ಕದ್ರಿ ಸಂಗೀತ ಕಾರಂಜಿ ಪ್ರಾಯೋಗಿಕ ಪ್ರದರ್ಶನ


Team Udayavani, Dec 12, 2017, 2:19 AM IST

karanji.jpg

ಕದ್ರಿ : ಬಹುನಿರೀಕ್ಷಿತ ಕದ್ರಿಯ ಜಿಂಕೆ ಪಾರ್ಕ್‌ ಖ್ಯಾತಿಯ ಹಳೆ ಮೃಗಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ರಾಜೀವ್‌ ಗಾಂಧಿ ಸಂಗೀತ ಕಾರಂಜಿಯು ಅಧಿಕೃತವಾಗಿ ಸೋಮವಾರ ಸಂಜೆಯಿಂದ ಪ್ರಾಯೋಗಿಕ ಕಾರ್ಯಾ ಚರಣೆ ಆರಂಭಿಸಿದೆ.

ಇದರ ಉದ್ಘಾಟನೆಗೆ ಡಿಸೆಂಬರ್‌ ಅಂತ್ಯದಲ್ಲಿ  ಮುಖ್ಯಮಂತ್ರಿ ಆಗಮಿಸುವ ನಿರೀಕ್ಷೆಯಿದ್ದು, ಅಲ್ಲಿಯವರೆಗೆ ಪ್ರತಿದಿನ ಸಂಜೆ 6.30ರಿಂದ 7.30ರ ವರೆಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ವು ಇದರ ಕಾಮಗಾರಿಯನ್ನು ನಿರ್ವಹಿಸಿದ್ದು, ಉದ್ಘಾಟನೆಯ ಬಳಿಕ ತೋಟಗಾರಿಕೆ ಇಲಾಖೆಗೆ ಹಸ್ತಾಂತರಿಸಲಿದೆ. 

ಪ್ರಸ್ತುತ ಕಾರಂಜಿಯ ಎಲ್ಲ  ಕಾಮಗಾರಿಗಳೂ ಪೂರ್ಣಗೊಂಡಿದ್ದು,  ಸೂಕ್ತ ರೀತಿಯಲ್ಲಿ ಕಾರ್ಯಾಚರಿಸುತ್ತಿದೆ. ಉದ್ಘಾಟನೆ ಬಳಿಕ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಒಂದೆರಡು ವಾರಗಳ ಕಾಲ ಪ್ರಾಯೋಗಿಕ ಪರೀಕ್ಷೆ ನಡೆಸಲು ಮುಡಾ ನಿರ್ಧರಿಸಿದೆ. 

ಗುಣಮಟ್ಟ ಕೊರತೆಯಿಂದ ಉದ್ಘಾಟನೆ ವಿಳಂಬ  
ಸುಮಾರು 5 ಕೋ.ರೂ. ವೆಚ್ಚದಲ್ಲಿ ಈ ಸಂಗೀತ ಕಾರಂಜಿಯನ್ನು ಅನುಷ್ಠಾನಗೊಳಿಸಲಾಗಿದ್ದು, ಕಳೆದ ಎಪ್ರಿಲ್‌ನಲ್ಲೇ ಕಾಮಗಾರಿ ಪೂರ್ಣಗೊಂಡಿತ್ತು. ಬಳಿಕ ಶಾಸಕರು, ಮೇಯರ್‌, ಮುಡಾ ಆಯುಕ್ತರು ಸಹಿತ ಪ್ರಮುಖರು ವೀಕ್ಷಿಸಿದ್ದರು. ಆದರೆ ಅದು ಗುಣಮಟ್ಟದಿಂದ ಕೂಡಿರದ ಹಿನ್ನೆಲೆಯಲ್ಲಿ ಶಾಸಕರು ಕಾರಂಜಿ  ಕುರಿತು ಅಸಮಾಧಾನ ವ್ಯಕ್ತಪಡಿಸಿ, ಅದರ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಅದರ ಅನುಷ್ಠಾನದಲ್ಲಿ ಬದಲಾವಣೆ ಮಾಡಿಕೊಂಡು ಪ್ರಸ್ತುತ ಕಾಮಗಾರಿ ಪೂರ್ಣಗೊಂಡಿದೆ. 

ಉದ್ಘಾಟನೆಗೆ ಮೊದಲು ಸಾರ್ವಜನಿಕರಿಗೆ ಅವಕಾಶವಿಲ್ಲ
ಸಂಗೀತ  ಕಾರಂಜಿಯು  ತನ್ನ ಪ್ರಾಯೋಗಿಕ ಕಾರ್ಯಾಚರಣೆಯನ್ನು ಆರಂಭಿದೆಯಾದರೂ ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿಲ್ಲ. ಉದ್ಘಾಟನೆ ಬಳಿಕವೇ ಅವರು ಕಾರಂಜಿಯನ್ನು ವೀಕ್ಷಿಸಬಹುದಾಗಿದೆ ಎಂದು ಮುಡಾ ಎಂಜಿನಿಯರ್‌ಗಳು ತಿಳಿಸಿದ್ದಾರೆ.

ಇಂದು ಡಿಸಿ ವೀಕ್ಷಣೆ
ನೂತನವಾಗಿ ಅನುಷ್ಠಾನಗೊಂಡಿರುವ ಸಂಗೀತ ಕಾರಂಜಿಯ ಪ್ರಾಯೋಗಿಕ ಪರೀಕ್ಷೆ ಆರಂಭ ಗೊಂಡಿರುವ ಹಿನ್ನೆಲೆಯಲ್ಲಿ ಡಿ. 12ರಂದು ಸಂಜೆ 6.30ರ ಬಳಿಕ  ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ವೀಕ್ಷಿಸಲಿದ್ದು, ಬಳಿಕ ಗುಣಮಟ್ಟದ ಕುರಿತು ಅಭಿಪ್ರಾಯ ವ್ಯಕ್ತಪಡಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.