ಮತ್ತೆ ಮಾಸ್ಕ್ ಹೈಡ್ರಾಮಾ!


Team Udayavani, Dec 6, 2017, 10:21 AM IST

06-14.jpg

ಹೊಸದಿಲ್ಲಿ: ಭಾರತ ವಿರುದ್ಧದ ಟೆಸ್ಟ್‌ ಪಂದ್ಯದ ಎರಡನೇ ದಿನ ವಾಯುಮಾಲಿನ್ಯ ನೆಪವೊಡ್ಡಿ ಮಾಸ್ಕ್ ಧರಿಸಿ ಕ್ರೀಡಾಂಗಣಕ್ಕೆ ಇಳಿದಿದ್ದ ಲಂಕಾ ಆಟಗಾರರು ಸತತ ಮೂರನೇ ದಿನವೂ ಮಾಸ್ಕ್ ಧರಿಸಿಯೇ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಸೋಲಿನ ಭಯದಲ್ಲಿರುವ ಲಂಕನ್ನರ ಹೈಡ್ರಾಮಾ ಎಂದು ಮೂದಲಿಸಿದ್ದಾರೆ.

4ನೇ ದಿನದ ಆಟದ ವೇಳೆ ಲಂಕಾ ವೇಗಿ ಸುರಂಗ ಲಕ್ಮಲ್‌ ಕ್ರೀಡಾಂಗಣದಲ್ಲೇ ವಾಂತಿ ಮಾಡಿಕೊಂಡರು. ಕೂಡಲೇ ಚಂಡಿಮಾಲ್‌ ಹಾಗೂ ತಂಡದ ವೈದ್ಯಕೀಯ ಸಿಬಂದಿ ವರ್ಗ ಆಟಗಾರನ ನೆರವಿಗೆ ಧಾವಿಸಿದರು. 

ರವಿವಾರದ ಆಟದ ವೇಳೆಯೂ ಲಕ್ಮಲ್‌ ಅನಾರೋಗ್ಯಕ್ಕೆ ಈಡಾಗಿದ್ದರು. ರವಿವಾರ ಅನಾರೋಗ್ಯದ ನೆಪವೊಡ್ಡಿ ಲಹಿರು ಗಾಮಗೆ ಕೂಡ ಅಂಗಳದಿಂದ ಹೊರನಡೆದಿದ್ದರು. ಈ ವೇಳೆ ಲಂಕಾ ಆಟಗಾರರು ವಾಯುಮಾಲಿನ್ಯದ ಕಾರಣ ನೀಡಿದ್ದರು. ಅಂಪಾಯರ್‌ಗೂ ಸಂದೇಶವನ್ನು ರವಾನಿಸಿ ಮನದಟ್ಟು ಮಾಡುವ ಪ್ರಯತ್ನ ನಡೆಸಿದ್ದರು. ಇದು ವಿಫ‌ಲವಾಗಿತ್ತು. ಒಟ್ಟಾರೆ 28 ನಿಮಿಷ ಪಂದ್ಯಕ್ಕೆ ಅಡಚಣೆಯಾಗಿತ್ತು.

ಆದರೆ ಭಾರತೀಯ ಆಟಗಾರರು ಮಾಸ್ಕ್ ಧರಿಸದೇ ಪಂದ್ಯವನ್ನು ಆಡಿದರು. ಇದಕ್ಕೆ ಶ್ರೀಲಂಕಾದ ಮಾಜಿ ಆಟಗಾರ ಅರವಿಂದ ಡಿ’ಸಿಲ್ವ ಮಂಗಳವಾರ ಪ್ರತಿಕ್ರಿಯಿಸಿದ್ದು, ಭಾರತೀಯ ಆಟಗಾರರ ನಡೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ವಿಶ್ವದಲ್ಲೇ ಬಲಿಷ್ಠ ತಂಡ ಭಾರತ. ಆ ತಂಡದ ಆಟಗಾರರು ಅಪಾಯ ಮೈಮೇಲೆ ಎಳೆದುಕೊಂಡು ಆಡುತ್ತಿರುವುದು ಏಕೆ ಎಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ.

ವೇಗಿ ಶಮಿಗೂ ಅನಾರೋಗ್ಯ
ಭಾರತ ವೇಗಿ ಮೊಹಮ್ಮದ್‌ ಶಮಿ ಮಂಗಳವಾರದ ಆಟದ ವೇಳೆ ಅನಾರೋಗ್ಯದಿಂದ ಮೈದಾನದಿಂದ ಹೊರನಡೆದಿದ್ದರು. ಮೂಲಗಳ ಪ್ರಕಾರ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಿಸಿಸಿಐ ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೆ ಸೋಮವಾರದ ಆಟದ ಬಳಿಕ ಶಮಿ ಪ್ರತಿಕ್ರಿಯಿಸಿದ್ದು, ವಾಯುಮಾಲಿನ್ಯ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ನಮಗೆ ಮಾಲಿನ್ಯದಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ ಎಂದಿದ್ದರು.

ಆಯೋಜನೆಗೂ ಮುನ್ನ ಚಿಂತನೆ
ಮಾಲಿನ್ಯ ಕಾರಣದಿಂದ ಪಂದ್ಯಕ್ಕೆ ತೊಂದರೆ ಆಗಿರಬಹುದು ಎನ್ನುವುದನ್ನು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್‌ ಚೌಧರಿ ಒಪ್ಪಿಕೊಂಡಿದ್ದಾರೆ. ಭವಿಷ್ಯದಲ್ಲಿ ದಿಲ್ಲಿ ಹಾಗೂ ಇಲ್ಲಿನ ಸುತ್ತಮುತ್ತ ಪಂದ್ಯ ಆಯೋಜಿಸುವಾಗ ಜಾಗರೂಕತೆ ವಹಿಸುವುದಾಗಿ ಅವರು ತಿಳಿಸಿದ್ದಾರೆ.

ವಾಯು ಮಾಲಿನ್ಯದ ಕಾರಣದ ಹೊರತಾಗಿಯೂ ಬಿಸಿಸಿಐ ಆವರ್ತನ ಪದ್ಧತಿ ಪ್ರಕಾರ 2020ರ ತನಕ ಹೊಸದಿಲ್ಲಿಗೆ ಟೆಸ್ಟ್‌ ಆತಿಥ್ಯ ಲಭಿಸದು ಎಂಬುದು ದಿನದ ಇನ್ನೊಂದು “ಬ್ರೇಕಿಂಗ್‌ ನ್ಯೂಸ್‌’.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.