ಜಾನಪದ ಶ್ರೀಮಂತಿಕೆಯಲ್ಲಿ ಮಹಿಳೆಯರ ಪಾತ್ರ ಹಿರಿದು


Team Udayavani, Dec 12, 2017, 10:22 AM IST

bid-2.jpg

ಬೀದರ: ಜಾನಪದ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಶ್ರೀಮಂತಗೊಳಿಸುವಲ್ಲಿ ಮಹಿಳೆಯ ಪಾತ್ರ ಹಿರಿದಾಗಿದೆ ಎಂದು ಹುಮನಾಬಾದನ ಪ್ರಾಧ್ಯಾಪಕಿ ಡಾ| ಮಹಾದೇವಿ ಹೆಬ್ಟಾಳೆ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಸಂಸ್ಕೃತಿ ಇಲಾಖೆ, ಕರ್ನಾಟಕ ಜಾನಪದ ಪರಿಷತ್ತು ಮತ್ತು ಕದಂಬ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿರುವ ಜಾನಪದ ವಿಚಾರ ಸಂಕಿರಣದಲ್ಲಿ “ಜಾನಪದ ಸ್ತ್ರೀ ಸಂವೇದನೆಗಳು’ ಗೋಷ್ಠಿಯಲ್ಲಿ ಅವರು ಪ್ರಬಂಧ ಮಂಡಿಸಿದರು.

ವೇದಗಳ ಕಾಲದಲ್ಲಿ ಮಹಿಳೆಗೆ ಎಲ್ಲಿಲ್ಲದ ಸ್ವಾತಂತ್ರ್ಯವಿತ್ತು. ಮುಸ್ಲಿàಮರ ಆಗಮನದಿಂದ ಮಹಿಳೆಯ ಸ್ವಾತಂತ್ರ್ಯಕ್ಕೆ ಕುತ್ತು ಬಂದಿತ್ತು. ಆಕೆಯ ಪ್ರತಿಯೊಂದು ಅವಕಾಶಗಳನ್ನು ಕಿತ್ತುಕೊಂಡು ಸಬಲೆಯಿದ್ದ ಮಹಿಳೆಯನ್ನು ಅಬಲೆಯನ್ನಾಗಿ ಕಂಡರು. ಜಾನಪದ ಸಂಸ್ಕೃತಿಯಿಂದ ಮಹಿಳೆಯ ತೊಳಲಾಟ ಬಯಲಿಗೆಳೆದು ಆಕೆಯ ಸಬಲೀಕರಣಕ್ಕೆ ಪ್ರಯತ್ನಿಸುವ ಸನ್ನಿವೇಶ ನಡೆದು ಬಂದವು ಎಂದು ಹೇಳಿದರು.

ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಮಹಿಳೆಗೆ ಕೆಲವೊಂದು ಅವಕಾಶಗಳು ಉದಾರವಾಗಿ ದೊರೆತರೂ ಆಕೆಯ ಮೇಲೆ ಅತ್ಯಾಚಾರ, ವ್ಯಭಿಚಾರಗಳು ಗಗನ ಚುಂಬಿಸಲಾರಂಭಿಸಿವೆ. ಹೆಣ್ಣು, ಗಂಡು ಈ ಜಗತ್ತಿನ ಎರಡು ಸಮಾನ ಕಣ್ಣುಗಳಾಗಿದ್ದು, ಇಬ್ಬರು ಪಾವಿತ್ರ್ಯ ಉಳಿಸಿಕೊಂಡು, ವೇದ ಕಾಲದ ಸಂಸ್ಕೃತಿ ಪುನರಾವರ್ತಿತವಾದಲ್ಲಿ ಮತ್ತೆ ಮಹಿಳೆ ಸಂವೇದನಾಶೀಲಳಾಗಿ ಗುರುತಿಸಬಲ್ಲಳು ಎಂದರು.

“ಜಾನಪದ ಅಂದು ಇಂದು’ ವಿಷಯ ಕುರಿತು ಪ್ರಬಂಧ ಮಂಡಿಸಿದ ಜಾನಪದ ಪರಿಷತ್‌ ಮಹಿಳಾ ಜಿಲ್ಲಾಧ್ಯಕ್ಷೆ ಡಾ| ಧನಲಕ್ಷ್ಮೀ  ಪಾಟೀಲ, ಜಾನಪದ ಬದುಕಿನಲ್ಲಿ ಉಡಿಗೆ, ತೊಡಿಗೆ, ಆಹಾರ ಪದಾರ್ಥಗಳು, ಕಲೆ, ಸಂಗೀತ, ಹಬ್ಬ, ಹರಿದಿನಗಳು, ಕುಟುಂಬ ವ್ಯವಸ್ಥೆ ಪ್ರಬುದ್ಧವಾಗಿತ್ತು. ಆಂತರಿಕ ಸೌಂದರ್ಯ ಅಲ್ಲಿ ಎದ್ದು ಕಾಣುತ್ತಿತ್ತು. ಆದರೆ ಇಂದು ಪಾಶ್ಚಾತ್ಯರ ಗಾಳಿ ಬಡಿದು ಸಾಮಾಜಿಕ, ಮಾನಸಿಕ,
ಬೌದ್ಧಿಕ ಹಾಗೂ ಮೌಲಿಕ ಗುಣಗಳಿಂದ ವಂಚಿತರಾಗುತ್ತಿದ್ದಾರೆ. ಅಳಿದು ಹೋದ ನೆಮ್ಮದಿ ಮತ್ತೆ ಮರುಕಳಿಸಲು ನಮ್ಮ ನಿತ್ಯದ ಜೀವನ ಜಾನಪದ ಬದುಕಾಗಬೇಕು ಎಂದು ಹೇಳಿದರು.

ಹಾಲಹಳ್ಳಿ ಸ್ನಾತಕೊತ್ತರ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥ ಡಾ| ರಾಮಚಂದ್ರ ಗಣಾಪುರ ಅವರು “ಜಾನಪದ ಪ್ರಸ್ತುತ ಸವಾಲುಗಳು’ ವಿಚಾರವಾಗಿ ಪ್ರಬಂಧ ಮಂಡಿಸಿದರು. ವಿಶ್ವ ಹಿಂದು ಪರಿಷತ್‌ ಮುಖಂಡ ರಾಮಕೃಷ್ಣ ಸಾಳೆ ಮಾತನಾಡಿದರು. ಹಿರಿಯ ಸಾಹಿತಿ ಎಂ.ಜಿ. ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಅಧ್ಯಕ್ಷೆ ಸವಿತಾ ಸಾಕುಳೆ ವೇದಿಕೆಯಲ್ಲಿದ್ದರು. ಎಸ್‌.ಬಿ. ಕುಚಬಾಳ್‌ ಜಾನಪದ ಗೀತೆ ಹಾಡಿದರು. ಪ್ರಕಾಶ ಕನ್ನಾಳೆ ಸ್ವಾಗತಿಸಿದರು. ಸುನಿತಾ ಕುಡ್ಲಿಕರ್‌ ನಿರೂಪಿಸಿ ಕಾಶಿನಾಥ ಬಡಿಗೇರ ವಂದಿಸಿದರು.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.