ಅಂಗನವಾಡಿ ಪ್ಲಾಸ್ಟಿಕ್‌ ತ್ಯಾಜ್ಯ ಶೆಡ್‌ಗೆ ವರ್ಗಾಯಿಸಿ


Team Udayavani, Nov 29, 2017, 11:38 AM IST

29-23.jpg

ಮಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ತಿಂಗಳ 3ನೇ ಶನಿವಾರ ಸಂಗ್ರಹವಾಗುವ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಸ್ಥಳೀಯ ಗ್ರಾ.ಪಂ.ನವರು ಅದೇ ದಿನ ಸಂಜೆ ಸ್ಥಳೀಯ ಪ್ಲಾಸ್ಟಿಕ್‌ ಶೆಡ್‌ಗೆ ತಂದು ಸುರಿಯಬೇಕು. ಶೆಡ್‌ನಿಂದ ಮೂರು ತಿಂಗಳಿಗೊಮ್ಮೆ ಪ್ಲಾಸ್ಟಿಕ್‌ ವಿಲೇವಾರಿ ಮಾಡಿ ಬಂದ ಮೊತ್ತದಲ್ಲಿ ಒಂದಂಶವನ್ನು ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಕಾರ್ಯಕ್ಕೆ ಬಳಕೆ ಮಾಡುವಂತೆ ದ.ಕ.ಜಿ.ಪಂ.ಸಿಇಒ ಡಾ| ಎಂ.ಆರ್‌. ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಮಂಗಳವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ವಿಷಯ ಪ್ರಸ್ತಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ ಅವರು, ಜಿಲ್ಲೆಯ 230 ಗ್ರಾ.ಪಂ.ವ್ಯಾಪ್ತಿಯಲ್ಲಿ 1668 ಅಂಗನವಾಡಿ ಕೇಂದ್ರಗಳನ್ನು ಪ್ಲಾಸ್ಟಿಕ್‌ ಸಂಗ್ರಹ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಆದರೆ ಕೆಲವೊಂದು ಅಂಗನವಾಡಿ ಕೇಂದ್ರಗಳಲ್ಲಿ ಸಂಗ್ರಹಗೊಂಡ ಕಸ ಅಲ್ಲೇ ರಾಶಿ ಬಿದ್ದುಕೊಂಡಿದೆ ಎಂಬ ಆರೋಪಗಳಿವೆ. ರೆಖ್ಯಾ ಗ್ರಾ.ಪಂ.ವ್ಯಾಪ್ತಿಯ ಅಂಗನವಾಡಿಯೊಂದಕ್ಕೆ ಭೇಟಿ ನೀಡಿದಾಗ ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಿಇಒ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಅಂಗನವಾಡಿ ಕಾರ್ಯಕರ್ತೆಯರು ಕೂಡ ಕಸ ಸಂಗ್ರಹಕ್ಕೆ ಹಿಂಜರಿಯಬಾರದು ಎಂದು ಸೂಚನೆ ನೀಡಿದರು. 

ಶಿರಾಡಿಯ ಗುಂಡ್ಯ, ಸುಬ್ರಹ್ಮಣ್ಯದ ಇಂಜಾಡಿ, ಅರಿಯಡ್ಕದ ಅಮಿcನಡ್ಕದಲ್ಲಿ ನಿರ್ಮಾಣವಾಗಬೇಕಿದ್ದ ಸಾರ್ವಜನಿಕ ಶೌಚಾಲಯ ವಿಳಂಬ ಕ್ಕೆ ತಾ.ಪಂ.ಅಧಿಕಾರಿಗಳನ್ನು ಸಿಇಒ ತರಾಟೆಗೆ ತೆಗೆದುಕೊಂಡರು. ಶೌಚಾಲಯ, ತ್ಯಾಜ್ಯ ಸಂಸ್ಕರಣಾ ಘಟಕಗಳ ನಿರ್ಮಾಣಕ್ಕೆ ಯಾವುದೇ ಸಮಸ್ಯೆ ಬಂದರೂ ಪರ್ಯಾಯ ವ್ಯವಸ್ಥೆಯ ಕುರಿತು ಯೋಚಿಸಿ. ಆಗಲೂ ಸಮಸ್ಯೆ ಬಂದರೆ ತನ್ನ ಗಮನಕ್ಕೆ ತರುವಂತೆ ಸಿಇಒ ತಿಳಿಸಿದರು. ಪರಿಸರ ರಕ್ಷಣೆ ಸೂಕ್ಷ್ಮತೆಗಳನ್ನು ಅರಿತುಕೊಂಡು ಕೆಲಸ ಮಾಡುವಂತೆ ತಿಳಿಸಿದರು. 

5,490 ಮನೆಗಳಿಗೆ ಶೌಚಾಲಯವಿಲ್ಲ.!
ಸಾಮಾಜಿಕ ಲೆಕ್ಕ ಪರಿಶೋಧನೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 5490 ಮನೆಗಳಿಗೆ ಶೌಚಾಲಯ ಇಲ್ಲ ಎಂಬುದು ವರದಿಯಾಗಿದೆ. ಇದರಲ್ಲಿ 3230 ಮನೆಯ ದಾಖಲೆಗಳು ಸರಿಯಾಗಿದ್ದು ಶೌಚಾಲಯ ನೀಡಲು ಅರ್ಹವಾಗಿವೆ. ಇದರಲ್ಲಿ ಬೆಳ್ತಂಗಡಿಯ 544ರಲ್ಲಿ 404, ಪುತ್ತೂರಿನ 770ರಲ್ಲಿ 77, ಸುಳ್ಯದ 507ರಲ್ಲಿ 136, ಮಂಗಳೂರಿನಲ್ಲಿ 1421ರಲ್ಲಿ 97, ಬಂಟ್ವಾಳದ 579ರಲ್ಲಿ 7 ಶೌಚಾಲಯಗಳು ಮಾತ್ರ ಪೂರ್ತಿಯಾಗಿರುವುದಕ್ಕೆ ಸಿಇಒ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 

ತನಿಖೆ ನಡೆಸಿ ಕ್ರಮ
ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯ ಚಿಕಿತ್ಸೆಯ ಕುರಿತು ಸರಕಾರಿ ವೈದ್ಯರೊಬ್ಬರು ನಿರ್ಲಕ್ಷé ವಹಿಸಿ ದ್ದಾರೆ ಎಂಬ ಆರೋಪಕ್ಕೆ ಏನು ಕ್ರಮಕೈಗೊಳ್ಳಲಾಗಿದೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಸಾಹುಲ್‌ ಹಮೀದ್‌ ಪ್ರಶ್ನಿಸಿದಾಗ, ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಅದನ್ನು ತನಿಖೆ ನಡೆಸಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖಾ ಅಧಿಕಾರಿ ಉತ್ತರಿಸಿದರು. 

ಪರಿಸರ ಎಂಜಿನಿಯರ್‌ ಅವಶ್ಯ
ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಜಿ.ಪಂ.ಗೆ ಪರಿಸರ ಎಂಜಿನಿಯರ್‌ಗಳ ಆವಶ್ಯಕತೆ ಇದೆ. ಹೀಗಾಗಿ ಪಾಲಿಕೆಗೆ ನೀಡುವಂತೆ ಜಿ.ಪಂ.ಗಳಿಗೂ ಪರಿಸರ ಎಂಜಿನಿಯರ್‌ಗಳನ್ನು ನೀಡುವಂತೆ ಸರಕಾರಕ್ಕೂ ಮನವಿ ಮಾಡಲಾಗಿದೆ ಎಂದು ಸಿಇಒ ತಿಳಿಸಿದರು. ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ 5ರಂತೆ ತಲಾ 30 ಲಕ್ಷ ರೂ.ಗಳಲ್ಲಿ ಶೌಚಾಲಯವನ್ನೊಳಗೊಂಡ ಸಮುದಾಯ ಕಾಂಪ್ಲೆಕ್ಸ್‌ ನಿರ್ಮಾಣವಾಗಲಿದ್ದು, ಸ್ಥಳ ಗುರುತಿಸಿ ಪ್ರಸ್ತಾವನೆ ಕಳುಹಿಸಲು ಸೂಚಿಸಿದರು. ಜಾಲೂÕರು ಅಂಗನವಾಡಿ ಕಟ್ಟಡ ಕಾಮಗಾರಿಯ ಕುರಿತು ಸಿಇಒ ಅಸಮಾಧಾನ ವ್ಯಕ್ತ ಪಡಿ ಸಿದರು. ಜತೆಗೆ ಜಿ.ಪಂ. ಅಧ್ಯಕ್ಷರ ವಿವೇಚನಾ ಅನುದಾನದ ಕುಡಿಯುವ ನೀರಿನ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಗಿಸುವಂತೆ ಸೂಚನೆ ನೀಡಲಾಯಿತು.

“ಉದಯವಾಣಿ’ ವರದಿ ಪ್ರಸ್ತಾವ
ಜನಶಿಕ್ಷಣ ಸೇವಾ ಟ್ರಸ್ಟ್‌ನ ಕೃಷ್ಣ ಮೂಲ್ಯ ಮಾತನಾಡಿ, ಕೆಲವೊಂದು ಮನೆಗಳಲ್ಲಿ ಶೌಚಾಲಯವಿಲ್ಲದೇ ಇರುವುದು ಸಾಮಾಜಿಕ ಲೆಕ್ಕ ಪರಿಶೋಧನೆಗೂ ಸಿಕ್ಕಿಲ್ಲ. ಶೌಚಾಲಯ ಇಲ್ಲದೇ ಇರುವುದನ್ನು ಮರೆಮಾಚುವ ಕೆಲಸವೂ ನಡೆಯುತ್ತಿದೆ. ಕನ್ಯಾನ ಭಾಗದಲ್ಲಿ ಅಧಿಕಾರಿಗಳ ಲೆಕ್ಕಕ್ಕೆ ಸಿಗದೇ ಇರುವುದನ್ನು ಸಾಮಾನ್ಯ ಮಹಿಳೆಯೊಬ್ಬರು ಪತ್ತೆ ಹಚ್ಚಿದ್ದಾರೆ. ಈ ಕುರಿತು “ಉದಯವಾಣಿ’ ಪತ್ರಿಕೆಯಲ್ಲೂ ವರದಿ ಪ್ರಕಟಗೊಂಡಿದೆ. ಹೀಗಾಗಿ 12 ವರ್ಷಗಳ ಹಿಂದೆ ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಜಿಲ್ಲೆ ಇನ್ನಾದರೂ ಬಯಲು ಶೌಚ ಮುಕ್ತವಾಗಿಸುವತ್ತ ಎಲ್ಲರೂ ಪ್ರಯತ್ನಿಸಬೇಕಿದೆ ಎಂದು ಅಭಿಪ್ರಾಯ ತಿಳಿಸಿದರು. 

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.