ಚೀನ-ಪಾಕ್‌ ಸ್ನೇಹದಲ್ಲಿ ಬಿರುಕು?


Team Udayavani, Dec 6, 2017, 6:00 AM IST

pak.jpg

ಇಸ್ಲಾಮಾಬಾದ್‌: ಒಂದಲ್ಲ ಒಂದು ಕಾರಣಕ್ಕಾಗಿ ಜಾಗತಿಕ ಮುಖಭಂಗ ಅನುಭವಿಸುತ್ತಾ ಬಂದಿರುವ ಪಾಕಿಸ್ಥಾನ ಈಗ ಚೀನ ಕೆಂಗಣ್ಣಿಗೂ ಗುರಿಯಾಗಿದೆ. ಗಳಸ್ಯ ಕಂಠಸ್ಯನಂತಿದ್ದ ರಾಷ್ಟ್ರದ ಸ್ನೇಹವನ್ನೂ ಕಳೆದುಕೊಳ್ಳುವ ಆತಂಕದಲ್ಲಿದೆ. ಉಗ್ರರ ಬೆಂಬಲಕ್ಕೆ ನಿಂತಿದೆ ಎನ್ನುವ  ಕಾರಣಕ್ಕಾಗಿ ಅಮೆರಿಕದ ಆರ್ಥಿಕ ನೆರವನ್ನು ಕಳೆದು ಕೊಂಡಿರುವ ಪಾಕಿಸ್ಥಾನಕ್ಕೆ ಈಗ ಚೀನ ಭ್ರಷ್ಟಾಚಾರದ ನೆಪವೊಡ್ಡಿ ಶಾಕ್‌ ನೀಡಿದೆ.

ಚೀನ-ಪಾಕಿಸ್ಥಾನ ಸಂಪರ್ಕ ಸೇತುವಾಗಿ ನಿರ್ಮಾಣ ಹಂತದಲ್ಲಿರುವ ಬರೋಬ್ಬರಿ 50 ಶತಕೋಟಿ ಡಾಲರ್‌ ಮೊತ್ತದ ಚೀನ- ಪಾಕಿಸ್ಥಾನ ಆರ್ಥಿಕ ಕಾರಿಡಾರ್‌ (ಸಿಪಿಇಸಿ) ಯೋಜನೆಗೆ ಆರ್ಥಿಕ ನೆರವು ನೀಡುವ ಒಪ್ಪಂದದಿಂದ ಸದ್ಯಕ್ಕೆ ಹಿಂದಕ್ಕೆ ಸರಿಯುವುದಾಗಿ ಚೀನ ಹೇಳಿದೆ. ಭ್ರಷ್ಟಾಚಾರ, ಅವ್ಯವಹಾರ ದೂರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆರ್ಥಿಕ ನೆರವು ಸ್ಥಗಿತಗೊಳಿಸಲು ಚೀನ ನಿರ್ಧರಿಸಿದೆ. ಇದರಿಂದ ಪಾಕಿಸ್ಥಾನ ಅಧಿಕಾರಿಗಳು ಗಾಬರಿ ಗೊಂಡಿದ್ದಾರೆ. ಚೀನ ಅಧಿಕಾರಿಗಳ ಜತೆ ಮಾತುಕತೆಗೂ ಮುಂದಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ಥಾನ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎ)ದ ಮಹತ್ವಾಕಾಂಕ್ಷೆಯ ಯೋಜನೆ ಎಂದೇ ಹೇಳಲಾಗುತ್ತಿದ್ದ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೇ ಇದೀಗ ಬ್ರೇಕ್‌ ಬೀಳುವ ಆತಂಕದ ಸ್ಥಿತಿ ಸೃಷ್ಟಿಯಾಗಿದೆ.

ಯಾಕೆ ಈ ನಿರ್ಧಾರ?
ಬೀಜಿಂಗ್‌ ಪ್ರಕರಣದ ಬಳಿಕ ಆರ್ಥಿಕ ಸಹಕಾರ ನಿಯಮಾವಳಿಯಲ್ಲಿ ಒಂದಿಷ್ಟು ತಿದ್ದುಪಡಿಗೆ ಮುಂದಾಗಿರುವುದೇ ಚೀನದ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ. ಹೊಸ ನಿಯಮಾವಳಿ ಪ್ರಕಾರ ಪಾಕಿಸ್ಥಾನಕ್ಕೆ ಆರ್ಥಿಕ ನೆರವು ಅಸಾಧ್ಯ ಎನ್ನುವುದು ಸರಕಾರಿ ಹಿರಿಯ ಅಧಿಕಾರಿಗಳ ಲೆಕ್ಕಾಚಾರವಾಗಿದೆ ಎಂದು ಪಾಕಿಸ್ಥಾನದ ಸುದ್ದಿ ಸಂಸ್ಥೆ ಡಾನ್‌ ವರದಿ ಮಾಡಿದೆ. 

ಚೀನದ ಮಹತ್ವಾಕಾಂಕ್ಷೆಯ ಒನ್‌ ಬೆಲ್ಟ್ ಒನ್‌ ರೋಡ್‌ ಯೋಜನೆಯ ಭಾಗ ಇದಾಗಿದ್ದರಿಂದ ಪಾಕಿಸ್ಥಾನವು ಚೀನ ಜತೆ ಕೈಜೋಡಿಸಿತ್ತು. ಈ ಯೋಜನೆಯಂತೆ ಈ ಹೆದ್ದಾರಿ ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ)ದ ಮೂಲಕ ಹಾದು ಹೋಗಲಿದೆ. ಇದರಿಂದ ಪಾಕ್‌ನ ಬಲೂಚಿಸ್ಥಾನ ಹಾಗೂ ಚೀನದ ಕ್ಸಿನ್‌ಜಿಯಾಂಗ್‌ 
ಸಂಪರ್ಕ ಸಾಧ್ಯವಾಗಲಿದೆ.

ಪಾಕ್‌ಗೆ ಏಕೆ ಆತಂಕ ?
ಚೀನ ಜತೆ ಒಪ್ಪಂದ ಮಾಡಿಕೊಂಡಿದ್ದ ಪಾಕಿಸ್ಥಾನಕ್ಕೆ ಇದರಿಂದ ತನ್ನ ಮೂರು ಪ್ರಮುಖ ಯೋಜನೆಗಳೇ ನನೆಗುದಿಗೆ ಬೀಳುವ ಆತಂಕ ಶುರುವಾಗಿದೆ. ಅಂದಾಜು 81 ಶತಕೋಟಿ ರೂ. ಮೌಲ್ಯದ, 210 ಕಿಲೋ ಮೀಟರ್‌ ದೂರದ ದೆರಾ ಇಸೆ¾„ಲ್‌ ಖಾನ್‌-ಜೋಬ್‌ ರಸ್ತೆ, 19.76 ಶತಕೋಟಿ ರೂ. ಮೌಲ್ಯದ, 110 ಕಿಲೋ ಮೀಟರ್‌ ದೂರದ ಖುಜ್ಧರ್‌-ಬಸಿಮಾ ರಸ್ತೆ ಹಾಗೂ 8.5 ಶತ ಕೋಟಿ ರೂ. ಮೌಲ್ಯದ 136 ಕಿಲೋ ಮೀಟರ್‌ ದೂರದ ರೈಕೋಟ್‌-ಥಾಕೋಟ್‌ ಕರಕರಾಮ್‌ ಹೈವೇ ನಿರ್ಮಾಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.