ಕನ್ನಡ ನಾಡು ನುಡಿ ರಕ್ಷಣೆಯಲ್ಲಿ ಕರವೇ ಪಾತ್ರ ಮುಖ


Team Udayavani, Nov 30, 2017, 3:43 PM IST

Vayupade-1.jpg

ತಾಳಿಕೋಟೆ: ಕನ್ನಡ ನಾಡು ನುಡಿ ಮೇಲೆ ನಡೆಯುತ್ತಿದ್ದ ದಬ್ಟಾಳೆಕೆಗಳಿಗೆ ತಕ್ಕ ಉತ್ತರ ನೀಡುವುದರೊಂದಿಗೆ
ಕನ್ನಡವನ್ನು ರಕ್ಷಣೆ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತ ಬಂದಿದ್ದು ಹೆಮ್ಮೆ
ಪಡುವಂತಹದ್ದಾಗಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ , ಶಾಸಕ ಸಿ.ಎಸ್‌. ನಾಡಗೌಡ ಹೇಳಿದರು.

ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕಲಾವಿದರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಬೆಳಗಾವಿಯ ಮೇಲೆ ಮಹಾರಾಷ್ಟ್ರದ ಸಂಘಟನೆಗಳು, ಎಂಇಎಸ್‌ ಸಂಘಟನೆಗಳು ದಬ್ಟಾಳಿಕೆ ಮಾಡುವ ಸಮಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರು ಗಡಿ ರಕ್ಷಣೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಕರ್ನಾಟಕ ಏಕೀಕರಣವಾದ ಮೇಲೆ ಹೈದ್ರಾಬಾದ್‌ ಕರ್ನಾಟಕ, ದಕ್ಷಿಣ ಕರ್ನಾಟಕ, ಮದ್ರಾಸ್‌ ಕರ್ನಾಟಕ ಎಂಬ ಭೇದ ಭಾವ ಹುಟ್ಟು ಹಾಕುತ್ತಿರುವುದು ತಮ್ಮ ಸ್ವ ಹಿತಾಶಕ್ತಿಗೋಸ್ಕರ.

ಕರ್ನಾಟಕ ಎಂದ ಮೇಲೆ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳುವುದರೊಂದಿಗೆ ನೆಲ ಜಲ ಭಾಷೆ ರಕ್ಷಣೆ
ಮಾಡಬೇಕು. ಕನ್ನಡವೇ ಧರ್ಮ, ಕನ್ನಡವೇ ಜಾತಿ, ಕನ್ನಡವೇ ದೇವರು ಎಂದು ಭಾವಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಗೌರವದೊಂದಿಗೆ ಮುನ್ನಡೆದಿದೆ ಎಂದರು.

ಬಹುಜನ ಸಮಾಜವಾದಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ದಸ್ತಗೀರ ಮುಲ್ಲಾ, ಕರವೇ ತಾಲೂಕು
ಗೌರವಾಧ್ಯಕ್ಷ ಎಚ್‌.ಎಸ್‌. ಢವಳಗಿ ಮಾತನಾಡಿ, ಕನ್ನಡ ಭಾಷೆಯಲ್ಲಿ ಸೂಕ್ಷ್ಮತೆ ಅಡಗಿದೆ. ಕನ್ನಡ ಭಾಷೆಯಲ್ಲಿ
ಭುವನೇಶ್ವರಿ ದೇವಿಯನ್ನು ಪೂಜಿಸುವುದರೊಂದಿಗೆ ತಾಯಿಯ ಸ್ವರೂಪವನ್ನು ಕಾಣುತ್ತಿದ್ದೇವೆ.

ಇಂದಿನ ದಿನಮಾನದಲ್ಲಿ ಕೆಲವೆಡೆ ಪ್ರಜ್ಞಾವಂತ ಪಾಲಕರೇ ಕನ್ನಡ ಭಾಷೆಯನ್ನು ಪರಕೀಯರ ಭಾಷೆಯಂಬಂತೆ
ಕಾಣುತ್ತಿರುವದು ವಿಷಾದಕರ ಸಂಗತಿಯಾಗಿದೆ. ಮಕ್ಕಳಲ್ಲಿ ತುಂಬುತ್ತಿರುವ ಇಂಗ್ಲಿಷ್‌ ವ್ಯಾಮೋಹ ಅತಿ
ಕೆಟ್ಟ ಸಂಸ್ಕೃತಿಯನ್ನು ಕಲಿಸುತ್ತಿದೆ. ಅನ್ಯಭಾಷೆ ಕಡೆಗಣಿಸಿ ದ್ವೇಷಿಸುವ ಅಗತ್ಯ ನಮಗಿಲ್ಲ. ಕನ್ನಡ ಭಾಷೆ ಮಾತನಾಡಲು ಬರೆಯಲು ಅನುಕೂಲವಾದಂತಹ ಭಾಷೆಯಾಗಿದೆ. ಕನ್ನಡ ಭಾಷೆ ಉಳಿವಿಗಾಗಿ ಬೆಳವಣಿಗೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಹಗಲಿರುಳು ದುಡಿಯುತ್ತಾ ಸಾಗಿದ್ದು ಶ್ಲಾಘನೀಯ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಸಿ. ಮುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಕರವೇ ತಾಲೂಕು ಉಪಾಧ್ಯಕ್ಷ
ಜೈಭೀಮ ಮುತ್ತಗಿ ಪ್ರಾಸ್ತಾವಿಕ ಮಾತನಾಡಿದರು. ಈ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಸಾಧನೆ
ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ಗೌರವಿಸಲಾಯಿತು.

ಖಾಸತೇಶ್ವರ ಮಠದ ವಿಶ್ವನಾಥ ವಿರಕ್ತಮಠ, ಮುಸ್ಲಿಂ ಧರ್ಮಗುರು ಸೈಯದ್‌ ಶಕೀಲಹ್ಮದ್‌ ಖಾಜಿ ಸಾನ್ನಿಧ್ಯ
ವಹಿಸಿದ್ದರು. ನಿಸಾರ ಬೇಪಾರಿ, ಅಕ್ಕಮಹಾದೇವಿ ಕಟ್ಟಿಮನಿ, ಪ್ರಭುಗೌಡ ಮದರಕಲ್ಲ, ಮಂಜೂರಲಿ ಬೇಪಾರಿ, ಪ್ರಶಾಂತ ಹಾವರಗಿ, ಜಿ.ಟಿ. ಘೋರ್ಪಡೆ, ಇಬ್ರಾಹಿಂ ಮನ್ಸೂರ, ಮಶಾಕ ಚೋರಗಸ್ತಿ, ಬಸವರಾಜ ಅಗ್ನಿ, ಶಬ್ಬೀರ್‌ ಲಾಹೋರಿ, ಇಬ್ರಾಹಿಂ ಡೋಣಿ, ಇಮಿ¤ಯಾಜ್‌ ಮೀರ್‌ ಜಮಾದಾರ, ಪ್ರಭುಗೌಡ ಪಾಟೀಲ, ಮಹಾದೇವ ರಾವಜಿ, ವಿನೋದ ದಳವಾಯಿ, ಸಾವಿತ್ರಿ ತಳವಾರ, ಜಾಕೀರ್‌ ಬಡಗಣ, ನಬಿ ಲಾಹೋರಿ, ಅಬು ಲಾಹೋರಿ, ಟಿಪ್ಪು ಕಾಳಗಿ, ಮಂಜು ಬಡಿಗೇರ, ಅಜೀಜ್‌ ಮನ್ಸೂರ, ಇಬ್ರಾಹಿಂ ಪಟ್ಟೆವಾಲೆ, ಅಜೀಜ್‌ ಮನ್ಸೂರ, ಈಶ್ವರ ಹೂಗಾರ, ಅಯೂಬ ವಠಾರ, ಶೌಕತ್‌ ಲಾಹೋರಿ, ಅನಿಲ ಗೊಟಗುಣಕಿ, ಜಗನ್ನಾಥ ಮಸರಕಲ್ಲ, ಲಾಳೇಮಶಾಕ ಜಮಾದಾರ, ಭೀಮರಾಯ ಅತ್ತೂರ, ಚಂದಪ್ಪಗೌಡ ಬಿರಾದಾರ, ಆಸೀಫ್‌ ಲಾಹೋರಿ, ಇಮಾಮ ಹುಸೇನ ಸೂಳೆಭಾವಿ, ಬಂದು ಬೇಪಾರಿ, ಮದರಶಾ ಮಕಾಂದಾರ ಇದ್ದರು. ಎಚ್‌.ವೈ. ಬಸರಿಕಟ್ಟಿ ನಿರೂಪಿಸಿದರು

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.