ಏಡ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಿ


Team Udayavani, Dec 2, 2017, 2:57 PM IST

ray-1.jpg

ರಾಯಚೂರು: ಬೀದಿ ನಾಟಕ, ಭಿತ್ತಿ ಪತ್ರ, ಮಾಧ್ಯಮಗಳ ಮೂಲಕ ಜನರಲ್ಲಿ ಏಡ್ಸ್‌ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಬೈಲೂರು ಶಂಕರ ರಾಮ ತಿಳಿಸಿದರು.

ನಗರದ ಡಿಸಿ ಕಚೇರಿ ಆವರಣದಲ್ಲಿ ವಿಶ್ವ ಏಡ್ಸ್‌ ವಿರೋಧಿ ದಿನದ ನಿಮಿತ್ತ ನನ್ನ ಆರೋಗ್ಯ ನನ್ನ ಹಕ್ಕು ಎಂಬ ಘೋಷಣೆಯೊಂದಿಗೆ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದಲ್ಲಿ ಮುಕ್ತವಾದ ಲೈಂಗಿಕತೆಗೆ ಅವಕಾಶವಿಲ್ಲ. ಹೀಗಾಗಿ ಏಡ್ಸ್‌ ರೋಗದ ಬಗ್ಗೆ ಇಂದಿಗೂ ಜನರಲ್ಲಿ ಪೂರ್ಣ ಪ್ರಮಾಣದ ಅರಿವಿನ ಕೊರತೆಯಿದೆ. ಯುವ ಜನತೆ ವೈದ್ಯರ ಸಲಹೆ ಪಡೆದು ಏಡ್ಸ್‌ನಿಂದ ಉಂಟಾಗುವ ದುಷ್ಪರಿಣಾಮ ಹಾಗೂ ತಡೆಗಟ್ಟುವ ಕ್ರಮಗಳ ಬಗ್ಗೆ ಜನರಲ್ಲಿ ಬೆಳಕು ಚೆಲ್ಲುವ ಕಾರ್ಯ ಮಾಡಬೇಕು ಎಂದರು. 

ಏಡ್ಸ್‌ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 8ನೇ ಸ್ಥಾನ ಪಡೆದಿದೆ. ಮುಂಬರುವ ದಿನಗಳಲ್ಲಿ ಏಡ್ಸ್‌ ಮುಕ್ತ ರಾಜ್ಯವನ್ನಾಗಿ ಮಾಡಲು ಸಮಾಜದ ಜನರು ಸಂಕಲ್ಪ ಮಾಡಬೇಕು. ಏಡ್ಸನಿಂದ ಬಳಲುವ ರೋಗಿಗಳಿಗೆ ಔಷಧೋಪಚಾರ ಒದಗಿಸಿ, ಅವರನ್ನು ಮುಖ್ಯವಾಹಿನಿಗೆ ತರಬೇಕು ಎಂದರು.

ಒಂದನೇ ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಮಹಾದೇವಯ್ಯ ಮಾತನಾಡಿ,
ಏಡ್ಸ್‌ ಯಾವ ರೀತಿ ಮಾರಕವಾಗುತ್ತದೆ ಎನ್ನುವ ಬಗ್ಗೆ ಜನರಿಗೆ ತಿಳಿಸಬೇಕು. ಅವರಿಗೆ ಸುಲಭಕ್ಕೆ ಅರ್ಥವಾಗುವಂಥ
ಮಾಧ್ಯಮ ಬಳಸಿಕೊಳ್ಳಬೇಕು. ಆ ಮೂಲಕ ಜನರಿಗೆ ಮುನ್ನೆಚ್ಚರಿಕೆ ಮೂಡಿಸಬೇಕು ಎಂದರು.

ಜಿಪಂ ಸಿಇಒ ಅಭಿರಾಂ ಜಿ. ಶಂಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಕೆ.ಎಸ್‌.ನಸೀರ್‌, ಜಿಲ್ಲಾ ಕ್ಷಯ ಮತ್ತು ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಸುರೇಂದ್ರಬಾಬು ಇತರರಿದ್ದರು.

ಏಡ್ಸ ರೋಗ ನಿರ್ಮೂಲನೆಗೆ ಎಲ್ಲರೂ ಪಣ ತೊಡಿ
ಸಿರವಾರ: ಎಚ್‌ಐವಿ, ಏಡ್ಸ್‌ ಮುಕ್ತ ಸಮಾಜ ನಿರ್ಮಿಸಲು ಎಲ್ಲರೂ ಪಣ ತೊಡಿ. ಎಚ್‌ಐವಿ ಪೀಡಿತರನ್ನು ಗೌರವಿಸಿ, ಮಾರಕ ರೋಗಗಳ ಬಗ್ಗೆ ಎಚ್ಚರಿಕೆ ಇರಲಿ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುನೀಲ ಸರೋದೆ ಹೇಳಿದರು.

ಶುಕ್ರವಾರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್‌ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಚ್‌ಐವಿ ಏಡ್ಸ್‌ ಕುರಿತು ಸಂಪೂರ್ಣ ಮಾಹಿತಿ ಪಡೆದು ತಮ್ಮನ್ನು ತಾವು ರಕ್ಷಿಸಿಕೊಳ್ಳುವುದರೊಂದಿಗೆ ಸದೃಢ ಸಮಾಜ ಕಟ್ಟುವಂತೆ ಯುವ ಜನತೆಗೆ ಕರೆ ನೀಡಿದರು. ಯುವಜನತೆಗೆ ಎಚ್‌ಐವಿ ಹರಡದಂತೆ ಕ್ರಮ ತಿಳಿಸುವುದರ ಜೊತೆಗೆ ಸೋಂಕಿತರನ್ನು ಕಳಂಕ ತಾರತಮ್ಯದಿಂದ ನೋಡದೆ ಸಹಾನುಭೂತಿಯಿಂದ ಕಾಣಬೇಕು ಎಂದರು. ಕಾಲೇಜು ಪ್ರಾಚಾರ್ಯ ಕುಂಟೆಪ್ಪ, ಡಾ| ಕಾವ್ಯ, ಕೆ.ಎಸ್‌. ಶ್ರೀದೇವಿ, ಗೀತಾ, ಉಪನ್ಯಾಸಕ ಪದ್ಮರಾಜ ಇದ್ದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.