ಸಮಾನ ಹಕ್ಕುಗಳಿಂದ ಅಸ್ಮಿತೆ


Team Udayavani, Dec 2, 2017, 9:01 AM IST

02-14.jpg

ಮೂಡಬಿದಿರೆ: ಸರ್ವ ಧರ್ಮ- ವಿಚಾರ- ಸಂಸ್ಕೃತಿ ಸಮಾನತೆ ಮತ್ತು ಭಿನ್ನತೆಯಲ್ಲಿ ಏಕತೆ ಎಂಬುದು ಬಹುತ್ವದ ಆಯಾಮಗಳು ಎಂದು ಖ್ಯಾತ ವಿಮರ್ಶಕ ಡಾ | ಸಿ. ಎನ್‌. ರಾಮಚಂದ್ರನ್‌ ಅವರು ಶುಕ್ರವಾರ ಇಲ್ಲಿ ಹೇಳಿದರು.

ಡಾ| ಎಂ. ಮೋಹನ್‌ ಆಳ್ವರ ನೇತೃತ್ವ ದಲ್ಲಿ ಇಲ್ಲಿ ಮೂರು ದಿನಗಳ ಕಾಲ ಡಾ| ನಾಗತಿಹಳ್ಳಿ ಚಂದ್ರಶೇಖರ್‌ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಆಳ್ವಾಸ್‌ ನುಡಿಸಿರಿ 14ನೇ ರಾಷ್ಟ್ರೀಯ ಸಮ್ಮೇಳನವನ್ನು ಅವರು ಉದ್ಘಾಟಿಸಿದರು. ಬಹುತ್ವದ ಕಲ್ಪನೆಯು ಸಹಸ್ರಮಾ ಗಳಿಂದಲೂ ಭಾರತದ ಬದುಕಿನಲ್ಲಿ ಹಾಸು ಹೊಕ್ಕಾಗಿದೆ. ಸಾಂಸ್ಕೃತಿಕ, ವೈಚಾರಿಕ ಬಹುತ್ವವೆಂದರೆ ಅನೇಕ ಸಹಭಾಗಿ ಸಂಸ್ಕೃತಿಗಳು, ವೈಚಾರಿಕ ಪ್ರಣಾಲಿ ಗಳು ಸಮಾನ ಹಕ್ಕುಗಳಿಂದ ತಮ್ಮ ತಮ್ಮ ಅಸ್ಮಿತೆಯನ್ನು ಉಳಿಸಿಕೊಂಡು ಸಮಾಜವೊಂದರಲ್ಲಿ ಸಹ ಬಾಳ್ವೆ ಯನ್ನು ನಡೆಸುವುದೆಂದು ಸಿಎನ್‌ಆರ್‌ ವಿವರಿಸಿದರು. ಪ್ರಾಚೀನ ಹಾಗೂ ಅರ್ವಾಚೀನ ಕನ್ನಡ ಸಾಹಿತ್ಯದ ಮೂಲಕವೇ “ಬಹುತ್ವದೆಡೆಗೆ’ ಎಂಬ ಶೋಧ ವನ್ನು ಕೈಗೊಂಡಿ ರುವ ಈ ನುಡಿಸಿರಿ ಜ್ಞಾನ ದಾಸೋಹದ ಕಾರ್ಯವು ಸಾರ್ಥಕ ವಾಗಲಿ ಎಂದು ಸಿ. ಎನ್‌. ರಾಮ ಚಂದ್ರನ್‌ ಅವರು ಹಾರೈಸಿದರು.

ಸಾರ್ವತ್ರಿಕ: ಬಳಿಗಾರ್‌
ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಮನು ಬಳಿಗಾರ್‌ ಮುಖ್ಯ ಅತಿಥಿಯಾಗಿದ್ದರು. ಕನ್ನಡತನದ ಹಿರಿಮೆ ಗರಿಮೆ ಸಾರ್ವತ್ರಿಕವಾಗಲೆಂದು ಹಾರೈಸಿದರು. ಈ ನಿಟ್ಟಿನಲ್ಲಿ ಆಳ್ವಾಸ್‌ ನುಡಿಸಿರಿಯು ಆದರ್ಶವಾಗಿದೆ. ದೇಸಿ ಪರಂಪರೆಯ ಜತೆ ಆಧುನಿಕ ಚಿಂತನೆಯ ಬೆಸುಗೆ ಇಲ್ಲಿ  ನಡೆಯುತ್ತದೆ ಎಂದು ಹೇಳಿದರು. 

ಸಂಸದ ನಳಿನ್‌ಕುಮಾರ್‌ ಕಟೀಲು, ಶಾಸಕ ಕೆ. ಅಭಯಚಂದ್ರ ಜೈನ್‌, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಕ್ಯಾ | ಗಣೇಶ್‌ ಕಾರ್ಣಿಕ್‌ ಗೌರವ ಅತಿಥಿಗಳಾಗಿದ್ದರು. ಏರ್ಯ ಲಕ್ಷ್ಮೀನಾರಾಯಣ ಆಳ್ವ, ಹರಿಕೃಷ್ಣ ಪುನರೂರು, ಪುರಸಭಾಧ್ಯಕ್ಷೆ ಹರಿಣಾಕ್ಷಿ ಸುವರ್ಣ, ಪ್ರದೀಪ್‌ ಕಲ್ಕೂರ, ರೆ| ಫಾ| ಗೋಮ್ಸ್‌ , ಐಕಳ ಹರೀಶ ಶೆಟ್ಟಿ, ಜಯಶ್ರೀ ಅಮರನಾಥ ಶೆಟ್ಟಿ ವೇದಿಕೆಯಲ್ಲಿದ್ದರು. ಆಳ್ವಾಸ್‌ನ ಅಧ್ಯಕ್ಷ ಡಾ| ಎಂ. ಮೋಹನ್‌ ಆಳ್ವ ಸ್ವಾಗತಿಸಿದರು. ಮನೋಹರ ಪ್ರಸಾದ್‌ ನಿರೂಪಿಸಿದರು. ವೇಣುಗೋಪಾಲ ಶೆಟ್ಟಿ ವಂದಿಸಿದರು. 

ಕೃತಿ ಬಿಡುಗಡೆ
ತೇಜಸ್ವಿನಿ ಹೆಗಡೆ ಅವರ ಹಂಸಯಾನ ಕೃತಿ, ಗಣೇಶ್‌ ಭಾರತೀ- ಅಬ್ದುಲ್‌ ಹಮೀದ್‌ ಕೆ. ಪಿ. ರವಿಶಂಕರ್‌ ಅವರ ಕೃತಿಗಳನ್ನು ನಾಗತಿಹಳ್ಳಿ ಬಿಡು ಗಡೆಗೊಳಿಸಿದರು. 

ನುಡಿಸಿರಿ ಅತ್ಯಂತ ಪ್ರಸ್ತುತ: ಸಿಎನ್‌ಆರ್‌
ಮೋಹನ್‌ ಆಳ್ವ ಅವರು ನಿಪುಣರು; “ನುಡಿಸಿರಿ’ಯಂತಹ ಸಾವಿರಾರು ಜನರು ಸೇರುವ ಜ್ಞಾನ ದಾಸೋಹವನ್ನು ಅಚ್ಚು ಕಟ್ಟಾಗಿ, ಯಾವ ಕುಂದು ಕೊರತೆಯೂ ಯಾರಿಗೂ ಆಗ ದಂತೆ ಆಯೋ ಜಿಸುವುದು ಅಸಾಧ್ಯ ವೆಂದೇ ತೋರು ತ್ತದೆ. ಈ ಬಾರಿಯ “ನುಡಿಸಿರಿ’ಯ ಮೂಲಾಶಯವಾದ ಬಹುತ್ವದ ಪರಿಕಲ್ಪನೆಯೂ ಇಂದಿನ ಸಂದರ್ಭ ಎಂದರೆ, ಒಂದು ಧರ್ಮ- ಒಂದು ಭಾಷೆ- ಒಂದು ಸಂಸ್ಕೃತಿ- ಒಂದು ಆರ್ಥಿಕ ಪ್ರಣಾಲಿ ಇವುಗಳ ದಿಕ್ಕಿನಲ್ಲಿ ಭರ ದಿಂದ ಓಡುತ್ತಿರುವ ನಮ್ಮ ರಾಷ್ಟ್ರದ ಇಂದಿನ ಪರಿಸ್ಥಿತಿಯಲ್ಲಿ ತುಂಬಾ ಪ್ರಸ್ತುತ. ತುಂಬಾ ತುರ್ತಿನ ಸವಾಲು ಕೂಡ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.