ಸ್ವಚ್ಛತೆಗಾಗಿ ಸೈಕಲ್‌ ಏರಿದ 72ರ ಉಮಾಪತಿ


Team Udayavani, Dec 10, 2017, 4:08 PM IST

10-Dec16.jpg

ಬೆಳ್ತಂಗಡಿ: ಅವರದ್ದು 72ರ ಇಳಿವಯಸ್ಸು. ಸೈಕಲ್‌ ಏರಿ ಹೊರಟರೆಂದರೆ ತಮಗೆ ಆರೋಗ್ಯ ಸಮಸ್ಯೆ ಇದ್ದರೂ ಈ ವಯಸ್ಸಲ್ಲೂ ಇರುವ ಸಾಮಾಜಿಕ ಜಾಗೃತಿಯ ಕಾರಣಕ್ಕೆ ಸೈಕಲ್‌ ಪೆಡಲ್‌ ತುಳಿಯುತ್ತಿದ್ದಾರೆ. 

ಇವರ ಹೆಸರು ಉಮಾಪತಿ ಮೊದಲಿಯಾರ್‌. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಲಿಮಗುರಿ ಸಾಲೇಕಲ್ಲಿನವರು. ಯುವಕರನ್ನೂ ನಾಚಿಸುವ ಜೀವನೋತ್ಸಾಹ. ಅದಕ್ಕೆ ಆರಿಸಿಕೊಂಡದ್ದು ಸೈಕಲ್‌ ಯಾತ್ರೆ. ಸೈಕಲ್‌ ಆದರೆ ಇಂಧನವೂ ಉಳಿತಾಯ ಎಂಬುದು ಲೆಕ್ಕಾಚಾರ.

ಈ ಮೊದಲು ಭ್ರಷ್ಟಾಚಾರ, ಎಚ್‌ ಐವಿ ಸೋಂಕು, ಪರಿಸರ ಮಾಲಿನ್ಯ, ಗೋಹತ್ಯೆ ನಿಷೇಧ ಮೊದಲಾದ ವಿಷಯಗಳ ಜಾಗೃತಿಗೆ ಸೈಕಲ್‌ ತುಳಿದಿದ್ದರು. ಇವರ ಸೈಕಲ್‌ ಯಾತ್ರೆ ಧರ್ಮಸ್ಥಳದಿಂದ ಹೊರಟಿದ್ದು, ರಾಜ್ಯಾದ್ಯಂತ ಪರ್ಯಟನೆ ಮಾಡಿ 2019ರ ಅ. 2ರಂದು ಮೈಸೂರಿನಲ್ಲಿ ಮುಕ್ತಾಯವಾಗಲಿದೆ.

ದಿಲ್ಲಿಗೂ ಸೈಕಲ್‌ ಸವಾರಿ!
ಈ ಮೊದಲು ಗೋಹತ್ಯೆ ಮಸೂದೆಗೆ ಅಂಕಿತ ಹಾಕಿ ಎಂದು ರಾಷ್ಟ್ರಪತಿಯಾಗಿದ್ದ ಪ್ರತಿಭಾ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಲು ದಿಲ್ಲಿಗೂ ಇವರು ಸೈಕಲ್‌ ಸವಾರಿ ನಡೆಸಿದ್ದರು. ಶಿವಮೊಗ್ಗದ ಹೊಸನಗರದ ರಾಮಚಂದ್ರಾಪುರ ಮಠದಿಂದ ಹೊರಟು ದಿಲ್ಲಿಯವರೆಗೆ 3,105 ಕಿ.ಮೀ. ದೂರ ಕ್ರಮಿಸಿದ್ದರು. ಆದರೆ ರಾಷ್ಟ್ರಪತಿ ಭೇಟಿ ಸಾಧ್ಯವಾಗಿರಲಿಲ್ಲ. ಕೊನೆಗೆ ಸೈಕಲನ್ನು ದಿಲ್ಲಿಯ ಕರ್ನಾಟಕ ಭವನದಲ್ಲೇ ಬಿಟ್ಟು ಬಂದರು. ಇಂತಹ ಛಲದಂಕ ಮಲ್ಲನಿಗೆ ಆ ವರ್ಷ ರಾಜ್ಯೋತ್ಸವದಂದು ಹಾಸನ ರೋಟರಿ ಕ್ಲಬ್‌ನವರು ಸೈಕಲ್‌ ಉಡುಗೊರೆ ನೀಡಿ ಸಮ್ಮಾನಿಸಿದ್ದರು.

ವರ್ಷದ ಮೂರು ತಿಂಗಳು ಸೈಕಲ್‌ ಯಾತ್ರೆ
ಉಮಾಪತಿಯವರು ಸಂಸಾರಿ. ಅವರ ಪತ್ನಿ ಮಾನಸಿಕ ಅಸ್ವಸ್ಥೆಯಂತೆ. ಈ ಕಾರಣಕ್ಕೆ ಬಾಲಕಿಯೊಬ್ಬಳನ್ನು ದತ್ತು ಪಡೆದು ಬಳಿಕ ಆಕೆಗೆ ವಿವಾಹವನ್ನೂ ಮಾಡಿಸಿದ್ದಾರೆ. ಇವರು ವೃತ್ತಿಯಲ್ಲಿ ಇಲೆಕ್ಟ್ರೀಶಿಯನ್‌. ವರ್ಷದ ಮೂರು ತಿಂಗಳು ಸಾಮಾಜಿಕ ಜಾಗೃತಿಗಾಗಿ ಸೈಕಲ್‌ ಏರುತ್ತಾರೆ. 2001ರಿಂದ ಒಟ್ಟು 22,000 ಕಿ.ಮೀ. ಸೈಕಲ್‌ ತುಳಿದಿದ್ದಾರೆ. ಪ್ರವಾಸಗಳೂ ಸೈಕಲ್‌ನಲ್ಲೇ. ಅಷ್ಟೇ ಅಲ್ಲ ಇವರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುವೂ ಹೌದು. 2008ರಿಂದ ಈವರೆಗೆ 8 ಚಿನ್ನದ ಪದಕ, 6 ಬೆಳ್ಳಿ, 7 ಕಂಚಿನ ಪದಕ ಪಡೆದಿದ್ದಾರೆ. 11 ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದ ಮ್ಯಾರಥಾನ್‌ನಲ್ಲಿ ಭಾಗಿಯಾಗಿ ಪ್ರಥಮ ಸ್ಥಾನ ಪಡೆದದ್ದು ಇವರ ಹೆಗ್ಗಳಿಕೆ. ಇತ್ತೀಚೆಗೆ ಮಾಸ್ಟರ್ಸ್‌ ಆ್ಯತ್ಲೆಟಿಕ್ಸ್‌ ಅಸೋಸಿಯೇಶನ್‌ ಉಡುಪಿಯಲ್ಲಿ ಆಯೋಜಿಸಿದ 400 ಮೀ. ಓಟದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.

ಡಾ| ಹೆಗ್ಗಡೆ ಶುಭಾಶಯ ಜಾಗೃತಿಗಾಗಿ ಸೈಕಲ್‌ ಏರಿದ ಉಮಾಪತಿ ಅವರಿಗೆ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಶುಭಾಶಯ ಕೋರಿದ್ದಾರೆ. ಹೆಗ್ಗಡೆಯವರು ಜಾಥಾಕ್ಕೆ ಚಾಲನೆ ನೀಡಬೇಕೆಂದು ಕೆಲವು ದಿನ ಕಾದು ಅವರ ಭೇಟಿಯಾದ ಬಳಿಕವಷ್ಟೇ ಯಾತ್ರೆ ಆರಂಭಿಸಿದ್ದಾರೆ .

ಈ ಬಾರಿಯೂ ನದಿ ಜೋಡಣೆ ಉದ್ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಬೇಕೆಂದು ದಿಲ್ಲಿವರೆಗೆ ಸೈಕಲ್‌ ತುಳಿದಿದ್ದೇನೆ. ನಾನು ಹೋದಲ್ಲೆಲ್ಲ ಜಾಥಾ ಮಾಡಿಸಿ ಮಕ್ಕಳು, ಹಿರಿಯರ ಮನಸ್ಸಿನಲ್ಲೂ ಜಾಗೃತಿ ಮೂಡಿಸುತ್ತಿದ್ದೇನೆ.
 – ಉಮಾಪತಿ ಮೊದಲಿಯಾರ್‌

ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.