ಸುದ್ದಿಗೋಷ್ಠಿಯಲ್ಲಿ ವರದಿಗಾರನ ಮೇಲೆ ಬಿಜೆಪಿ ನಾಯಕರ ಗೂಂಡಾಗಿರಿ
Team Udayavani, Dec 2, 2017, 4:19 PM IST
ತುಮಕೂರು: ಇಲ್ಲಿ ನಡೆಯುತ್ತಿದ್ದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತನೊಬ್ಬನ ಮೇಲೆ ಬಿಜೆಪಿ ಮುಖಂಡರಿಬ್ಬರು ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿ ಗೂಂಡಾಗಿರಿ ಮೆರೆದ ಘಟನೆ ಶನಿವಾರ ನಡೆದಿದೆ.
ಅಕ್ರಮ ಕಲ್ಲು ಗಣಿಗಾರಿಗೆಯ ಬಗ್ಗೆ ವರದಿ ಮಾಡಿದ ಖಾಸಗಿ ವಾಹಿನಿಯ ವರದಿಗಾರ ವಾಗೀಶ್ ಎನ್ನುವವರ ಮೇಲೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿ ಮತ್ತು ಪಾಲಿಕೆ ಸದಸ್ಯ ಬಾವಿಕಟ್ಟೆ ನಾಗಣ್ಣ ಎನ್ನುವವರು ಏಕಾಏಕಿ ಎರಗಿ ಹಲ್ಲೆ ನಡೆಸಿ ಬಟ್ಟೆಹರಿದು ಹಾಕಿದ್ದಾರೆ.
ಈ ಸಂಬಂಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುವುದಾಗಿ ತುಮಕೂರು ಎಸ್ಪಿ ದಿವ್ಯಾ ಗೋಪಿನಾಥ್ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
ಹಲ್ಲೆ ನಡೆದ ವೇಳೆ ವಾಗೀಶ್ ಒಬ್ಬರೆ ಇದ್ದು ಅಸಹಾಯಕರಾಗಿದ್ದರು, ಬೇರೆ ಯಾವ ಚಾನಲ್ನ ಪತ್ರಕರ್ತರು ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ನಿರಂತರವಾಗಿ ವಾಗೀಶ್ಗೆ ಬೆದರಿಕೆ ಹಾಕಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ