ಮೃತದೇಹ ಕೊಡಲು ಆಸ್ಪತ್ರೆ ಸಿಬ್ಬಂದಿ ನಿರಾಕರಣೆ
Team Udayavani, Dec 9, 2017, 1:22 PM IST
ಹುಬ್ಬಳ್ಳಿ: ಚಿಕಿತ್ಸೆ ಫಲಿಸದೆ ಮೃತಪಟ್ಟ ವ್ಯಕ್ತಿಯ ಶವವನ್ನು ಹಣ ಪಾವತಿಸದೆ ಕೊಡುವುದಿಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಪಟ್ಟು ಹಿಡಿದಿದ್ದ ರಿಂದ ಮೃತನ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟಿಸಿದ ಘಟನೆ ನಗರದಲ್ಲಿ ಶುಕ್ರವಾರ ನಡೆಯಿತು.
ಹಾವೇರಿ ತಾಲೂಕು ಯತ್ನಳ್ಳಿಯ ಬಸವರಾಜ ಮಾವಿನಕಾಯಿ ಎಂಬವರನ್ನು ನಗರದ ಖಾಸಗಿ ಆಸ್ಪತ್ರೆಗೆ ಗುರುವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದರು. ಆಸ್ಪತ್ರೆಯವರು 24 ಸಾವಿರ ರೂ. ಬಿಲ್ ಮಾಡಿದ್ದರು. ಆದರೆ, ಮೃತನ ಕುಟುಂಬದವರು ತಮ್ಮ ಬಳಿ ಅಷ್ಟು ಹಣವಿಲ್ಲ.
ಇರುವ 6 ಸಾವಿರ ರೂ. ಪಾವತಿಸಿ ಕೊಂಡು ಮೃತದೇಹ ಕೊಡಿ ಎಂದು ಕೇಳಿದರೂ ಪೂರ್ತಿ ಹಣ ಪಾವತಿಸದೆ ದೇಹ ಕೊಡಲ್ಲವೆಂದು ಆಸ್ಪತ್ರೆ ಸಿಬ್ಬಂದಿ ರಾತ್ರಿವರೆಗೂ ಸತಾಯಿಸಿದರೆನ್ನಲಾಗಿದೆ. ಆಸ್ಪತ್ರೆಯವರಿಗೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಕರೆ ಮಾಡಿ ಹೇಳಿದ ನಂತರವೇ ಮೃತ ದೇಹವನ್ನು ಕುಟುಂಬದವರಿಗೆ ಕೊಟ್ಟರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್