ವರದಿ ಸಲ್ಲಿಸಲು ಸುಪ್ರೀಂ ಆದೇಶ
Team Udayavani, Dec 9, 2017, 9:02 AM IST
ಬಳ್ಳಾರಿ: ಅಕ್ರಮ ಗಣಿಗಾರಿಕೆಯಿಂದ ಧ್ವಂಸವಾದ ಕರ್ನಾಟಕ ಮತ್ತು ಆಂಧ್ರಪ್ರದೇಶಗಳ ಗಡಿ ಪ್ರದೇಶಗಳ ಸಮೀಕ್ಷೆ ಕೈಗೊಂಡು 12 ವಾರದೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟಿನ ವಿಭಾಗೀಯ ಪೀಠ ಶುಕ್ರವಾರ ಆದೇಶಿಸಿದೆ.
ಕರ್ನಾಟಕ-ಆಂಧ್ರಪ್ರದೇಶ ರಾಜ್ಯಗಳ ಗಡಿ ಗುರುತಿಸುವಿಕೆ ಕುರಿತಂತೆ ಆಂಧ್ರಪ್ರದೇಶ ಸರ್ಕಾರ, ಬಳ್ಳಾರಿ ಮೂಲದ ದಿ.ಎಸ್.ಕೆ. ಮೋದಿ ಒಡೆತನದ ವಿಜಿಎಂ ಮೈನ್ಸ್ ಸೇರಿ ವಿವಿಧ ಸ್ಪೆಷಲ್ ಲೀವ್ ಪಿಟೀಷನ್ಗಳ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡ ವಿಭಾಗೀಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಪ್ರತಿವಾದಿ ಸ್ಥಾನದಲ್ಲಿರುವ ಸರ್ವೇ ಆಫ್ ಇಂಡಿಯಾದ ಉನ್ನತಾಧಿಕಾರಿಗಳು ವಿಚಾರಣೆ ವೇಳೆ ಉಪಸ್ಥಿತರಿದ್ದು, ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ 2013ರಲ್ಲಿ ಇಂತಹ ಸಮೀಕ್ಷೆ ನಡೆಸುವಂತೆ ಮೊದಲ ಆದೇಶ ನೀಡಿತ್ತು. ಆದರೆ, ಈ ಆದೇಶ ಸಮರ್ಪಕವಾಗಿ ಪಾಲನೆಯಾಗದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ ಮತ್ತು ಇತರರು ಮತ್ತೆ ಸುಪ್ರೀಂ ಕೋರ್ಟಿನ ಮೆಟ್ಟಿಲೇರಿದ್ದರು.
ಪರಿಣಾಮ ಏನು?: ಈ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ 2013ರಲ್ಲಿ ಧ್ವಂಸಗೊಂಡ ಗಡಿ ಪ್ರದೇಶದ
ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಆದರೆ, ಸಮೀಕ್ಷೆ ನಡೆಸಬೇಕಿದ್ದ ಸರ್ವೇ ಆಫ್ ಇಂಡಿಯಾದ ಅಧಿಕಾರಿಗಳು ಸಮೀಕ್ಷಾ ಕಾರ್ಯ ನೆರವೇರಿಸಿದ್ದರೋ ಇಲ್ಲವೋ ವಿಷಯ ನಿಗೂಢವಾಗಿ ಉಳಿದಿತ್ತು. ಆದರೆ, ಎರಡನೇ ಬಾರಿಗೆ ಸಮೀಕ್ಷೆ ನಡೆಸಲು ಆದೇಶ ನೀಡಿರುವ ಸುಪ್ರೀಂ ಕೋರ್ಟ್, ಈ ಬಾರಿ ವರದಿ ಸಲ್ಲಿಸುವಂತೆ ಖಡಕ್ಕಾಗಿ ಸೂಚನೆ ನೀಡಿದೆ. ಒಂದು ವೇಳೆ ಸರ್ವೇ ಆಫ್ ಇಂಡಿಯಾ ಈ ಸಮೀಕ್ಷೆ ಕೈಗೊಳ್ಳದೆ ವರದಿ ಸಲ್ಲಿಸದಿದ್ದರೆ ಗುರುತರವಾದ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಾಗಬಹುದು ಎನ್ನುವ ಮಾತುಗಳು ಕೇಳಿ ಬಂದಿವೆ.
ಎಂ.ಮುರಳಿಕೃಷ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !