ರಾಜ್ಯ ಮಾನವ ಹಕ್ಕು ಆಯೋಗವೀಗ ಅಕ್ಷರಶಃ ಅನಾಥ!


Team Udayavani, Dec 4, 2017, 9:52 AM IST

04-9.jpg

ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗ ಅಕ್ಷರಶಃ ಅನಾಥವಾಗಿದೆ. ನಾಗರಿಕರ ಮಾನವ ಹಕ್ಕುಗಳ ಉಲ್ಲಂಘನೆ  ಯಾದರೆ ನ್ಯಾಯ ಕೊಡಿಸಬೇಕಾದ ಸ್ವಾಯತ್ತ ಸಂಸ್ಥೆಯೇ ಇಂದು ದಿಕ್ಕಿಲ್ಲದೆ ದಯನೀಯ ಸ್ಥಿತಿ ತಲುಪಿದೆ.

ನ್ಯಾ. ಎಸ್‌.ಆರ್‌. ನಾಯಕ್‌ ನಿವೃತ್ತರಾದ ಬಳಿಕ 2012ರಿಂದ ಆಯೋಗಕ್ಕೆ ಖಾಯಂ ಅಧ್ಯಕ್ಷರಿಲ್ಲ. ಕಳೆದ ಐದೂವರೆ ವರ್ಷ ಸದ ಸ್ಯರು ಮತ್ತು ಹಂಗಾಮಿ ಅಧ್ಯಕ್ಷರ ಮೂಲಕವೇ ಆಯೋಗ ತನ್ನ ಕಾರ್ಯಾ ಭಾರ ನಡೆಸಿತು. ಸದಸ್ಯರಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಮೀರಾ ಸೆಕ್ಸೇನಾ ಹಾಗೂ ಜಿಲ್ಲಾ ನಿವೃತ್ತ ನ್ಯಾಯಾಧೀಶ ಸಿ.ಜಿ. ಹುನಗುಂದ ಅವರೂ ಕಳೆದ ತಿಂಗಳು ನಿವೃತ್ತ ರಾಗಿದ್ದು, ಆಯೋಗ ಪೂರ್ಣ ಪ್ರಮಾಣದಲ್ಲಿ ಖಾಲಿ ಆಗಿದೆ. ಕಾನೂನು ಪ್ರಕಾರ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹೈ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅವರನ್ನು ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು. ನ್ಯಾ. ಎಸ್‌.ಆರ್‌. ನಾಯಕ್‌ ಅವಧಿ ಮುಗಿದ ಬಳಿಕ ಅಧ್ಯಕ್ಷರ ಹುದ್ದೆಗೆ ಅರ್ಹರಿದ್ದವರು ಸಾಕಷ್ಟು ಮಂದಿ ಇದ್ದರು. ಆದರೆ, ಸಾಮಾನ್ಯ ಜನರು ದಿನನಿತ್ಯ ಒಡನಾಟ ಇಟ್ಟುಕೊಳ್ಳುವ ಆಯೋಗಕ್ಕೆ ಅವರ ಭಾಷೆಯಲ್ಲಿ ವ್ಯವ  ಹರಿಸಲು ಸ್ಥಳೀಯರು ಹಾಗೂ ಕನ್ನಡಿಗರು ಬೇಕೆಂಬ ಹಿನ್ನೆಲೆಯಲ್ಲಿ ಅಧ್ಯಕ್ಷರ ನೇಮಕ ನನೆಗುದಿಗೆ ಬಿದ್ದಿತ್ತು.

ಈ ಮಧ್ಯೆ, 2013ರಲ್ಲಿ ತಮಿಳುನಾಡು ಮೂಲದ ದೆಹಲಿ ಹೈಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ ಡಿ. ಮುರಗೇಶನ್‌ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಆದರೆ, ಅವರ ತಮಿಳು ಹಿನ್ನೆಲೆಗೆ ಅಪಸ್ವರ ಕೇಳಿ ಬಂದಿದ್ದರಿಂದ ಹುದ್ದೆ ವಹಿಸಿಕೊಳ್ಳಲು ನ್ಯಾ. ಮುರಗೇಶನ್‌ ನಿರಾಕರಿಸಿದರು.  ಅದಾದ ಬಳಿಕ ಕನ್ನಡಿಗರೇ ಆದ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಆರ್‌ .ವಿ. ರವೀಂದ್ರನ್‌ ಅವರನ್ನು ನೇಮಿಸಲು ಸರ್ಕಾರ ಮನಸ್ಸು ಮಾಡಿತ್ತಾದರೂ ಇದಕ್ಕೆ ಅವರು ಒಪ್ಪಿಕೊಂಡಿಲ್ಲ. ನಂತರ ಅಧ್ಯಕ್ಷರ
ನೇಮಕದ ಬಗ್ಗೆ ಸರ್ಕಾರದಿಂದ ಗಂಭೀರ ಪ್ರಯತ್ನ ನಡೆದಿಲ್ಲ. ಈಗ ಗುಜರಾತ್‌ ಮೂಲದ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಎಚ್‌. ವಘೇಲಾ ಅವರ ಹೆಸರು ಚಾಲ್ತಿಯಲ್ಲಿದ್ದು, ಈ ಸಂಬಂಧ ಕಳೆದ ಆಗಸ್ಟ್‌ 31ಕ್ಕೆ ಸಭೆ ನಿಗದಿಪಡಿಸಲಾಗಿತ್ತು. ಆದರೆ, ಮುಖ್ಯ  ಮಂತ್ರಿಯವರ ಕಾರ್ಯದೊತ್ತಡದಿಂದ ಸಭೆ ರದ್ದಾಗಿತ್ತು.

10 ಸಾವಿರ ದೂರುಗಳ ಕತೆ ಕೇಳ್ಳೋರಿಲ್ಲ: ಆಯೋಗದಲ್ಲಿ ಈವರೆಗೆ 67 ಸಾವಿರ ದೂರುಗಳು ದಾಖಲಾಗಿದ್ದು, ಈವರೆಗೆ
58 ಸಾವಿರ ದೂರುಗಳನ್ನು ಇತ್ಯರ್ಥ ಪಡಿಸ ಲಾಗಿದೆ. ಇನ್ನೂ 9ರಿಂದ 10 ಸಾವಿರ ದೂರುಗಳು ಇತ್ಯರ್ಥಕ್ಕೆ ಬಾಕಿ ಇದ್ದು,
ದೂರುಗಳ ಗೋಳು ಕೇಳುವವರಿಲ್ಲದಂತಾಗಿದೆ. ಪ್ರತಿ ವರ್ಷ ಆಯೋಗದಲ್ಲಿ ಸರಾಸರಿ 6 ಸಾವಿರ ದೂರು ದಾಖಲಾಗುತ್ತವೆ ಎಂದು ಆಯೋಗದ ಅಧಿಕಾರಿಗಳು ಹೇಳುತ್ತಾರೆ. ಆದರೆ, ಖಾಯಂ ಅಧ್ಯಕ್ಷ ರಿಲ್ಲದ 5 ವರ್ಷಗಳಲ್ಲಿ ಆಯೋಗಕ್ಕೆ ಸಲ್ಲಿಕೆಯಾಗುವ ದೂರುಗಳ ಪ್ರಮಾಣದಲ್ಲಿ ಗಣನೀಯ ಇಳಿಮುಖವಾಗಿದೆ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸುತ್ತವೆ.

ಅಧ್ಯಕ್ಷರ ನೇಮಕಕ್ಕೆ ಡಿ.10ರ ಗಡುವು
ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನವಾದ ಡಿ.10ಕ್ಕೆ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರ ನೇಮಕಕ್ಕೆ ಗಡುವು ಕೊಟ್ಟಿರುವ ವಿವಿಧ ಮಾನವ ಹಕ್ಕುಗಳ ಸಂಘಟನೆಗಳು, ತಪ್ಪಿದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಸಿಎಂ ಕಚೇರಿಗೆ ಮನವಿ ಸಲ್ಲಿಸಿರುವ ಮಾನವ ಹಕ್ಕು ಹೋರಾಟಗಾರರು, ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. 

ಮಾನವ ಹಕ್ಕುಗಳ ರಕ್ಷಣೆ ಮಾಡುವ ಸ್ವಾಯತ್ತ ಸಂಸ್ಥೆ ಈ ರೀತಿ ಅನಾಥವಾಗಿರುವುದು ನಾಚಿಕೆಗೇಡಿನ ಸಂಗತಿ. ಸ್ಥಳೀಯರು ಅಥವಾ ಕನ್ನಡಿಗರು ಬೇಕು ಎಂದಾದರೆ, ಕರ್ನಾಟಕದವರೇ ಆಗಿರುವ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಹೆಸರನ್ನು ಸರ್ಕಾರ ಪರಿಗಣಿಸಲಿ.
 ●ಟಿ. ನರಸಿಂಹಮೂರ್ತಿ, ಮಾನವಹಕ್ಕು ಹೋರಾಟಗಾರ

●ರಫಿಕ್‌ ಅಹ್ಮದ್‌

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.