ಮಣಿಪಾಲದಲ್ಲಿ ಅಯ್ಯಂಗಾರ್‌ ಯೋಗ ಕಾರ್ಯಾಗಾರ


Team Udayavani, Dec 1, 2017, 9:19 AM IST

01-10.jpg

ಉಡುಪಿ: ವಿಶ್ವವಿಖ್ಯಾತ ಯೋಗಾಚಾರ್ಯ ಬಿಕೆಎಸ್‌ ಅಯ್ಯಂಗಾರ್‌ ಅವರ ಜನ್ಮ ಶತಮಾನೋತ್ಸವವನ್ನು ಈ ವರ್ಷ ಆಚರಿಸಲಾಗುತ್ತಿದ್ದು, ಇದರ ಮೊದಲ ಕಾರ್ಯಕ್ರಮವಾಗಿ ಮಣಿಪಾಲ-ಪೆರಂಪಳ್ಳಿಯ “ಅಥ ಇತಿ ಯೋಗ ಕೇಂದ್ರ’ ವು ಡಿಸೆಂಬರ್‌ 9 ಮತ್ತು 10ರಂದು ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಎರಡು ದಿನಗಳ “ಅಯ್ಯಂಗಾರ್‌ ಯೋಗ’ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ.

ಬಿಕೆಎಸ್‌ ಅಯ್ಯಂಗಾರ್‌ ಅವರ ಶಿಷ್ಯೆ ಶೋಭಾ ಶೆಟ್ಟಿಯವರ ನೇತೃತ್ವದಲ್ಲಿ ಆಯೋಜನೆಗೊಂಡಿರುವ ಈ ಕಾರ್ಯಾಗಾರದಲ್ಲಿ ಚಿಕ್ಕಮಗಳೂರು, ದಕ್ಷಿಣಕನ್ನಡ, ಉತ್ತರಕನ್ನಡ ಮತ್ತು ಉಡುಪಿ ಜಿಲ್ಲೆಯ ಆಸಕ್ತರು ಭಾಗವಹಿಸಬಹುದಾಗಿದೆ.
ಯೋಗಾಭ್ಯಾಸದ ಕುರಿತು ಆರಂಭಿಕ ಜ್ಞಾನವುಳ್ಳವರು, ಈಗಾಗಲೇ ಯೋಗಾಭ್ಯಾಸದಲ್ಲಿ ನಿರತರಾಗಿರುವ ಅನುಭವಿಗಳು ಇದರಲ್ಲಿ  ಪಾಲ್ಗೊಳ್ಳಬಹುದಾಗಿದೆ. ಪುರುಷರಿಗೆ ಮತ್ತು ಮಹಿಳೆಯರಿಗೆ ಮುಕ್ತ ಅವಕಾಶವಿದೆ. “ಕರೆಕ್ಟ್ ಎಲೈನ್‌ಮೆಂಟ್‌’ನೊಂದಿಗೆ ಯೋಗಾಸನಗಳ ಪರಿಚಯ, ನಿಖರ ಭಂಗಿ ಮತ್ತು ಉಸಿರಾಟದ ತಂತ್ರಗಳೊಂದಿಗೆ ಪ್ರಾಣಾಯಾಮದ ಮೂಲಪಾಠ, ದೇಹವನ್ನು ಕಾಡುವ ಸಾಮಾನ್ಯ ನೋವುಗಳ ನಿವಾರಣೆಗೆ ಮುಂಜಾಗರೂಕತೆ, ಯೋಗಾಭ್ಯಾಸದ ಸಮಸ್ಯೆಗಳ ಕುರಿತ ಪ್ರಶ್ನೋತ್ತರ- ಹೀಗೆ ಹಲವು ಕಲಾಪಗಳನ್ನು ಎರಡು ದಿನಗಳ ಕಾರ್ಯಾಗಾರಗಳಲ್ಲಿ ಅಳವಡಿಸಲಾಗಿದೆ.

ಮಣಿಪಾಲ ಟೈಗರ್‌ ಸರ್ಕಲ್‌ನಿಂದ ವಾಹನ ವ್ಯವಸ್ಥೆ, ಸಸ್ಯಾಹಾರಿ ಸರಳ ಭೋಜನ, ಚಹಾ ವ್ಯವಸ್ಥೆ, ಅಯ್ಯಂಗಾರ್‌ ಯೋಗ ಪರಿಚಯ ಪುಸ್ತಕ, ಯೋಗ ಬೆಲ್ಟ್- ಇವುಗಳೆಲ್ಲ ಸೇರಿ ಪ್ರವೇಶ ಶುಲ್ಕ ರೂ. 2000 ಆಗಿರುತ್ತದೆ. ಭಾಗವಹಿಸಲಿಚ್ಛಿಸುವವರು ಡಿಸೆಂಬರ್‌ 5ರ ಮೊದಲು ತಮ್ಮ ಹೆಸರನ್ನು  ನೋಂದಾಯಿಸಬೇಕೆಂದು ಸಂಯೋಜಕರು ತಿಳಿಸಿದ್ದಾರೆ. 

ಸಂಪರ್ಕ:  98447 16452 (ಬೆಳಗ್ಗೆ 10 ಮತ್ತು ಸಂಜೆ 5ರ ನಡುವೆ).

ಅಯ್ಯಂಗಾರ್‌ ಯೋಗಾನುಭವ !
ಬಿಕೆಎಸ್‌ ಅಯ್ಯಂಗಾರ್‌ ಅವರ ಶಿಷ್ಯೆ ಶೋಭಾ ಶೆಟ್ಟಿಯವರ ಯೋಗ ತರಗತಿಗೆ ನಾನು ಸೇರಿದ್ದು ಎಂಟು ವರ್ಷಗಳ ಹಿಂದೆ. ಆಗ ನನಗೆ ಬೆನ್ನುನೋವು ಕಾಡುತ್ತಿತ್ತು. ಯೋಗ ತರಗತಿಗೆ ಸೇರಿದ ಆರಂಭದಲ್ಲಿ ಕೆಲವು ಆಸನಗಳನ್ನು ಮಾಡಲು ಕಷ್ಟವಾಗುತ್ತಿತ್ತು. ಗುರುಗಳ ಸೂಚನೆಯಂತೆ ಕಷ್ಟಪಟ್ಟು ಆಸನಗಳನ್ನು ಮಾಡಿದೆ. ಈಗ ಬೆನ್ನುನೋವು ತುಂಬ ಕಡಿಮೆಯಾಗಿ ಆರೋಗ್ಯದಲ್ಲಿ ತುಂಬಾ ಸುಧಾರಣೆಯಾಗಿದೆ. ಯೋಗಾಸನಗಳನ್ನು ಆತ್ಮವಿಶ್ವಾಸದಿಂದ ಮಾಡಲು ಕೂಡಾ ಸಾಧ್ಯವಾಗಿದೆ.
ಮೀರಾ ರಾಜೇಶ್‌, ಚಿಟಾ³ಡಿ, ಉಡುಪಿ

ಎರಡು ವರ್ಷಗಳಿಂದ ನನ್ನ ಭುಜಗಳಲ್ಲಿ ನೋವು ಕಾಡುತ್ತಿತ್ತು. ನಾನು ಪ್ರತಿದಿನವೆಂಬಂತೆ ನೋವುನಿವಾರಕ ಗುಳಿಗೆಗಳನ್ನು ತೆಗೆದುಕೊಳ್ಳಬೇಕಾಗಿತ್ತು. ಅಯ್ಯಂಗಾರ್‌ ಯೋಗವನ್ನು ಅಭ್ಯಾಸ ಮಾಡಿದ ಮೇಲೆ ನೋವು ಕಡಿಮೆಯಾಯಿತು. ನಿಜವಾಗಿ ನಾನು ನನ್ನ ಯೋಗ  ಗುರುಗಳಾದ ಶೋಭಾ, ವನಿತಾ,  ಸುಚಿತ್ರಾ ಅವರಿಗೆ ಕೃತಜ್ಞತೆ ಹೇಳಬೇಕು!
ಸೋನಿಯಾ ರಾಜೇಶ್‌, ಮಣಿಪಾಲ್‌

ನಾಲ್ಕು ವರ್ಷಗಳ ಹಿಂದೆ ಬೆನ್ನುನೋವಿನಿಂದ ಬಳಲುವುದನ್ನು ಕಂಡ ಪರಿಚಿತರೊಬ್ಬರು ಉಡುಪಿಯ “ಅಯ್ಯಂಗಾರ್‌ ಯೋಗಶಿಕ್ಷಕಿ’ ಶೋಭಾ ಶೆಟ್ಟಿಯವರನ್ನು ಪರಿಚಯಿಸಿದರು. ಅಂದಿನಿಂದ ನಿಯತವಾಗಿ ನಾನು ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ನಡೆಸುತ್ತಿದ್ದು ನನ್ನ ಬೆನ್ನುನೋವಿನ ತೊಂದರೆಯಿಂದ ಮುಕ್ತಳಾಗಿದ್ದೇನೆ. ಯೋಗಾಭ್ಯಾಸ ನನ್ನ ದೈಹಿಕ, ಮಾನಸಿಕ ಆರೋಗ್ಯದ ಸುಧಾರಣೆಗೆ ಕಾರಣವಾಗಿದೆ. ಯೋಗಾಸನದ ಸೂಕ್ಷ್ಮ ವಿವರಗಳಿಗೂ ಒತ್ತು ನೀಡಿ ತರಬೇತಿ ನೀಡುವ ಶೋಭಾ ಶೆಟ್ಟಿಯವರು ಯೋಗದ ಹೊಸ ಆಯಾಮವನ್ನು ನನಗೆ ಪರಿಚಯಿಸಿದ್ದಾರೆ.
 ಪದ್ಮಾವತಿ ತಲ್ಲೂರು

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.