ರಮ್ಯಾ ಕ್ಯಾಂಟೀನ್ಗೆ ಮಂಡ್ಯದಲ್ಲಿ ಚಾಲನೆ
Team Udayavani, Dec 4, 2017, 9:56 AM IST
ಮಂಡ್ಯ: ಅಪ್ಪಾಜಿ ಆಯ್ತು, ಜನಸ್ನೇಹಿ ಆಯ್ತು, ಈಗ ರಮ್ಯಾ ಕ್ಯಾಂಟೀನ್ ನಗರದಲ್ಲಿ ಭಾನುವಾರದಿಂದ ಶುರುವಾಗಿದೆ. ಈ ಕ್ಯಾಂಟೀನ್ ಕೂಡ ಬಡವರು, ಕೂಲಿ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಆರಂಭಿಸಲಾಗಿದೆ ಎನ್ನುವುದು ಮಾಲೀಕರು ಹೇಳುವ ಮಾತು. ರಮ್ಯಾ ಅಭಿಮಾನಿ ರಘು ಹೋಟೆಲ್ ಮಾಲೀಕರಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆ ರಸ್ತೆಯಲ್ಲಿಯೇ ಕ್ಯಾಂಟೀನ್ಗೆ
ಚಾಲನೆ ನೀಡಲಾಗಿದೆ. ಆರಂಭದ ದಿನದಂದು ಸಾರ್ವಜನಿಕರಿಗೆ ಉಚಿತ ಉಪಾಹಾರ ವಿತರಣೆ ಮಾಡಲಾಯಿತು.
ಇಂದಿರಾ, ಅಪ್ಪಾಜಿ ಕ್ಯಾಂಟೀನ್ ಗಿಂತಲೂ ರಮ್ಯಾ ಕ್ಯಾಂಟೀನ್ ಭಿನ್ನವಾಗಿದೆ. ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ಪಾರ್ಸಲ್ಗೂ 10 ರೂ. ಮಾತ್ರ ನಿಗದಿಪಡಿಸಲಾಗಿದೆ. ಕುಡಿಯುವ ಬಿಸಿನೀರಿನ ವ್ಯವಸ್ಥೆ ಮಾಡಲಾಗಿದೆ. ವಿವಿಧ ಬಗೆಯ ದೋಸೆ, ರವೆ ಇಡ್ಲಿ,
ಚಪಾತಿ, ಮುದ್ದೆ, ಉದ್ದಿನವಡೆ, ಮಸಾಲೆ ವಡೆ,ಅನ್ನ-ಸಾಂಬಾರ್ ಅನ್ನು ನೀಡಲಾಗುತ್ತಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಆತ್ಮಾನಂದ ಉದ್ಘಾಟಿಸಿದರು. ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶುಭದಾಯಿನಿ, ಜಿಲ್ಲಾ ಮಹಿಳಾಧ್ಯಕ್ಷೆ ಅಂಜನಾ, ನಗರಸಭೆ ಮಾಜಿ ಅಧ್ಯಕ್ಷೆ ನಾಗಮಣಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ