ಚೀನದ “ಶೌಚಾಲಯ ಕ್ರಾಂತಿ’ಗೆ ಮೋದಿಯ ಸ್ವತ್ಛ ಭಾರತ ಸ್ಫೂರ್ತಿ


Team Udayavani, Nov 30, 2017, 6:30 AM IST

china.jpg

ಬೀಜಿಂಗ್‌: ಪ್ರಧಾನಿ ನರೇಂದ್ರ ಮೋದಿ ಅವರ “ಸ್ವತ್ಛ ಭಾರತ’ದ ಕರೆ ನೆರೆಯ ಚೀನದವರೆಗೂ ತಲುಪಿದೆ!
ಆಶ್ಚರ್ಯವಾದರೂ ಇದು ಸತ್ಯ. ಪ್ರಧಾನಿ ಮೋದಿ ಅವರಿಂದಲೇ ಸ್ಫೂರ್ತಿ ಪಡೆದು ಈಗ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌  “ಸ್ವತ್ಛ ಚೀನ’ಕ್ಕಾಗಿ ಪಣ ತೊಟ್ಟಿದ್ದಾರೆ. ಚೀನದಾದ್ಯಂತ ಸ್ವತ್ಛ ಶೌಚಾ ಲಯ ಸ್ಥಾಪಿಸುವಂತೆ ಕರೆ ನೀಡಿದ್ದಾರೆ.

ಪ್ರಧಾನಿ ಹುದ್ದೆಗೇರಿದ ಅನಂತರ ಮೋದಿ ಅವರು ಆರಂಭಿಸಿದ ಅತಿದೊಡ್ಡ ಆಂದೋಲನವೇ “ಸ್ವತ್ಛ ಭಾರತ’. 2014ರಲ್ಲಿ ಈ ಯೋಜನೆ ಯನ್ನು ಘೋಷಿಸಿದ ಮೋದಿ, ತಾವು ಎಲ್ಲೇ ಹೋದರೂ ಭಾಷಣದಲ್ಲಿ ಸ್ವತ್ಛತೆಯ ಕುರಿತು ಒಂದೆರಡು ವಿಚಾರ ಪ್ರಸ್ತಾವಿಸದೇ ಇರುತ್ತಿರಲಿಲ್ಲ. ದೇವಾಲಯಗಳಿಗಿಂತಲೂ ಶೌಚಾಲಯ ಗಳ ಅಗತ್ಯತೆ ಹೆಚ್ಚಿದೆ ಎಂಬುದನ್ನೂ ಒತ್ತಿಹೇಳಿ ದ್ದರು. ಶೌಚಾಲಯಗಳನ್ನು ನಿರ್ಮಿಸಲು ಸರಕಾರದಿಂದಲೇ ಹಣಕಾಸಿನ ನೆರವು ನೀಡುವುದರಿಂದ ಹಿಡಿದು, ತ್ಯಾಜ್ಯ ಸಂಸ್ಕರಣೆ, ತ್ಯಾಜ್ಯದಿಂದ ರಸಗೊಬ್ಬರ ಉತ್ಪಾದನೆ ಅಥವಾ ವಿದ್ಯುತ್‌ ಉತ್ಪಾದನೆಯವರೆಗೆ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ನೈರ್ಮಲ್ಯ ಕಾಪಾಡಿ ಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆಯಿಟ್ಟರು. ಅದರ ಜತೆಗೆ ಬಯಲು ಶೌಚ ಮುಕ್ತ ಭಾರತ ನಿರ್ಮಾಣಕ್ಕೂ ಮುಂದಾದರು.

ಜಿನ್‌ಪಿಂಗ್‌ಗೂ ಮೋದಿ ಮಾದರಿ: ಪ್ರಧಾನಿ ಮೋದಿ ಅವರ ಸ್ವತ್ಛ ಭಾರತ ಆಂದೋಲನದಿಂದ ಪ್ರೇರಣೆಗೊಂಡು 2015ರಲ್ಲಿ ಚೀನ ಪ್ರಧಾನಿಯೂ ಪ್ರವಾಸಿ ತಾಣಗಳಲ್ಲಿ ಟಾಯ್ಲೆಟ್‌ ನಿರ್ಮಿಸುವಂಥ “ಶೌಚಾಲಯ ಕ್ರಾಂತಿ’ಗೆ ಕರೆಕೊಟ್ಟರು. ಈಗ ಗ್ರಾಮೀಣ ಪ್ರದೇಶಗಳೂ ಸೇರಿದಂತೆ ಇಡೀ ದೇಶದಲ್ಲೇ ಟಾಯ್ಲೆಟ್‌ ಕ್ರಾಂತಿ ನಡೆಯಬೇಕು ಎಂದು ಜನತೆಗೆ ಕರೆನೀಡಿದ್ದಾರೆ. “ಟಾಯ್ಲೆಟ್‌ ಎನ್ನುವುದು ಸಣ್ಣ ವಿಚಾರವಲ್ಲ. ನಾಗರಿಕ ಸಮಾಜವನ್ನು ನಿರ್ಮಿಸುವಂಥ ಪ್ರಮುಖ ಅಂಶ’ ಎಂದಿದ್ದಾರೆ ಜಿನ್‌ಪಿಂಗ್‌.

ಚೀನದ ಗ್ರಾಮೀಣ ಪ್ರದೇಶಗಳಲ್ಲಿ ಟಾಯ್ಲೆಟ್‌ನದ್ದೇ ಸಮಸ್ಯೆ. ಕೆಲವರು ಸಿಕ್ಕ ಸಿಕ್ಕ ವಸ್ತುಗಳನ್ನು ಬಳಸಿ ತಾತ್ಕಾಲಿಕ ಟೆಂಟ್‌ ಥರ ಶೌಚಾಲಯ ನಿರ್ಮಿಸಿಕೊಂಡಿದ್ದರೆ, ಇನ್ನು ಕೆಲವರು ಸಣ್ಣ ಗುಂಡಿ ತೋಡಿ ಅಲ್ಲೇ ಶೌಚಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇನ್ನು ಪ್ರವಾಸಿತಾಣಗಳಲ್ಲಂತೂ ಸೂಕ್ತ ಟಾಯ್ಲೆಟ್‌ಗಳಿಲ್ಲ, ಇದ್ದರೂ ಸ್ವತ್ಛವಾಗಿಲ್ಲ ಎಂಬ ದೂರುಗಳೇ ಹೆಚ್ಚು. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡು, ಮೋದಿ ಮಾದರಿಯನ್ನು ಅನುಸರಿಸ ಹೊರಟಿದ್ದಾರೆ ಜಿನ್‌ಪಿಂಗ್‌.

ಅದರಂತೆ, ಈ ವರ್ಷದ ಅಕ್ಟೋ ಬರ್‌ ಅಂತ್ಯದವರೆಗೆ, ಚೀನದ ಪ್ರವಾಸಿ ತಾಣಗಳಲ್ಲಿ 68 ಸಾವಿರ ಶೌಚಾಲಯ ಗಳನ್ನು ನಿರ್ಮಿಸಲಾಗಿದೆ. ಇದು ಚೀನ ಹಾಕಿಕೊಂಡಿದ್ದ ಗುರಿಗಿಂತ ಶೇ.19.3ರಷ್ಟು ಹೆಚ್ಚು. 2018ರಿಂದ 2020ರ ಅವಧಿ ಯಲ್ಲಿ ಗ್ರಾಮೀಣ ಪ್ರದೇಶಗಳ ಪ್ರವಾಸಿ ಸ್ಥಳಗಳಲ್ಲಿ ಇನ್ನೂ 64 ಸಾವಿರ ಟಾಯ್ಲೆಟ್‌ಗಳನ್ನು ನಿರ್ಮಿಸುವ ಅಥವಾ ಮೇಲ್ದರ್ಜೆಗೇರಿಸುವ ಯೋಜನೆಯನ್ನು ಚೀನ ರಾಷ್ಟ್ರೀಯ ಪ್ರವಾಸೋದ್ಯಮ ಆಡಳಿತವು ಹಾಕಿಕೊಂಡಿದೆ.

ಟಾಪ್ ನ್ಯೂಸ್

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.