ಅಯೋಧ್ಯೆಗೂ ಮಹಾ ಚುನಾವಣೆಗೂ ಏನು ಸಂಬಂಧ: ಸಿಬಲ್ಗೆ ಮೋದಿ ಪ್ರಶ್ನೆ
Team Udayavani, Dec 6, 2017, 3:41 PM IST
ಧನ್ಧುಕಾ, ಗುಜರಾತ್ : ಅಯೋಧ್ಯೆ ವಿವಾದಕ್ಕೂ 2019ರ ಲೋಕಸಭಾ ಚುನಾವಣೆಗೂ ಏನು ಸಂಬಂಧ ? ಈ ವಾದದ ಹಿಂದಿರುವ ತರ್ಕವಾದರೂ ಏನು ? ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸುಪ್ರೀಂ ಕೋರ್ಟ್ನಲ್ಲಿ ವಕ್ಫ್ ಮಂಡಳಿಯನ್ನು ಪ್ರತಿನಿಧಿಸಿದ ವಕೀಲ, ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರನ್ನು ಪ್ರಶ್ನಿಸಿದ್ದಾರೆ.
ಸಿಬಲ್ ಅವರು ಸುಪ್ರೀಂ ಕೋರ್ಟಿನಲ್ಲಿ ನಿನ್ನೆ ಮಂಗಳವಾರ ವಾದ ಮಂಡಿಸುತ್ತಾ ಅಯೋಧ್ಯೆ ವಿವಾದವು 2019 ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರುವುದರಿಂದ ಅಲ್ಲಿಯ ವರೆಗೂ ತೀರ್ಪನ್ನು ವಿಳಂಬಿಸಬೇಕು ಎಂದು ಆಗ್ರಹಿಸಿದ್ದರು.
ಅಯೋಧ್ಯೆ ವಿಷಯದಲ್ಲಿ ಕಪಿಲ್ ಸಿಬಲ್ ಅವರು ನ್ಯಾಯಾಲಯದಲ್ಲಿ ಮುಸ್ಲಿಂ ಸಮುದಾಯವನ್ನು ಪ್ರತಿನಿಧಿಸುತ್ತಿರುವುದಕ್ಕೆ ನಮ್ಮ ಆಕ್ಷೇಪವೇನೂ ಇಲ್ಲ; ಆದರೆ ಅವರು ಅನಗತ್ಯವಾಗಿ ರಾಮ ಮಂದಿರ ವಿಷಯವನ್ನು 2019ರ ಲೋಕಸಭಾ ಚುನಾವಣೆಯೊಂದಿಗೆ ಜೋಡಿಸುತ್ತಿದ್ದಾರೆ; ಕಾಂಗ್ರೆಸ್ ಪಕ್ಷಕ್ಕೆ ದೇಶದ ಬಗ್ಗೆ ಚಿಂತೆಯೇ ಇಲ್ಲದಿರುವುದು ಇದರಿಂದ ಸ್ಪಷ್ಟವಾಗುತ್ತಿದೆ’ ಎಂದು ಮೋದಿ ಹೇಳಿದರು.
ಅಯೋಧ್ಯೆ ವಿವಾದ ಕುರಿತ ವಿಚಾರಣೆಯನ್ನು 2019ರ ಲೋಕಸಭಾ ಚುನವಾಣೆಯ ತನಕವೂ ವಿಳಂಬಿಸಬೇಕೆಂಬ ಸಿಬಲ್ ಅವರ ನಿವೇದನೆಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಈಗಿನ್ನು ಈ ಕೇಸಿನ ಅಂತಿಮ ವಿಚಾರಣೆಯನ್ನು 2018ರ ಫೆಬ್ರವರಿ 8ಕ್ಕೆ ನಿಗದಿಸಿದೆ.
ಆದರೆ ಈ ನಡುವೆ ಕಾಂಗ್ರೆಸ್ ಪಕ್ಷ, ಅಯೋಧ್ಯೆ ವಿವಾದ ಇತ್ಯರ್ಥವನ್ನು 2019 ಮಹಾ ಚುನಾವಣೆಯ ತನಕ ವಿಳಂಬಿಸಬೇಕೆಂಬ ಕಪಿಲ್ ಸಿಬಲ್ ಅಭಿಪ್ರಾಯದಿಂದ ದೂರಸರಿದು “ಇದು ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ