ಬ್ಯಾಂಕ್ ದಿವಾಳಿಯಾದರೆ ಠೇವಣಿ ಸುರಕ್ಷಿತವಲ್ಲ?
Team Udayavani, Dec 3, 2017, 6:40 AM IST
ಹೊಸದಿಲ್ಲಿ: ಬ್ಯಾಂಕ್ಗಳು ಆರ್ಥಿಕ ಸಂಕಷ್ಟಕ್ಕೀಡಾದರೆ ಅದನ್ನು ತುಂಬಿಕೊಳ್ಳಲು ಠೇವಣಿದಾರರ ಠೇವಣಿಯ ಒಂದು ಭಾಗ ಬಳಸಿಕೊಳ್ಳಲು ಅನುವು ಮಾಡುವ ಪ್ರಸ್ತಾವನೆ ಇದೀಗ ವಿವಾದಕ್ಕೀಡಾಗಿದ್ದು, ಮರುಪರಿಶೀಲನೆ ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ನಿಯಮವನ್ನು 2008ರ ವೇಳೆ ಐರೋಪ್ಯ ಒಕ್ಕೂಟದ ಆರ್ಥಿಕ ವ್ಯವಸ್ಥೆ ಕುಸಿದಾಗ ಪರಿಚಯಿಸಲಾಗಿತ್ತು. ಆದರೆ ಭಾರತದಲ್ಲಿ ಈಗ ಇದನ್ನು ಹಣಕಾಸು ನಿಲುವಳಿ ಮತ್ತು ಠೇವಣಿ ವಿಮೆ ಮಸೂದೆ (ಎಫ್ಆರ್ಡಿಐ) ಅಡಿ ಪ್ರಸ್ತಾಪಿಸ ಲಾಗಿದೆ. ಆದರೆ ಈ ಮಸೂದೆಯನ್ನು ಸಂಸದೀಯ ಸಮಿತಿಗೆ ವರ್ಗಾಯಿಸಲಾಗಿದ್ದು, ಈ ಸೌಲಭ್ಯದ ಬಗ್ಗೆ ಮರುಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ.
ಏನಿದು ಮಸೂದೆ?: ಸದ್ಯ 1 ಲಕ್ಷ ರೂ.ವರೆಗಿನ ಬ್ಯಾಂಕ್ ಠೇವಣಿಗೆ ವಿಮೆ ಇರುತ್ತದೆ. ಬ್ಯಾಂಕ್ ನಷ್ಟಕ್ಕೀಡಾದರೆ ವಿಮೆಯಿಂದಾಗಿ ಠೇವಣಿದಾರರಿಗೆ ಹಣ ಹಿಂಪಡೆಯುವುದು ಸಮಸ್ಯೆ ಆಗುವುದಿಲ್ಲ. ಬ್ಯಾಂಕ್ಗೂ ಮರುಪಾವತಿಯ ಹೊರೆ ಇರುವುದಿಲ್ಲ. ಆದರೆ ಹೊಸ ಶಿಫಾರಸಿನಲ್ಲಿ, ಹೊರೆ ಕಡಿಮೆ ಮಾಡಿಕೊಳ್ಳಲು ಬಳಸಬಹುದಾದ ಠೇವಣಿ ಮಿತಿ ನಿಗದಿಪಡಿಸಿಲ್ಲ. ಇದರಿಂದಾಗಿ ಎಲ್ಲ ಠೇವಣಿಗಳನ್ನೂ ಬ್ಯಾಂಕ್ ಬಳಸಿಕೊಳ್ಳಬಹುದಾಗಿದ್ದು, 1 ಲಕ್ಷಕ್ಕಿಂತ ಹೆಚ್ಚು ಠೇವಣಿಗೆ ವಿಮೆ ಇರುವುದಿಲ್ಲವಾದ್ದರಿಂದ ಗ್ರಾಹಕರಿಗೆ ಮರುಪಾವತಿ ಅಸಾಧ್ಯ. ಇದಕ್ಕೆ ಬ್ಯಾಂಕಿಂಗ್ ವಲಯದಿಂದ ಆಕ್ಷೇಪ ವ್ಯಕ್ತವಾಗಿದ್ದು, ಸರಕಾರ ಮರುಪರಿಶೀಲನೆಗೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…