ಬಾಳಗೆಳತಿಯೇ, ತರವೇ ನನ್ನಲಿ ಈ ಕೋಪ?


Team Udayavani, Dec 5, 2017, 1:39 PM IST

bal-g-elati.jpg

ನೀ ಬರುವ ದಾರಿಯಲ್ಲಿ ನನ್ನೆರಡು ಕಣ್ಣುಗಳ ಚೆಲ್ಲಿ, ನಿನ್ನ ಮುದ್ದಾದ ಮೊಗವ ಕಣ್ತುಂಬಿಸಿಕೊಳ್ಳಲು ಕಾತರನಾಗಿದ್ದೇನೆ. ಕಾಯಿಸದೆ ಒಳ್ಳೆಯ ಹುಡುಗಿಯಂತೆ ಬಳಿ ಬಂದು ಬಿಡು… 

ಬಾಳ ಗೆಳತಿಯೇ…
ಮನದ ಮನೆ ಬರಿದಾಗಿದೆ. ಕಣ್ಣಲ್ಲಿ ನಿತ್ಯ ಕಂಗೊಳಿಸುವ ಬೆಳಕಿಲ್ಲ. ಎದೆಯ ಮೂಲೆಯಲ್ಲಿ ಸೂತಕದ ಛಾಯೆ. ಮಾತುಗಳಲ್ಲಿ ಸತ್ವವಿಲ್ಲ. ಆಗಾಗ ಮೈದಳೆದು ಅಚ್ಚರಿಗೊಳಿಸುವ ಕತೆಗಳು ಕಾಣೆಯಾಗಿವೆ. ನಿಜಮಿತ್ರರಂತೆ ಒಡನಿದ್ದು ಸಲಹುವ, ಆಸಕ್ತಿಯಿಂದ ಓದಿಸಿಕೊಳ್ಳುತ್ತಾ ಕುತೂಹಲ ಹೆಚ್ಚಿಸಿ, ಜೀವನೋತ್ಸಾಹವನ್ನು ಇಮ್ಮಡಿಗೊಳಿಸುವ ಪುಸ್ತಕಗಳು ಇಂದೇಕೋ ಬೇಸರ ಮೂಡಿಸಿವೆ. ಒಂಥರದ ಒಬ್ಬಂಟಿತನ ಮೈಮನವನ್ನಾವರಿಸಿ ನನ್ನನ್ನು ಹಣಿದು ಹೈರಾಣಾಗಿಸಿದೆ.

ಕಾರಣ ಗೊತ್ತೆ? ದಿನದ ಒಂದರೆಕ್ಷಣವಾದರೂ ನಿನ್ನ ಮುದ್ದಾದ ಮೊಗವನ್ನ ತೋರಿಸಿ, ಮುಗುಳ್ನಕ್ಕು ಮರೆಯಾಗುತ್ತಿದ್ದವಳು ವಾರವಾದರೂ ದರ್ಶನಭಾಗ್ಯ ನೀಡದೆ ಸತಾಯಿಸುತ್ತಿರುವುದು. ನಿಷ್ಕಲ್ಮಷವಾಗಿ ಜನ್ಮಜನ್ಮದ ನಂಟಿನಂತೆ, ನಿನ್ನ ಹಚ್ಚಿಕೊಂಡು ಪ್ರೀತಿಯೊಲವ ಸುಧೆಯಲ್ಲಿ ಕೊಚ್ಚಿಹೋಗುತ್ತಿರುವ ನನಗೆ, ನಿನ್ನ ವದನ ಕಾಣದೆ ಹೃದಯಕ್ಕೆ ಕಿಚ್ಚು ಬಿದ್ದಂತಾಗಿದೆ. ಕಾರಣ ಹೇಳದೆ ಅದೆಲ್ಲಿಗೆ ತೆರಳಿಬಿಟ್ಟೆ ನೀನು? ಗೊತ್ತಾಗುತ್ತಿಲ್ಲ!

ವಿರಹದುರಿಯ ನೋವ ಸಹಿಸಿದವನೇ ಬಲ್ಲ. ನಲ್ಲೆಯಿಲ್ಲದೆ, ಗೆಳತಿಯ ಕಣ್ಣಂಚಿನ ನೋಟ ಕಾಣಸಿಗದೆ, ದೈವಸನ್ನಿಧಿಯಲ್ಲಿ ಸಿಗುವಂತಹ ಸ್ವರ್ಗ ಸಾಮೀಪ್ಯವಿಲ್ಲದೆ, ನೂರು ನೋವಿಗೆ ಮದ್ದು ನೀಡುವ ಚಿಗುರುಬೆರಳ ಸಾಂತ್ವನ ದೊರೆಯದೆ ಪ್ರೇಮಿಯೊಬ್ಬ ಪರಿತಪಿಸುವ ಪಾಡನ್ನು ವಿವರಿಸಲಾಗುವುದಿಲ್ಲ. ಬೆಳಗಿನಿಂದ ಸಂಜೆಯವರೆಗೆ ಗುರಿತಪ್ಪಿದ ಬಾಣದಂತೆ, ದಿಕ್ಕುತಪ್ಪಿದ ಪಥಿಕನಂತೆ ಅಲೆದಾಡಿ ಬಂದೆ.

ಬೀದಿಯ ಯಾವುದೋ ತಿರುವಿನಲ್ಲಿ ಎಲ್ಲಾದರೂ ನಿನ್ನ ಮಂದಹಾಸಭರಿತ ಮುದ್ದು ಮೊಗ ತೋರಬಹುದೇನೋ ಎಂದು. ಊಹುಂ! ನಿರಾಸೆಯೊಂದನ್ನು ಬಿಟ್ಟು ಏನೂ ದಕ್ಕಲಿಲ್ಲ. ಒಂಚೂರೂ ಸುಳಿವು ಕೊಡದೆ ನೀನು ಬಿರಬಿರನೆ ನಡೆದದ್ದಾದರೂ ಎಲ್ಲಿಗೆ? ಮನದಲ್ಲಿ ಏಳುತಿಹ ನೂರೆಂಟು ಪ್ರಶ್ನೆಗಳಿಗೆ ಉತ್ತರ ದೊರಕುತ್ತಿಲ್ಲ. ಹುಚ್ಚುಕಡಲ ಕಿನಾರೆಯಲ್ಲಿ, ಒಬ್ಬರಿಗೊಬ್ಬರು ಬೆನ್ನಿಗಾನಿಕೊಂಡು, ಮಳಲರಾಶಿಯ ಮೇಲೆ ಹೆಜ್ಜೆಗುರುತುಗಳನ್ನು ಚೆಲ್ಲುತ್ತಾ, ಎಂದಿಗೂ ಅಗಲದ ಆಣೆ-ಪ್ರಮಾಣಗಳನ್ನು ಮಾಡಿದ್ದು ನೆನಪಾಗುತ್ತಿದೆ.

ಹುಣ್ಣಿಮೆಯ ಹಾಲುಚೆಲ್ಲಿದ ಬೆಳದಿಂಗಳ ಬೆಳಕಲ್ಲಿ, ಮಡಿಲಲ್ಲಿ ಮಲಗಿ ಕಪ್ಪು ಬಾನಿನ ತುಂಬ ಹರಡಿಕೊಂಡ ತುಣುಕು ದೀಪಗಳಂಥ ನಕ್ಷತ್ರಗಳ ಎಣಿಸುತ್ತಾ ನೂರು ಜನ್ಮಕ್ಕೂ ನೀನೇ ನನ್ನ ಜೊತೆಗಾರನಾಗಬೇಕು ಎಂದದ್ದೂ ಎದೆಗಿರಿಯುತ್ತಿದೆ. ಇಷ್ಟೆಲ್ಲ ಭರವಸೆಗಳಿಗೆ ಆಸರೆಯಾಗಿ, ಕನಸುಗಳಿಗೆ ಸಾಥ್‌ ಕೊಟ್ಟು, ನಿರೀಕ್ಷೆಗಳ ಮೈದಡವಿ ಮೌನವಾಗಿ ಮರೆಯಾದ ಅಂತರಂಗದ ಆತ್ಮಸಖೀಯೇ, ಈ ಮುನಿಸು ನ್ಯಾಯವೇ…?

ನನ್ನೆದೆಯಲ್ಲಿ ನವಿರಾಗಿ ಹರಡಿಕೊಂಡ ನಿನ್ನ ನೆನಪುಗಳ ನೆತ್ತಿ ನೇವರಿಸುತ್ತಾ, ನಿದ್ದೆ ಬರದ ರಾತ್ರಿಗಳ ಸುಡುತ್ತಿದ್ದೇನೆ. ಸುಮ್ಮನೆ ಸತಾಯಿಸೋಣವೆಂದು, ನನ್ನ ಅಚಲ ನಂಬಿಕೆಯನ್ನು ನೀನೇನಾದರೂ ಪರೀಕ್ಷಿಸುತ್ತಿದ್ದರೆ ದಯವಿಟ್ಟು ನಿಲ್ಲಿಸು. ಇನ್ನೂ ಸಹಿಸಿಕೊಳ್ಳುವ ತಾಳ್ಮೆ ನನಗಿಲ್ಲ. ನೀ ಬರುವ ದಾರಿಯಲ್ಲಿ ನನ್ನೆರಡು ಕಣ್ಣುಗಳ ಚೆಲ್ಲಿ, ನಿನ್ನ ಮುದ್ದಾದ ಮೊಗವ ಕಣ್ತುಂಬಿಸಿಕೊಳ್ಳಲು ಕಾತರನಾಗಿದ್ದೇನೆ. ಕಾಯಿಸದೆ ಒಳ್ಳೆಯ ಹುಡುಗಿಯಂತೆ ಬಳಿ ಬಂದು ಬಿಡು. ನಿನ್ನೊಲವ ಧಾರೆಯಲಿ ಅನುಗಾಲ ಮೀಯಲು ಹಂಬಲಿಸುತ್ತಿರುವ.
– ನಿನ್ನವನು
ನಾಗೇಶ್‌.ಜೆ. ನಾಯಕ‌

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.