಯಲ್ಲಿ ಸಿಆರ್ ಪಿಎಫ್ ಯೋಧರು ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಸಿಡಿಸಿ ಅಂತಿಮ ನಮನ ಸಲ್ಲಿಸಿದರು.
25 ಲಕ್ಷ ರೂ. ಪರಿಹಾರ ಘೋಷಣೆ
ಬೆಂಗಳೂರು: ನಕ್ಸಲರ ಗುಂಡಿನ ದಾಳಿಗೆ ಹುತಾತ್ಮರಾದ ಧಾರವಾಡ ಜಿಲ್ಲೆ ಮನಗುಂಡಿ ಗ್ರಾಮದ ವೀರ ಯೋಧ ಮಂಜುನಾಥ ಜಕ್ಕನ್ನವರ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ 25 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು
ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ