ಕೆನಡಾದಲ್ಲಿ ಅರಳಿದ ಪ್ರತಿಭೆ ಡಾ| ಆಚಾರ್ಯ


Team Udayavani, Dec 9, 2017, 12:46 PM IST

09-40.jpg

ಉಡುಪಿ: ಕೆನಡಾದ ಒಟ್ಟಾವ ಕಾರ್ಲ್ಟನ್‌ ವಿ.ವಿ. ಎಲೆಕ್ಟ್ರಾನಿಕ್ಸ್‌ ವಿಭಾಗದ ಪ್ರಾಧ್ಯಾಪಕ, ಉಡುಪಿ ತಾಲೂಕು ಹಿರಿಯಡಕ ಬಳಿಯ ಕುದಿ ಗ್ರಾಮದ ಡಾ| ರಾಮಚಂದ್ರ ಆಚಾರ್ಯ ಅವರು ಅಂತಾರಾಷ್ಟ್ರೀಯ ಸ್ತರದ “ಐಎಇಇಇ’ (ಇಂಟರ್‌ನ್ಯಾಶನಲ್‌ ಅಸೋಸಿಯೇಶನ್‌ ಆಫ್ ಎಲೆಕ್ಟ್ರಿಕಲ್‌ ಆ್ಯಂಡ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರ್) ಎಲೆಕ್ಟ್ರೊ ಮ್ಯಾಗ್ನೆಟಿಕ್‌ ಕಂಪಾಟಿಬಿಲಿಟಿ ಸೊಸೈಟಿಯ ಡಿಸ್ಟಿಂಗ್ವಿಶ್‌x ಲೆಕ್ಚರರ್‌ ಪ್ರೋಗ್ರಾಮ್‌ನ ಪ್ರತಿಷ್ಠಿತ ಅಧ್ಯಕ್ಷ ಹುದ್ದೆಗೆ ಆಯ್ಕೆಯಾಗಿದ್ದಾರೆ. 

ಡಾ| ಆಚಾರ್ಯರು ಐಎಇಇಇಯ ಸರ್ಕ್ನೂಟ್ಸ್‌ ಆ್ಯಂಡ್‌ ಸಿಸ್ಟಮ್ಸ್‌ ಸೊಸೈಟಿ, ಎಲೆಕ್ಟ್ರೊ ಮ್ಯಾಗ್ನೆಟಿಕ್‌ ಕಂಪಾಟಿಬಿಲಿಟಿ ಸೊಸೈಟಿ ಮತ್ತು ಎಲೆಕ್ಟ್ರಾನಿಕ್‌ ಡಿವೈಸಸ್‌ ಸೊಸೈಟಿ- ಈ ಮೂರು ಸೊಸೈಟಿಗಳ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದವರು. ಎಂಜಿನಿಯರ್ ಇನ್‌ಸ್ಟಿಟ್ಯೂಟ್‌ ಆಫ್ ಕೆನಡಾ ಮತ್ತು ಐಎಇಇಇಯ ಫೆಲೋಶಿಪ್‌ ಗೌರವ ಹೊಂದಿರುವ ಇವರು, ಈ ಸೊಸೈಟಿಗಳ ಸ್ಥಳೀಯ ವಿಭಾಗಗಳ ಆಮಂತ್ರಣದ ಮೇರೆಗೆ 30ಕ್ಕೂ ಹೆಚ್ಚು ದೇಶಗಳಲ್ಲಿ ಆಧುನಿಕ ಕಂಪ್ಯೂಟರ್‌ ಚಿಪ್‌ ವಿನ್ಯಾಸದ ಕುರಿತು ವಿಶೇಷ ಉಪನ್ಯಾಸಗಳನ್ನು ನೀಡಿದ್ದಾರೆ. 

ಶೈಕ್ಷಣಿಕ ಸಾಧನೆಯಲ್ಲದೆ ಉಭಯ ರಾಷ್ಟ್ರಗಳ ವ್ಯಾಪಾರ ವ್ಯವಹಾರ ವೃದ್ಧಿಗಾಗಿ ಕೆನಡಾ – ಇಂಡಿಯ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಸ್ಥಾಪನೆಯಲ್ಲಿಯೂ ಡಾ| ಆಚಾರ್ಯರು ಮಹತ್ವದ ಪಾತ್ರ ವಹಿಸಿದ್ದಾರೆ. ಇದು ವಿಜ್ಞಾನ, ತಂತ್ರಜ್ಞಾನ, ವ್ಯಾಪಾರ ಮತ್ತು ನೀತಿ ಕುರಿತು ಕಾರ್ಯನಿರ್ವಹಿಸಲಿದೆ. 2014ರಲ್ಲಿ ಕಾರ್ಲ್ಟನ್‌ ವಿ.ವಿ.ಯಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆ ಸ್ಥಾಪಿಸುವಲ್ಲಿಯೂ ಆಚಾರ್ಯ ಸೇವೆ ಸಲ್ಲಿಸಿದ್ದರು. ಅಂತಾರಾಷ್ಟ್ರೀಯ ಸಂಶೋಧನ ನಿಯತಕಾಲಿಕಗಳಲ್ಲಿ ಇವರ 200ಕ್ಕೂ ಹೆಚ್ಚು ಅಧ್ಯಯನ ಪ್ರಬಂಧಗಳು ಪ್ರಕಟವಾಗಿವೆ.  

ಕವಿಯಾಗಿ ಆಚಾರ್ಯ
ಪ್ರೊ| ಆಚಾರ್ಯ, ಕನ್ನಡ ಕವನಗಳನ್ನೂ ಬರೆಯು ತ್ತಾರೆ. 50ಕ್ಕೂ ಹೆಚ್ಚು ಕವನಗಳನ್ನು ರಚಿಸಿದ್ದು, ಸಂಕಲನ ಹೊರತರುವ ತಯಾರಿಯಲ್ಲಿದ್ದಾರೆ. 

ಉನ್ನತ ಶಿಕ್ಷಣ
ಡಾ| ಆಚಾರ್ಯರು ಪದವಿಯ ಬಳಿಕ ರಾಜಸ್ಥಾನದ ಪಿಲಾನಿಯಲ್ಲಿರುವ ಬಿರ್ಲಾ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿಯಲ್ಲಿ ಮೈಕ್ರೋ ಎಲೆಕ್ಟ್ರಾನಿಕ್ಸ್‌ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದರು. ಬಳಿಕ ಕೆನಡಾಕ್ಕೆ ತೆರಳಿ, ಹೈ ಫ್ರೀಕ್ವೆನ್ಸಿ ಕಂಪ್ಯೂಟರ್‌ ಚಿಪ್‌ (ಮಾಡೆಲಿಂಗ್‌ ಮತ್ತು ಸಿಮ್ಯುಲೇಶನ್‌) ಕುರಿತು ಪಿ.ಎಚ್‌ಡಿ. ಪದವಿ ಪಡೆದರು. 

ಕನ್ನಡ ಮಾಧ್ಯಮ, ಉಚಿತ ಹಾಸ್ಟೆಲ್‌ ಓದು
ಕುದಿ ಗ್ರಾಮದಲ್ಲಿ ರಾಘವೇಂದ್ರ ಆಚಾರ್ಯ ಮತ್ತು ಜಾಂಬವತಿ ಆಚಾರ್ಯ ದಂಪತಿಗೆ ಜನಿಸಿದ ರಾಮಚಂದ್ರ ಆಚಾರ್ಯರು ಬೊಮ್ಮರಬೆಟ್ಟು ಸರಕಾರಿ ಹಿ.ಪ್ರಾ. ಶಾಲೆ ಮತ್ತು ಹಿರಿಯಡಕ ಸ.ಪ.ಪೂ. ಕಾಲೇಜಿನ ಪ್ರೌಢಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು. ಎಂಜಿಎಂ ಕಾಲೇಜಿನಲ್ಲಿ ಪಿಯು ಓದಿದ ಬಳಿಕ ಬೆಂಗಳೂರು ಆರ್‌ವಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಶನ್‌ ವಿಭಾಗದಲ್ಲಿ ಪದವಿ ಗಳಿಸಿದರು. ಬೆಂಗಳೂರು ವಿ.ವಿ.ಪುರಂನ ರಾಮಕೃಷ್ಣ ಸ್ಟೂಡೆಂಟ್ಸ್‌ ಹೋಮ್‌ ಉಚಿತ ಹಾಸ್ಟೆಲ್‌ನಲ್ಲಿದ್ದುದು ಜೀವನದ ಅನೇಕ ತಿರುವುಗಳಿಗೆ ಕಾರಣವಾಯಿತು ಎನ್ನುತ್ತಾರೆ ಡಾ| ಆಚಾರ್ಯ. 

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.