ಸೋಮನಾಥ ಪ್ರವೇಶ: ಹಿಂದುಯೇತರ ರಿಜಿಸ್ಟರ್‌ಗೆ ರಾಹುಲ್‌ ಸಹಿ ?


Team Udayavani, Nov 29, 2017, 7:28 PM IST

Rahul-Somnath1-700.jpg

ಹೊಸದಿಲ್ಲಿ : ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಇಂದು ಬುಧವಾರ ಗುಜರಾತಿನ ಪ್ರಸಿದ್ಧ ಸೋಮನಾಥ ದೇವಾಲಯಕ್ಕೆ ನೀಡಿದ ಭೇಟಿ ಹೊಸ ವಿವಾದವನ್ನು ಸೃಷ್ಟಿಸಿದೆ.

ಸೋಮನಾಥ ದೇವಾಲಯವನ್ನು ಪ್ರವೇಶಿಸುವಾಗ ಸಂದರ್ಶಕರು ಸಹಿ ಮಾಡುವ ರಿಜಿಸ್ಟರ್‌ನಲ್ಲಿ ರಾಹುಲ್‌ ಗಾಂಧಿ ಮಾಡಿರುವ ದಾಖಲಾತಿ ಪುಟದ ಚಿತ್ರವನ್ನು ಕಾಂಗ್ರೆಸ್‌ ಟ್ವಿಟರ್‌ನಲ್ಲಿ  ಅಪ್‌ಲೋಡ್‌ ಮಾಡಿದ್ದು, “ಇದಕ್ಕೆ ಹೊರತಾಗಿ ಈಗ ಚಲಾವಣೆಯಲ್ಲಿರುವ ಬೇರೆ ಯಾವುದೇ ಪ್ರವೇಶ ದಾಖಲಾತಿಗಳು ಕೃತಕವಾಗಿ ಸೃಷ್ಟಿಸಲ್ಪಟ್ಟದ್ದು ‘ ಎಂದು ಸ್ಪಷ್ಟಪಡಿಸಿದೆ. 

ಈ ಬಗ್ಗೆ ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಸ್ಪಷ್ಟೀಕರಣವಾಗಿ ಬರೆದಿರುವುದು ಈ ರೀತಿ ಇದೆ : 

“ಸೋಮನಾಥ ದೇವಾಲಯದಲ್ಲಿ ಇರುವುದು ಕೇವಲ ಒಂದೇ ಒಂದು ಸಂದರ್ಶಕರ ಪುಸ್ತಕ. ಅದರಲ್ಲಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಸಹಿ ಮಾಡಿದ್ದಾರೆ.ಇದಕ್ಕೆ ಹೊರತಾಗಿ ಬೇರೆ ಯಾವುದೇ ಬಗೆಯ ಇಮೇಜ್‌ಗಳು ಚಲಾವಣೆಯಲ್ಲಿದ್ದರೆ ಅದು ಕೃತಕವೆಂದು ತಿಳಿಯತಕ್ಕದ್ದು. ಹತಾಶ ಸಮಯವು ಹತಾಶ ಕ್ರಮಗಳಿಗೆ ಕಾರಣವಾಗುತ್ತವೆಯೇ ?’.

ರಾಹುಲ್‌ ಗಾಂಧಿ ಅವರ ಸೋಮನಾಥ ದೇವಸ್ಥಾನ ಭೇಟಿಯ ಬಗ್ಗೆ ಅವರ ಮಾಧ್ಯಮ ಸಂಚಾಲಕ ಮನೋಜ್‌ ತ್ಯಾಗಿ ಮಾಡಿದ್ದಾರೆ ಎನ್ನಲಾದ ರಿಜಿಸ್ಟರ್‌ ಎಂಟ್ರಿಯು ವಿವಾದವನ್ನು ಸೃಷ್ಟಿಸಿದೆ. 

ರಾಹುಲ್‌ ಗಾಂಧಿ ಅವರು ಇಂದು ಬುಧವಾರ ಸೋಮನಾಥ ದೇವಾಲಯಕ್ಕೆ ಭೇಟಿ ನೀಡುವ ಸ,ದರ್ಭದಲ್ಲಿ ರಾಹುಲ್‌ ಒಳಗೆ ಹೋಗುತ್ತಿದ್ದಂತೆಯೇ ರಿಜಿಸ್ಟರ್‌ ಎಂಟ್ರಿ ಮಾಡಲಾಯಿತು. ಅದೇ ರೀತಿ ರಿಜಿಸ್ಟರ್‌ನಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಅಹ್ಮದ್‌ ಪಟೇಲ್‌ ಅವರ ಹೆಸರನ್ನೂ ಎಂಟ್ರಿ ಮಾಡಲಾಯಿತು. 

ವರದಿಗಳ ಪ್ರಕಾರ ಗುಜರಾತ್‌ನ ಸೌರಾಷ್ಟ್ರ ಪ್ರದೇಶದಲ್ಲಿರುವ ಈ ದೇವಾಲಯಕ್ಕೆ ಹಿಂದುಯೇತರರು ಭೇಟಿ ನೀಡುವಾಗ ರಿಜಿಸ್ಟರ್‌ ಎಂಟ್ರಿ ಮಾಡುವುದು ಕ್ರಮ ಎಂದು ವರದಿಗಳು ಹೇಳಿವೆ.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್‌ ಸುರ್‌ಜೇವಾಲಾ ಅವರು, “ರಾಹುಲ್‌ ಗಾಂಧಿ ಅವರ ದೇವಳ ಭೇಟಿಯ ಬಗ್ಗೆ ಬಿಜೆಪಿಗೆ ಆದೇಕೋ ಸಮಸ್ಯೆ ಇದೆ. ದೇವರ ಹೆಸರಿನಲ್ಲಿ ಕೊಳಕು ರಾಜಕಾರಣ ಮಾಡಬಾರದೆಂದು ನಾವು ಅವರಲ್ಲಿ ವಿನಂತಿಸುತ್ತೇವೆ’ ಎಂದಿದ್ದಾರೆ. 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.