ಎಂಬೆಸ್ಸಿ ಸಂಸ್ಥೆಯಿಂದ ಅಕ‹ಮ ಒತ್ತುವರಿ: ಆರೋಪ


Team Udayavani, Dec 8, 2017, 5:24 PM IST

579280.jpg

ಬೆಂಗಳೂರು: ಸಚಿವ ಕೆ.ಜೆ.ಜಾರ್ಜ್‌ ಪಾಲುದಾರಿಕೆಯ ಎಂಬೆಸ್ಸಿ ಗಾಲ್ಫ್ ಲಿಂಕ್‌ ಟೆಕ್‌ಪಾರ್ಕ್‌ ಸರ್ಕಾರಿ ಜಮೀನು ಒತ್ತುವರಿ ಮಾಡಿರುವುದಲ್ಲದೆ, ವಾರ್ಷಿಕ ಬಿಬಿಎಂಪಿಗೆ 9 ಕೋಟಿಗೂ ಹೆಚ್ಚಿನ ಆಸ್ತಿ ತೆರಿಗೆ ವಂಚಿಸುತ್ತಿದೆ ಎಂದು ಬಿಜೆಪಿ ನಗರ ವಕ್ತಾರ ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬೆಂಗಳೂರು ಪೂರ್ವ ತಾಲೂಕಿನಲ್ಲಿ ಜಾರ್ಜ್‌ ಪಾಲುದಾರಿಕೆಯ ಎಂಬೆಸ್ಸಿ ಗಾಲ್ಫ್ ಲಿಂಕ್‌ ಟೆಕ್‌ಪಾರ್ಕ್‌ ನಿರ್ಮಾಣಕ್ಕಾಗಿ 18 ಸರ್ವೆ ನಂಬರ್‌ಗಳಲ್ಲಿ ಒಟ್ಟು 52.03 ಎಕರೆ ಕ್ರಯಕ್ಕೆ ಪಡೆದಿದೆ. ಆದರೆ, ಅದರೊಂದಿಗೆ 850 ಕೋಟಿ ಮೌಲ್ಯದ 13 ಎಕರೆ
ಸರ್ಕಾರಿ ಜಮೀನು ಒತ್ತುವರಿ ಮಾಡಿ ಟೆಕ್‌ಪಾರ್ಕ್‌ ನಿರ್ಮಿಸಲಾಗಿದೆ ಎಂದು ದೂರಿದರು.

ಸಿಬಿಐ ತಿನಿಖೆಗೆ ಒತ್ತಾಯ: ಈ ಹಿಂದೆ ಕೆ.ಜೆ. ಜಾರ್ಜ್‌ ವಸತಿ ಸಚಿವರಾಗಿದ್ದಾಗ ಸರ್ಕಾರಿ ಜಮೀನನ್ನು ರೈತರಿಗೆ ಮ್ಯುಟೇಷನ್‌ ರಿಜಿಸ್ಟರ್‌ ಮಾಡಿಕೊಡಲಾಗಿದೆ. ನಂತರದಲ್ಲಿ ಅವರಿಂದ 52.03 ಎಕರೆಯನ್ನು ಟೆಕ್‌ಪಾರ್ಕ್‌ಗಾಗಿ ಕ್ರಯಕ್ಕೆ ಪಡೆಯಲಾಗಿದೆ. ಒಟ್ಟು 52.03 ಎಕರೆ ಪೈಕಿ ಶಾಂತಿನಗರ ಶಾಸಕ ಎನ್‌.ಎ.ಹ್ಯಾರೀಸ್‌ ಕುಟುಂಬದವರಿಂದ 4.01 ಎಕರೆ ಜಮೀನು ಕ್ರಯಕ್ಕೆ ಪಡೆಯಲಾಗಿದ್ದು, ಹ್ಯಾರೀಸ್‌ ಕುಟುಂಬದವರಿಗೆ ಈ ಜಮೀನು ಹೇಗೆ ಬಂತು ಎಂಬ ದಾಖಲೆಗಳಿಲ್ಲ. ಆ ಮೂಲಕ ಒಟ್ಟು 65 ಎಕರೆಗೆ ಮ್ಯುಟೇಷನ್‌ ರಿಜಿಸ್ಟರ್‌ನಲ್ಲಿಯೂ ಅವ್ಯವಹಾರ ನಡೆದಿರುವ ಅನುಮಾನವಿದ್ದು, ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ತಪ್ಪು ಮಾಹಿತಿ: ಒಟ್ಟು 65 ಎಕರೆ ಪ್ರದೇಶದಲ್ಲಿ ಹಿಲ್ಟನ್‌ ಪಂಚತಾರಾ ಹೋಟೆಲ್‌ ಸೇರಿದಂತೆ 23 ಕಟ್ಟಡ ಗಳನ್ನು ನಿರ್ಮಿಸಲಾಗಿದೆ. ಟೆಕ್‌ಪಾರ್ಕ್‌ನ ನಿರ್ಮಿತ ಪ್ರದೇಶ (ಬಿಲ್ಟ್ಅಪ್‌ ಏರಿಯಾ) 45 ಲಕ್ಷ ಚದರ ಅಡಿಗಳಿದ್ದರೂ, ಸ್ವಯಂ ಘೋಷಿತ ಆಸ್ತಿ ವ್ಯವಸ್ಥೆಯಡಿ ಟೆಕ್‌ಪಾರ್ಕ್‌ ಪಾಲಿಕೆಗೆ ನಿರ್ಮಿತ ಪ್ರದೇಶ 4,79,729 ಚದರ ಅಡಿ ಎಂದು ತಪ್ಪು
ಮಾಹಿತಿ ನೀಡಿದೆ. ಅದರಂತೆ ವಾರ್ಷಿಕ ಕೇವಲ 1.24 ಕೋಟಿ ರೂ. ತೆರಿಗೆ ಪಾವತಿಸುತ್ತಿದ್ದು, 9 ಕೋಟಿ ರೂ. ಗೂ ಅಧಿಕ ಆಸ್ತಿ ತೆರಿಗೆ ವಂಚಿಸುತ್ತಿದೆ ಎಂದು ದೂರಿದರು.

ಆ ಹಿನ್ನೆಲೆಯಲ್ಲಿ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ, ಸರ್ಕಾರಿ ಜಮೀನಿಗೆ ಮ್ಯುಟೇ ಷನ್‌ ನೀಡಿದ ಹಿಂದಿನ ಜಿಲ್ಲಾಧಿಕಾರಿಗಳು, ತಹಶೀಲ್ದಾರ್‌, ಕಾನೂನು ಬಾಹಿರವಾಗಿ ನಕ್ಷೆ ಹಾಗೂ ಸ್ವಾಧೀನಾನುಭವ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ, ಎಸಿಬಿ, ಬಿಎಂಟಿಎಫ್, ನಗರದ ಎಸಿಎಂಎಂ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದರು.

ಯಾರಾದರೂ ಜವಾಬ್ದಾರಿ ಯುತವಾಗಿ ಮಾಡಿದ ಆರೋಪಗಳಿಗೆ ಉತ್ತರಿಸುತ್ತೇನೆ. ಆದರೆ, ನಿಮ್ಹಾನ್ಸ್‌ನಲ್ಲಿರ
ಬೇಕಾದವರು ಬೀದಿಯಲ್ಲಿ ನಿಂತು ಮಾಡುವ ಆರೋಪಗಳಿಗೆ ಉತ್ತರ ಕೊಡುವುದಿಲ್ಲ. ಏನು ಅವ್ಯವಹಾರ ಎಂಬುದಕ್ಕೆ ದಾಖಲೆ ಇದ್ದರೆ ಮಾಧ್ಯಮದವರು ಆ ವಿಚಾರದಲ್ಲಿ ನನ್ನನ್ನು ಪ್ರಶ್ನಿಸಿ. ನನ್ನ ವಿರುದ್ಧ ಆರೋಪ ಮಾಡಿರುವ ಎನ್‌.ಆರ್‌.ರಮೇಶ್‌ಗೆ ಮೆಂಟಲ್‌ ಆಸ್ಪತ್ರೆಗೆ ಹೋಗಲು ಹೇಳಿ. ಕೆ.ಜೆ.ಜಾರ್ಜ್‌, ಬೆಂಗಳೂರು ನಗರಾಭಿವೃದ್ಧಿ ಸಚಿವ

ಕಾನೂನು ಉಲ್ಲಂಘನೆ: ಎಂಬೆಸ್ಸಿ ಸಂಸ್ಥೆಯು ರೈತರಿಂದ ಕ್ರಯಕ್ಕೆ ಪಡೆವಾಗ “ವಾಸದ ಉದ್ದೇಶ’ಕ್ಕಾಗಿ ಭೂ ಪರಿವರ್ತನೆ ಮಾಡಲಾಗಿದೆ. ಪರಿವರ್ತನೆ ಬಳಿಕ ವಾಣಿಜ್ಯ ಕಟ್ಟಡಗಳ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಮತ್ತು ನಗರ ಯೋಜನೆ ಎಂಜಿನಿಯರ್‌ ಕಾನೂನು ಬಾಹಿರವಾಗಿ ನಕ್ಷೆ ಮಂಜೂರಾತಿ ನೀಡಿದ್ದರಿಂದ ಒಟ್ಟು ಜಮೀನಿನ ಶೇ.90ರಷ್ಟು ಭಾಗದಲ್ಲಿ ವಾಣಿಜ್ಯ ಉದ್ದೇಶಿತ ಕಟ್ಟಡಗಳನ್ನು ನಿರ್ಮಿಸಿ ಕಾನೂನು ಉಲ್ಲಂ ಸಲಾಗಿದೆ ಎಂದು ರಮೇಶ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.