ನಿಂದಕರು ಆತ್ಮಾವಲೋಕನ ಮಾಡಿಕೊಳ್ಳಲಿ: ಜಿಡಿಪಿ ಟಾನಿಕ್‌


Team Udayavani, Dec 2, 2017, 9:47 AM IST

02-20.jpg

ಗುಜರಾತ್‌ ವಿಧಾನಸಭೆ ಚುನಾವಣೆಗೆ ಬರೀ ಒಂಬತ್ತು ದಿನಗಳು ಬಾಕಿಯಿರುವಾಗ ಜಿಡಿಪಿ ಏರಿಕೆಯಾಗಿರುವ ಶುಭ ಸುದ್ದಿ ಹೊರಬಿದ್ದಿರುವುದು ಬಿಜೆಪಿ ಪಾಲಿಗೆ ಭಾರೀ ನಿರಾಳತೆಯನ್ನು ಒದಗಿಸಿದೆ. 

ಸತತ ಐದು ತ್ತೈಮಾಸಿಕಗಳಲ್ಲಿ ಕುಸಿತವನ್ನು ಕಂಡಿದ್ದ ದೇಶದ ಆರ್ಥಿಕ ಅಭಿವೃದ್ಧಿಯ ಮಾಪಕವಾಗಿರುವ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ಸೆಪ್ಟೆಂಬರ್‌ ತ್ತೈಮಾಸಿಕದಲ್ಲಿ ತುಸು ಚೇತರಿಕೆ ಕಂಡಿರುವುದು ದೇಶದ ಆರ್ಥಿಕ ಸ್ಥಿತಿ ಮತ್ತೆ ಹಳಿಗೆ ಮರಳುತ್ತಿರುವುದರ ಶುಭಸೂಚನೆ. ಜೂನ್‌ ತ್ತೈಮಾಸಿಕದಲ್ಲಿ ಅತ್ಯಂತ ಕಡಿಮೆ ಶೇ.5.3ಕ್ಕೆ ಇಳಿದಿದ್ದ ಜಿಡಿಪಿ ಸೆಪ್ಟೆಂಬರ್‌ ತ್ತೈಮಾಸಿಕದಲ್ಲಿ ಶೇ.6.3ಕ್ಕೇರಿದೆ. ವಿಪಕ್ಷಗಳು ಮಾತ್ರವಲ್ಲದೆ ಬಿಜೆಪಿಯವರೇ ಆದ ಯಶವಂತ್‌ ಸಿನ್ಹ, ಶತ್ರುಘ್ನ ಸಿನ್ಹ ಮತ್ತಿತರರಿಂದ ಜಿಡಿಪಿ ಕುಸಿತದ ಹಿನ್ನೆಲೆಯಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ನರೇಂದ್ರ ಮೋದಿ ಸರಕಾರಕ್ಕೆ ಈ ಏರಿಕೆ ತೀರಾ ಅಗತ್ಯವಾಗಿದ್ದ ಚೈತನ್ಯವನ್ನು ತುಂಬಿದೆ. ನೋಟು ಅಪಮೌಲ್ಯ ಮತ್ತು ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದಾಗಿರುವ ಹಿಂಜರಿತ ತಾತ್ಕಾಲಿಕ ಎನ್ನುವುದನ್ನು ಜಿಡಿಪಿ ಏರಿಕೆ ಸಾಬೀತುಪಡಿಸಿದೆ. ಇದಕ್ಕೂ ಮೊದಲು ಅಮೆರಿಕದ ಮೂಡೀಸ್‌ ಸಂಸ್ಥೆ 13 ವರ್ಷಗಳ ಅನಂತರ ಭಾರತದ ಆರ್ಥಿಕ ಸ್ಥಿತಿ ಸುಸ್ಥಿರ ಮಟ್ಟಕ್ಕೆ ಏರಿದೆ ಎಂದು ಹೇಳಿತ್ತು. ವಿಶ್ವಬ್ಯಾಂಕ್‌ ಮತ್ತು ಸ್ಟಾಂಡರ್ಡ್‌ ಆ್ಯಂಡ್‌ ಪೂರ್ ಸಂಸ್ಥೆಯೂ ಭಾರತದ ಆರ್ಥಿಕತೆಗೆ ಧನಾತ್ಮಕ ಶ್ರೇಣಿಯನ್ನು ನೀಡಿತ್ತು. ಇದೀಗ ಜಿಡಿಪಿ ಬೆಳವಣಿಗೆ ಈ ಸಂಸ್ಥೆಗಳು ನೀಡಿರುವ ವರದಿಗಳಿಗೆ ಪೂರಕವಾಗಿದೆ.

ಮೋದಿ ಮತ್ತು ಕಾಂಗ್ರೆಸ್‌ಗೆ ಪ್ರತಿಷ್ಠೆಯನ್ನು ಪಣವಾಗಿಟ್ಟು ಹೋರಾಡುತ್ತಿರುವ ಗುಜರಾತ್‌ ವಿಧಾನಸಭೆ ಚುನಾವಣೆಗೆ ಬರೀ ಒಂಬತ್ತು ದಿನಗಳು ಬಾಕಿಯಿರುವಾಗ ಜಿಡಿಪಿ ಏರಿಕೆಯಾಗಿರುವ ಶುಭ ಸುದ್ದಿ ಹೊರಬಿದ್ದಿರುವುದು ಬಿಜೆಪಿ ಪಾಲಿಗೆ ಭಾರೀ ನಿರಾಳತೆಯನ್ನು ಒದಗಿಸಿದೆ. ಜಿಎಸ್‌ಟಿ ಮತ್ತು ನೋಟು ಅಪಮೌಲ್ಯದಿಂದ ದೇಶದ ಆರ್ಥಿಕತೆ ದಿವಾಳಿಯೆದ್ದಿದೆ ಎನ್ನುವುದೇ ಗುಜರಾತ್‌ ಚುನಾವಣೆಯಲ್ಲಿ ವಿಪಕ್ಷಗಳ ಮುಖ್ಯ ಅಸ್ತ್ರಗಳಾಗಿದ್ದವು. ಆದರೆ ಬೆನ್ನುಬೆನ್ನಿಗೆ ಬಂದಿರುವ ನಾಲ್ಕು ವರದಿಗಳು ಈ ಅಸ್ತ್ರವನ್ನೇ ಠುಸ್‌ ಮಾಡಿ ಬಿಟ್ಟಿವೆ. ಇನ್ನು ವಿಪಕ್ಷಗಳು ಮೋದಿ ಸರಕಾರದ ಆರ್ಥಿಕ ನೀತಿಗಳ ಕುರಿತು ಯಾವುದೇ ಟೀಕೆಗಳನ್ನು ಮಾಡಿದರೂ ಅದು ರಾಜಕೀಯ ಉದ್ದೇಶಿತವಲ್ಲದೆ ಬೇರೆ ಯಾವ ನೈಜ ಕಾಳಜಿಯನ್ನು ಹೊಂದಿಲ್ಲ ಎನ್ನುವುದು ಸಾಬೀತಾಗುತ್ತದೆ. 

ಉತ್ಪಾದನೆ, ವಿದ್ಯುತ್‌, ಅನಿಲ, ನೀರು ಪೂರೈಕೆ, ಇತರ ಸೇವೆಗಳು, ವ್ಯಾಪಾರ, ಹೊಟೇಲ್‌ ಉದ್ಯಮ, ಸಂವಹನ ಮತ್ತು ಪ್ರಸಾರ ಸಂಬಂಧಿ ಸೇವೆಗಳು ಸೇರಿದಂತೆ ವಿವಿಧ ವಲಯಗಳಲ್ಲಿ ಆಗಿರುವ ಅಭಿವೃದ್ಧಿ ಜಿಡಿಪಿ ಹೆಚ್ಚಳಕ್ಕೆ ಕಾರಣವಾಗಿವೆ. ಆದರೆ ಇದೇ ಅವಧಿಯಲ್ಲಿ ಕೃಷಿ ಮತ್ತು ಮೀನುಗಾರಿಕೆ, ರಿಯಲ್‌ ಎಸ್ಟೇಟ್‌ ಸೇರಿದಂತೆ ಕೆಲವು ಪ್ರಮುಖ ವಲಯಗಳ ಬೆಳವಣಿಗೆ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ ಎನ್ನುವ ಅಂಶವನ್ನು ಕೂಡ ಕೇಂದ್ರ ಸಾಂಖೀಕ ಕಚೇರಿಯ ವರದಿ ತಿಳಿಸಿದೆ. ಅದರಲ್ಲೂ ಕಳೆದ ಇದೇ ಅವಧಿಯ ತ್ತೈಮಾಸಿಕದಲ್ಲಿ ಶೇ.4.1ರಷ್ಟಿದ್ದ ಕೃಷಿ ಮತ್ತು ಮೀನುಗಾರಿಕೆ ಅಭಿವೃದ್ಧಿ ಈ ಅವಧಿಯಲ್ಲಿ ಶೇ.1.7ಕ್ಕೆ ಕುಸಿದಿರುವುದು ಹೆಚ್ಚು ಚಿಂತಿಸಬೇಕಾದ ವಿಚಾರ.

 ಮುಖ್ಯವಾಗಿ ಅಸಂಘಟಿತ ವಲಯದ ಅಭಿವೃದ್ಧಿ ಇನ್ನೂ ವೇಗ ಪಡೆದುಕೊಂಡಿಲ್ಲ ಎನ್ನುವುದು ಅಂಕಿಅಂಶದಿಂದ ತಿಳಿದು ಬರುತ್ತಿದೆ. ಅತಿ ಹೆಚ್ಚು ಜನರಿಗೆ ಉದ್ಯೋಗ ದೊರಕಿಸಿಕೊಟ್ಟಿರುವುದು ಅಸಂಘಟಿತ ವಲಯ. ಹೀಗಾಗಿ ಈ ವಲಯ ಅಭಿವೃದ್ಧಿಯಲ್ಲಿ ನಿರಂತರವಾಗಿ ಹಿಂದುಳಿದರೆ ಅದರ ಪರಿಣಾಮ ನೇರವಾಗಿ ಜನಸಾಮಾನ್ಯರ ಮೇಲಾಗುತ್ತದೆ. ಮೋದಿ ಪದೇ ಪದೇ 2022ಕ್ಕಾಗುವಾಗ ರೈತರ ಆದಾಯವನ್ನು ಇಮ್ಮಡಿಗೊಳಿಸುವ ಭರವಸೆಯನ್ನು ನೀಡುತ್ತಿದ್ದಾರೆ. ಆದರೆ ಕೃಷಿ ಕ್ಷೇತ್ರದ ಅಭಿವೃದ್ಧಿ ಹಿಮ್ಮುಖವಾಗಿ ಚಲಿಸುತ್ತಿರುವಾಗ ರೈತರ ಆದಾಯ ಇಮ್ಮಡಿಯಾಗುವುದು ಸಾಧ್ಯವೇ? ಈ ವಿಚಾರದಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮಾಡಿರುವ ಟೀಕೆಗಳನ್ನು ತುಸು ಗಂಭೀರವಾಗಿ ಪರಿಗಣಿಸುವುದು ಒಳ್ಳೆಯದು.  

ಸ್ಥಿತ್ಯಂತರದ ಅವಧಿಯಲ್ಲಿ ತಾತ್ಕಾಲಿಕ ಹಿನ್ನಡೆಗಳಾಗುವುದು ಸಹಜ ಬೆಳವಣಿಗೆ. ಯಾವುದೇ ಕ್ಷೇತ್ರಕ್ಕೂ ಅನ್ವಯಿಸಿ ಈ ಮಾತನ್ನು ಹೇಳಬಹುದು. ಅದರಲ್ಲೂ 125 ಕೋಟಿ ಜನರಿರುವ ದೇಶದ ಇಡೀ ಆರ್ಥಿಕ ವ್ಯವಸ್ಥೆಯನ್ನು ಸ್ಥಿತ್ಯಂತರಕ್ಕೆ ಒಳಪಡಿಸುವುದು ಅತ್ಯಂತ ಸವಾಲಿನ ಕೆಲಸ. ಈ ಅವಧಿಯಲ್ಲಾಗಿರುವ ಹಿನ್ನಡೆಯನ್ನು ಬೆಟ್ಟದಷ್ಟು ಮಾಡಿ ಟೀಕಿಸಿದವರು ಈಗ ಏನು ಹೇಳುತ್ತಾರೆ? ದೇಶದ ಭವಿಷ್ಯ ಉಜ್ವಲವಾಗಬೇಕೆಂಬ ದೂರದೃಷ್ಟಿಯಿಂದ ಕೈಗೊಳ್ಳುವ ದಿಟ್ಟ ನಿರ್ಧಾರಗಳ ಪರಿಣಾಮ ಪೂರ್ಣವಾಗಿ ಹೊರಹೊಮ್ಮುವ ತನಕ ಕಾಯುವ ತಾಳ್ಮೆಯಿಲ್ಲದೆ ತಾತ್ಕಾಲಿಕ ಲಾಭಕ್ಕಾಗಿ ನಿಂದಿಸುವವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ನೋಟು ಅಪಮೌಲ್ಯದಿಂದ ದೇಶದ ಆರ್ಥಿಕತೆ ಕಾಳಧನದ ಪಿಡುಗಿನಿಂದ ಮುಕ್ತಗೊಂಡು ಹೆಚ್ಚು ಪಾರದರ್ಶಕ ಮತ್ತು ವಿಶ್ವಾಸಾರ್ಹವಾಗುತ್ತಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.