ತ್ರಿವಳಿ ತಲಾಖ್‌ಗೆ 3 ವರ್ಷ ಜೈಲು ಶಿಕ್ಷೆ, ದಂಡ


Team Udayavani, Dec 2, 2017, 6:00 AM IST

Triple-Talaq.jpg

ನವದೆಹಲಿ: ಏಕಕಾಲದಲ್ಲಿ ತ್ರಿವಳಿ ತಲಾಖ್‌ ನೀಡುವುದು ಕಾನೂನುಬಾಹಿರವಾಗಿದ್ದು, ತಲಾಖ್‌ ಹೇಳುವ ವ್ಯಕ್ತಿಗೆ 3 ವರ್ಷಗಳ ಜೈಲು ಶಿಕ್ಷೆ ಖಚಿತ.

ಮುಸ್ಲಿಮರಲ್ಲಿರುವ ಒಂದೇ ಬಾರಿಗೆ ಮೂರು ಬಾರಿ ತಲಾಖ್‌ ಹೇಳುವ ಪದ್ಧತಿಗೆ ಕೊನೆ ಹಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾನೂನು ತರಲು ಇದೀಗ ಕರಡು ಸಿದ್ಧಪಡಿಸಿದೆ. ತ್ರಿವಳಿ ತಲಾಖ್‌ ನೀಡುವ ಪತಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾಪ ಅದರಲ್ಲಿದೆ. “ವಿವಾಹಕ್ಕೆ ಸಂಬಂಧಿಸಿ ಮುಸ್ಲಿಂ ಮಹಿಳೆಯರ ಹಕ್ಕುಗಳ ರಕ್ಷಣೆ ವಿಧೇಯಕ’ ಎಂಬ ಹೆಸರಿನ ಈ ಕರಡು ಪ್ರತಿಯನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಕಳುಹಿಸಿದ್ದು, ಆದಷ್ಟು ಬೇಗನೆ ಪ್ರತಿಕ್ರಿಯೆ ನೀಡುವಂತೆ ಕೋರಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳೇ ತಿಳಿಸಿವೆ.

ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ಅಂತರ್‌-ಸಚಿವರ ಸಮಿತಿಯು ಈ ಕರಡು ಸಿದ್ಧಪಡಿಸಿದೆ. ಸಮಿತಿಯಲ್ಲಿ ಸಚಿವರಾದ ಸುಷ್ಮಾ ಸ್ವರಾಜ್‌, ಅರುಣ್‌ ಜೇಟಿÉ, ರವಿಶಂಕರ್‌ ಪ್ರಸಾದ್‌ ಮತ್ತು ಪಿ.ಪಿ. ಚೌಧರಿ ಇದ್ದರು. ರಾಜ್ಯಗಳ ಪ್ರತಿಕ್ರಿಯೆ, ಸಲಹೆಗಳು ಬಂದ ಬಳಿಕ ವಿಧೇಯಕವನ್ನು ಚಳಿಗಾಲದ ಅಧಿವೇಶನದಲ್ಲೇ ಮಂಡಿಸಲು ನಿರ್ಧರಿಸಲಾಗಿದೆ.

ತ್ರಿವಳಿ ತಲಾಖ್‌ ಅನ್ನು ಅಸಿಂಧುಗೊಳಿಸಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕವೂ ಮುಸ್ಲಿಮರಲ್ಲಿ ಈ ಪದ್ಧತಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಕಾನೂನು ಜಾರಿ ಮಾಡಲು ಸರ್ಕಾರ ಉತ್ಸುಕವಾಗಿದೆ ಎಂದೂ ಮೂಲಗಳು ಹೇಳಿವೆ.

ಕರಡು ಪ್ರಸ್ತಾಪದಲ್ಲೇನಿದೆ?:
– ಎಲ್ಲ ರೀತಿಯ ತ್ರಿವಳಿ ತಲಾಖ್‌ (ಮಾತಿನಲ್ಲಿ ಹೇಳುವ, ಲಿಖೀತ ರೂಪದಲ್ಲಿರುವ ಅಥವಾ ಇಮೇಲ್‌, ಎಸ್ಸೆಮ್ಮೆಸ್‌, ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಿರು) ಕೂಡ ಕಾನೂನುಬಾಹಿರ.
– ಪತ್ನಿಗೆ ಮನೆ ಬಿಟ್ಟು ಹೋಗುವಂತೆ ಪತಿ ಸೂಚಿಸಿದರೆ ಆಕೆ ಕಾನೂನಿನ ರಕ್ಷಣೆ ಪಡೆಯಬಹುದು
– ತ್ರಿವಳಿ ತಲಾಖ್‌ ಜಾಮೀನುರಹಿತ ಮತ್ತು ದಂಡಾರ್ಹ ಅಪರಾಧ. ತಪ್ಪಿತಸ್ಥನಿಗೆ 3 ವರ್ಷ ಜೈಲು ಮತ್ತು ದಂಡ
– ಕಾನೂನು ಜಾರಿಯಾಗುವ ಮೊದಲು ವಿಚ್ಛೇದನ ಪಡೆದವರೂ ಇದರ ಲಾಭ ಪಡೆಯಬಹುದು
– ಜಮ್ಮು-ಕಾಶ್ಮೀರ ಹೊರತುಪಡಿಸಿ ದೇಶದೆಲ್ಲೆಡೆ ಇದು ಅನ್ವಯ

ಟಾಪ್ ನ್ಯೂಸ್

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.