ಸಮಗ್ರ ಕೃಷಿಯಲ್ಲೂ ಖಾಸಗಿ ಸಹಭಾಗಿತ್ವ
Team Udayavani, Nov 29, 2017, 9:36 AM IST
ಬೆಂಗಳೂರು: ತೋಟಗಾರಿಕೆ ಮಾದರಿಯಲ್ಲೇ ಸಮಗ್ರ ಕೃಷಿಯಲ್ಲೂ ರೈತರ ಗುಂಪುಗಳನ್ನು ರಚಿಸಿ, ಸಾರ್ವಜನಿಕ, ಖಾಸಗಿ ಸಹಭಾಗಿತ್ವದೊಂದಿಗೆ ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಕಾರ್ಯ ಕ್ರಮಕ್ಕೆ ಮಂಗಳವಾರ ಚಾಲನೆ ದೊರೆಯಿತು. ಈ
ಮೂಲಕ ರೈತರ ಉತ್ಪನ್ನಗಳು ನೇರವಾಗಿ ಗ್ರಾಹಕರ ಕೈಗೆಟುಕಲಿವೆ.
ಉತ್ಪಾದನಾ ಪ್ರಮಾಣ ಹೆಚ್ಚಳ ಹಾಗೂ ಮಾರುಕಟ್ಟೆಯಲ್ಲಾಗುವ ಏರಿಳಿತಗಳನ್ನು ತಗ್ಗಿಸಿ, ರೈತರಿಗೆ ಹೆಚ್ಚು ಆದಾಯ ತಂದುಕೊಡುವ ನಿಟ್ಟಿನಲ್ಲಿ ಸಮಗ್ರ ಕೃಷಿಯಲ್ಲಿ ರೈತರ ಗುಂಪುಗಳನ್ನು ರಚಿಸಲು ಕೃಷಿ ಇಲಾಖೆ ಉದ್ದೇಶಿಸಿದೆ. ಈ ವರ್ಷ ಸುಮಾರು 50 ರೈತರ ಗುಂಪುಗಳನ್ನು ರಚಿಸುವ ಗುರಿಯಿದೆ. ಅವುಗಳನ್ನು ಕಂಪೆನಿಗಳೊಂದಿಗೆ ಲಿಂಕ್ ಮಾಡಲಾಗುವುದು.
ನಗರದ ಕ್ಯಾಪಿಟಲ್ ಹೋಟೆಲ್ನಲ್ಲಿ ಮಂಗಳವಾರ ಕೃಷಿ ಇಲಾಖೆ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ “ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರ ಕೃಷಿ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ’ ಕುರಿತ
ಕಾರ್ಯಾಗಾರದಲ್ಲಿ ಕೃಷಿ ಸಚಿವ ಕೃಷ್ಣ ಬೈರೇಗೌಡ ಈ ಯೋಜನೆಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, “ರಾಜ್ಯದಲ್ಲಿರುವ ಸಣ್ಣ ಹಿಡುವಳಿದಾರರು ಕೃಷಿಯಲ್ಲಿ ಸುಧಾರಿತ ಕ್ರಮ ಅನುಸರಿಸಲು ಸಾಧ್ಯವಾಗು
ತ್ತಿಲ್ಲ. ಬೆಳೆ ಕೈಗೆ ಬಂದಾಗ ಮಾರುಕಟ್ಟೆಯಲ್ಲಿ ಅದಕ್ಕೆ ಬೆಲೆ ಇರು ವುದಿಲ್ಲ. ಒಂದೆರಡು ತಿಂಗಳು ದಾಸ್ತಾನು ಮಾಡಿ ಕೊಳ್ಳಲು ಗೋದಾಮು ವ್ಯವಸ್ಥೆ ಇರುವುದಿಲ್ಲ. ಇಂತಹ ಹಲವು ಸಮಸ್ಯೆಗಳಿಂದ ರೈತರಿಗೆ ಲಾಭಾಂಶ ಸಿಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳಿಗೆ ರೈತರ ಸಂಘಟನೆ ಮೂಲಕ ಪರಿಹಾರ ದೊರೆಯಲಿದೆ. ಈ ವರ್ಷ ಇಂತಹ ಸುಮಾರು 50 ರೈತರ ಸಂಘಟನೆ ಅಥವಾ ಗುಂಪುಗಳನ್ನು ರಚಿಸುವ ಗುರಿ ಇದೆ’ ಎಂದು ಹೇಳಿದರು.
ಹೀಗೆ ರಚಿಸಲಾದ ರೈತರ ಗುಂಪುಗಳನ್ನು ಕಂಪೆನಿಗಳು ದತ್ತು ಪಡೆಯುತ್ತವೆ. ಆ ಕಂಪೆನಿಗಳು ಬಿತ್ತನೆಯಿಂದ ಇಳುವರಿ ಹಂತದವರೆಗೂ ಕೃಷಿ ತಜ್ಞರಿಂದ ಸಲಹೆ ನೀಡುತ್ತಾರೆ. ನಂತರ ನೇರ ಮಾರುಕಟ್ಟೆ ವ್ಯವಸ್ಥೆ ಕೂಡ ಇರಲಿದೆ. ಇದರಿಂದ ಉತ್ಪಾದನೆ ಹೆಚ್ಚುವುದರ ಜತೆಗೆ ಬೆಳೆಗೆ ಹೆಚ್ಚು ಬೆಲೆ ಸಿಗಲಿದೆ. ಮಧ್ಯವರ್ತಿಗಳ ಹಾವಳಿ ಕೂಡ ತಪ್ಪಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ