ಮುಖ್ಯ ಕಾರ್ಯದರ್ಶಿಗೆ ಕರಾವಳಿ ನಂಟು!


Team Udayavani, Dec 2, 2017, 9:35 AM IST

02-17.jpg

ಕಾರ್ಕಳ: ಇತ್ತೀಚೆಗಷ್ಟೇ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಐಎಎಸ್‌ ಅಧಿಕಾರಿ ರತ್ಮಪ್ರಭಾ ಅವರಿಗೂ ಕಾರ್ಕಳಕ್ಕೂ ನಂಟಿದೆ ಎಂಬುದು ಬಹುತೇಕರಿಗೆ ಗೊತ್ತೇ ಇಲ್ಲ !

ಹೌದು ಕಳೆದ ವಾರವಷ್ಟೇ ರಾಜ್ಯದ ಮುಖ್ಯ ಕಾರ್ಯದರ್ಶಿ ಹುದ್ದೆ ವಹಿಸಿದ ಮಹಿಳಾಮಣಿ ರತ್ನಪ್ರಭಾ ಅವರ ತಾಯಿ ಕಾರ್ಕಳದವರು. ಕಾರ್ಕಳದಲ್ಲಿ ಉದ್ಯಮಿ, ರಾಜಕಾರಣಿಯಾಗಿ ಗುರುತಿಸಿ ಜನಪ್ರಿಯರಾಗಿದ್ದ ಹಳೆ ದ್ವಾರಕಾ ಹೊಟೇಲಿನ ಮಾಲಕ ಸದಾನಂದ ಕಾಮತ್‌ ಅವರ ಸೋದರಿಯಾಗಿದ್ದ ವಿಮಲಾ ಬಾೖ ಅವರ ಮೂವರು ಮಕ್ಕಳಲ್ಲಿ ರತ್ನಪ್ರಭಾ ಕೊನೆಯವರು. 

ಕಾರ್ಕಳದಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸಿದ ದಿ|ವಿಮಲಾ ಬಾೖ ಅವರು ಆಂಧ್ರ ಮೂಲದ ಅಧಿಕಾರಿ ಚಂದ್ರಯ್ಯ ಅವರನ್ನು ವಿವಾಹವಾಗಿದ್ದರು.  ತಮ್ಮ ಬಾಲ್ಯ ಹಾಗೂ ಶಿಕ್ಷಣವನ್ನು ಆಂಧ್ರಪ್ರದೇಶದಲ್ಲಿಯೇ ಪೂರೈಸಿದ ರತ್ನಪ್ರಭಾ ಅವರು ತಾಯಿ ವಿಮಲಾ ಅವರ ಜತೆಗೆ ರಜಾದಿನಗಳಲ್ಲಿ ಕಾರ್ಕಳದತ್ತ ಬಂದು ಕುಟುಂಬದ ಸದಸ್ಯರ ಜತೆಗೆ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದರು.
ಈಗಲೂ ವರ್ಷಕ್ಕೊಂದು ಬಾರಿ ಕಾರ್ಕಳಕ್ಕೆ ಬರುವ ಅವರು, ಕುಟುಂಬದ ಕಾರ್ಯಕ್ರಮಗಳಲ್ಲಿ, ತಮ್ಮ ಕುಟುಂಬದ ದೇವಸ್ಥಾನದ ಪೂಜಾ ಮಹೋತ್ಸವಗಳಲ್ಲಿ  ಪಾಲ್ಗೊಳ್ಳುತ್ತಾರೆ.

ಕರಾವಳಿಯ ನಿಕಟ ಸಂಪರ್ಕ
ತಾಯಿ ವಿಮಲಾ ಅವರು ಮಂಗಳೂರು, ಪುತ್ತೂರು, ಕಾರ್ಕಳ ಮೊದಲಾದ ಕಡೆ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದರಿಂದ ಆ ಊರುಗಳ ಸಂಪರ್ಕವೂ ರತ್ನಪ್ರಭಾ  ಅವರಿಗಿದೆ.  ವಿಮಲಾ ಅವರು ಮಂಗಳೂರಿನ ಲೇಡಿ ಗೋಶನ್‌ನಲ್ಲಿಯೂ ವೈದ್ಯೆಯಾಗಿ ಸೇವೆ ಸಲ್ಲಿಸಿದ್ದು ಸ್ಕಿನ್‌ ಸ್ಪೆಷಲಿಸ್ಟ್‌ ಆಗಿದ್ದರು. 2016ರಲ್ಲಿ ತಾಯಿ ನಿಧನ ಹೊಂದಿದಾಗ ಕೊನೆಯ ಬಾರಿ ಕಾರ್ಕಳಕ್ಕೆ ಭೇಟಿ ನೀಡಿದ್ದ ರತ್ನಪ್ರಭಾ ಅವರಿಗೆ ಕಾರ್ಕಳ ಇಷ್ಟವಾದ ತಾಣವಂತೆ. ಕಾರ್ಕಳದಲ್ಲಿರುವ ಪೂರ್ವಜರ ಮನೆ, ವಾತಾವರಣ ಎಲ್ಲವೂ ಅವರಿಗೆ ಮೆಚ್ಚುಗೆ ಎನ್ನುವ ಮಾಹಿತಿಯನ್ನು ಪ್ರಸ್ತುತ ಬೆಂಗಳೂರಿನಲ್ಲಿರುವ ಕಾರ್ಕಳದ ದಿ| ಸದಾನಂದ ಕಾಮತ್‌ ಅವರ ಮಕ್ಕಳು ನೀಡುತ್ತಾರೆ.

ಸಂಸ್ಕೃತಿ ಪ್ರಿಯೆ; ಕೊಂಕಣಿ ಮೋಹ
ರತ್ನಪ್ರಭಾ ಅವರಿಗೆ ಕೊಂಕಣಿ ಎಂದರೆ ಇಷ್ಟ . ಮನೆ ಭಾಷೆ ಕೊಂಕಣಿಯಾದ್ದರಿಂದ ಭಾಷೆಯ ಮೇಲೆ ಅಭಿಮಾನ ಜಾಸ್ತಿ. ಆಂಧ್ರ ಮೂಲದ ಹುಡುಗನನ್ನು ವರಿಸಿದ್ದರೂ, ಕೊಂಕಣಿ ಭಾಷೆ ಹಾಗೂ ಊರಿನ ವ್ಯಾಮೋಹದಿಂದ ತಮ್ಮ ಮಗ, ಮಗಳಿಗೂ ಕೊಂಕಣಿ ಕಲಿಸಿದ್ದಾರೆ. ಭಾಷಾ ಪ್ರೇಮವನ್ನೂ ಉಳಿಸಿಕೊಂಡಿದ್ದಾರೆ. ಅಲ್ಲದೇ ಟೆನ್ನಿಸ್‌ನಲ್ಲಿಯೂ ಅವರು ಪ್ರವೀಣೆಯಾಗಿದ್ದರು ಎನ್ನುವ ಮಾಹಿತಿಯನ್ನು ಸದಾನಂದ ಕಾಮತ್‌ ಮಕ್ಕಳು ನೀಡುತ್ತಾರೆ.

ಪ್ರಸಾದ್‌ ಶೆಣೈ ಕಾರ್ಕಳ

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.