ಬಿಜೆಪಿ ಸೇರ್ಪಡೆ: ಅಡ್ಡಗೋಡೆ ಮೇಲೆ ದೀಪವಿಟ್ಟ ಆರ್.ವಿ.ದೇಶಪಾಂಡೆ
Team Udayavani, Dec 1, 2017, 7:45 AM IST
ಬೆಂಗಳೂರು: ತಾವು ಬಿಜೆಪಿ ಸೇರುವ ವದಂತಿ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ, “ಸಮಯ ಬಂದಾಗ ನೀವೆ ಹೆಡ್ಲೈನ್ ಮಾಡುತ್ತೀರಿ’ ಎನ್ನುವ ಮೂಲಕ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಉತ್ತರ ಕೊಟ್ಟಿದ್ದಾರೆ.
ನಗರದಲ್ಲಿ ಗುರುವಾರ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಡಿಮಿಡಿಗೊಂಡ ಅವರು, “ಈ ವಿಷಯ ಕುರಿತಂತೆ ಈಗಾಗಲೇ ಹಲವಾರು ಬಾರಿ ಪ್ರತಿಕ್ರಿಯೆ ನೀಡಿದ್ದೇನೆ. ಮತ್ತೆ ಅದೇ ಪ್ರತಿಕ್ರಿಯೆ ನೀಡುವುದಿಲ್ಲ.
ನಿಮಗೆ ಏನು ಬೇಕೊ ಅದನ್ನು ಬರೆದುಕೊಳ್ಳಿ. ಈಗ ಪ್ರಶ್ನೆ ಕೇಳುವ ವರದಿಗಾರರು ಮುಂದೆ ಸಂಪಾದಕರೂ ಆಗಬಹುದು. ಮುಂದೇನಾಗುತ್ತದೆ ಎನ್ನುವ ಬಗ್ಗೆ ಹೆಚ್ಚಿನ ಮಾತನಾಡಲು ಇಷ್ಟ ಪಡುವುದಿಲ್ಲ’ ಎಂದು ಹೇಳಿದರು. ಆದರೆ, ತಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವುದಿಲ್ಲ ಎಂದು ಖಡಾ ಖಂಡಿತವಾಗಿ ಉತ್ತರಿಸದೆ ಜಾರಿಕೊಳ್ಳುವ ಪ್ರಯತ್ನ ನಡೆಸಿದರು. “ಪ್ರಧಾನಿ ಮೋದಿಯವರು ಮೂರು ವರ್ಷದಿಂದ ನನಗೆ ಪರಿಚಯವಾಗಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವತ್ತು ವರ್ಷ ದಿಂದ ನನಗೆ ಸ್ನೇಹಿತ. ಹೀಗಾಗಿ ಅವರೊಂದಿಗೆ ಇದ್ದೇನೆ. ಓಲ್ಡ್ ಈಸ್ ಗೋಲ್ಡ್’ ಎಂದು ಹೇಳಿದರು.
ಇದೇ ವೇಳೆ, “ಮಾಜಿ ಪ್ರಧಾನಿ ದೇವೇಗೌಡ ಅವರ ಬಗ್ಗೆಯೂ ನನಗೆ ಅಪಾರವಾದ ಗೌರವ ಇದೆ. ಇತ್ತೀಚೆಗೆ ಬಿಜೆಪಿ ಸೇರಿರುವ ಹಿರಿಯ ನಾಯಕ ಎಸ್.ಎಂ.ಕೃಷ್ಣ ಬಗ್ಗೆಯೂ ನನಗೆ ಅಪಾರ ಗೌರವವಿದೆ. ಅವರ ಸಂಪುಟದಲ್ಲಿ ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ