ಗ್ರಾಮೀಣ ಬಂಟರ ಸಂಘ ಸಭಾಭವನ ಶಂಕುಸ್ಥಾಪನೆಗೆ ವೇದಿಕೆ ಸಿದ್ಧ


Team Udayavani, Dec 7, 2017, 11:42 AM IST

2589.jpg

ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘವು 1999ರಲ್ಲಿ  ಸ್ಥಾಪಿತಗೊಂಡು ಹಲವು ವರ್ಷಗಳ ಬಳಿಕ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಜ್ಜಾಗಿದೆ. 

 ಸಂಘದ ಪರಿಮಿತಿಯಲ್ಲಿ ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಗಳ ಗ್ರಾಮಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಚಿಟಾ³ಡಿ-ಕುಕ್ಕಿಕಟ್ಟೆ-ಮಂಚಿ, ಉಡುಪಿ- ಬೈಲೂರು, ಕೊರಂಗ್ರಪಾಡಿ- ಮಾರ್ಪಳ್ಳಿ, ಅಲೆವೂರು- ಕೆಮೂ¤ರು, ಕಲ್ಮಂಜೆ- ಕರ್ವಾಲು-ಮರ್ಣೆ, ಮಣಿಪುರ- ದೆಂದೂರು-ಕುಂತಳನಗರ, ಕಟ್ಟಿಂಗೇರಿ- ಪಡುಬೆಳ್ಳೆ, ಎಡೆ¾àರು-ನಿಂಜೂರು-ಪಳ್ಳಿಯ ಪ್ರದೇಶಗಳು ಸುಮಾರು 1000 ಕ್ಕಿಂತಲೂ ಮಿಕ್ಕಿ ಸಕ್ರಿಯ ಸದಸ್ಯರನ್ನು ಒಳಗೊಂಡಿದೆ. ಸಂಘಟನೆ, ಸಹಕಾರ ಮತ್ತು ಸಾಮರಸ್ಯದೊಂದಿಗೆ ಆರೋಗ್ಯ, ಪರಿಸರ, ಯುವಕರ, ರೈತರ, ಮಹಿಳೆಯರ ಸಬಲೀಕರಣ ಹೀಗೆ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಬಡ ವಿದ್ಯಾರ್ಥಿಗಳಿಗೆ ನೆರವು, ರಕ್ತದಾನ ಶಿಬಿರ, ವೈದ್ಯಕೀಯ ಚಿಕಿತ್ಸೆಗೆ ನೆರವು, ಮಂಗಳ ಕಾರ್ಯಕ್ಕೆ ನೆರವು, ಬಡವರ ಮನೆ ಕಟ್ಟಲು ನೆರವು 
ಹಾಗೂ ಇನ್ನು ಅನೇಕ ಜನಪರ ಯೋಜನೆಗಳನ್ನು ನಡೆಸುತ್ತಿದೆ. 

ಗ್ರಾಮಾಂತರ ಪ್ರದೇಶ‌ದಲ್ಲಿ ಸಂಘಟನೆ ಯನ್ನು ಇನ್ನು ಬಲಿಷ್ಠವಾಗಿ ಬೆಳೆಸಲು ಒಂದು ಸಭಾಭವನವನ್ನು ನಿರ್ಮಾಣ ಮಾಡಬೇಕೆಂಬ ಹಂಬಲ ಇತ್ತು. ಈ ಕನಸು ನನಸು ಮಾಡಲು ಅಲೆವೂರಿನ ವಿ4 ಡೆವಲಪರ್ನವರು ಮಣಿಪುರ ಗ್ರಾಮದ ಕುಂತಳನಗರದಲ್ಲಿ ಜಾಗವನ್ನು  ದಾನ ಮಾಡಿದ್ದಾರೆ.  ಸುಸಜ್ಜಿತ ಸಭಾಭವನ ನಿರ್ಮಾಣ ಮಾಡಲು “ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ’ ಸಮಿತಿ ರಚಿಸಿದ್ದು ಕಾರ್ಯೋನ್ಮುಖವಾಗಿದೆ. ಬಂಟರ ಸಂಘದ ಅಧ್ಯಕ್ಷರಾಗಿ ಸಕಾರಾಮ ಶೆಟ್ಟಿ, ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಅಶೋಕ ಕುಮಾರ ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದಾರೆ. 3.5 ಕೋ.ರೂ. ವೆಚ್ಚದ ಯೋಜನೆ ಇದಾಗಿದೆ. 

ಮಣಿಪುರ ಗ್ರಾಮದ ಕುಂತಳ ನಗರದಲ್ಲಿ  ಡಿ.10 ರ ಬೆಳಗ್ಗೆ ಶಂಕು ಸ್ಥಾಪನೆಗೆ ಭರದ ಸಿದ್ಧತೆ ನಡೆಯುತ್ತಿದೆ.  ಸಚಿವ  ಪ್ರಮೋದ್‌ ಮಧ್ವರಾಜ್‌, ಕಾಪು ಶಾಸಕ ವಿನಯ ಕುಮಾರ್‌ ಸೊರಕೆ, ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಮತ್ತಿತರರು ಭಾಗವಹಿಸುವರು. ಜನಪ್ರತಿನಿಧಿಗಳ ಸಹಕಾರದಿಂದ ಮುಖ್ಯಮಂತ್ರಿಯವರು 1 ಕೋ.ರೂ. ಅನುದಾನ ಕೊಡಲು ಒಪ್ಪಿದ್ದಾರೆ.

ಸಭಾಂಗಣ ನಿರ್ಮಾಣ ಮಾಡುವ ಮುಖ್ಯ ಉದ್ದೇಶ 
ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟು ಜಾತಿ-ಮತ ಭೇದ ಇಲ್ಲದೆ ಅತೀ ಬಡವರಿಗೆ ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುವುದು.

ವಿದ್ಯಾವಂತ ಯುವಕ-ಯುವತಿಯರಿಗೆ ಉದ್ಯೋಗ ಆಧಾರಿತ ಶಿಬಿರ ಏರ್ಪಡಿಸುವುದು.

 ಉದ್ಯಮ ಶೀಲತಾ ಪ್ರೇರಣೆ- ತರಬೇತಿ ಶಿಬಿರ, ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ, ಸ್ವ-ಉದ್ಯೋಗ ಆಧಾರಿತ ಶಿಬಿರಗಳನ್ನು ಉಚಿತವಾಗಿ ಏರ್ಪಡಿಸುವುದು.

 ವೃತ್ತಿ ಅಧಾರಿತ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಕ್ರಮಗಳು .

ರೈತರ ಶ್ರೇಯೋಭಿವೃದ್ದಿಗೆ ಆಧುನಿಕ ಕೃಷಿ ಪದ್ದತಿಗಳ ಬಳಕೆ ಬಗ್ಗೆ ಮಾಹಿತಿ ಹಾಗೂ ತರಬೇತಿ, ಯಂತ್ರೋಪಕರಣಗಳ ಬಳಕೆಗೆ ಪ್ರೇರಣೆ, ಸಹಾಯ, ಮಾಹಿತಿ ಮಾರ್ಗದರ್ಶನ ಕಾರ್ಯಕ್ರಮಗಳು.

ಟಾಪ್ ನ್ಯೂಸ್

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

ಹಿಂದಿನ 3 ಲೋಕಸಭೆ ಚುನಾವಣೆಗಳಿಗಿಂತ ಈ ಸಲ ಗರಿಷ್ಠ ಮತದಾನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.