ಮೇಸ್ತ ಕೇಸ್; BJP ಜನರನ್ನು ತಪ್ಪು ದಾರಿಗೆ ಎಳೆದಿದೆ; ಸಚಿವ ರೆಡ್ಡಿ
Team Udayavani, Dec 12, 2017, 4:54 PM IST
ಬೆಂಗಳೂರು:ಉತ್ತರಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಉದ್ದೇಶಪೂರ್ವಕ ಗಲಾಟೆ ಮಾಡಿಸಿದೆ. ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡಬಾರದು. ಬಾಯಿಗೆ ಬಂದಂತೆ ಮಾತನಾಡಿ ಜನರನ್ನು ತಪ್ಪು ದಾರಿಗೆ ಎಳೆಯಬಾರದು ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಶಿರಸಿಯಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಸಚಿವ ರೆಡ್ಡಿ ಅವರು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಹನುಮ ಜಯಂತಿ, ಈದ್ ಮಿಲಾದ್ ಅನ್ನು ಒಟ್ಟಿಗೆ ಆಚರಿಸಲು ಮನವಿ ಮಾಡಿದ್ದರು. ಈ ಬಾರಿ ಹನುಮ ಜಯಂತಿ, ಈದ್ ಮಿಲಾದ್ ಒಂದೇ ದಿನ ಬಂದಿದ್ದರಿಂದ ಗಲಾಟೆಗೆ ಕಾರಣವಾಗಿತ್ತು. ಎರಡೂ ಕಡೆಯವರಿಗೆ ಅನುಮತಿ ನೀಡದಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದೆ.
ನಿಷೇಧಾಜ್ಞೆ ಜಾರಿಯಲ್ಲಿದ್ದಾಗ ಮೆರವಣಿಗೆ ನಡೆಸಬಾರದು ಎಂದು ಬಿಜೆಪಿಯವರಿಗೆ ಗೊತ್ತಿಲ್ವಾ? ಮೆರವಣಿಗೆ ಹೆಸರಲ್ಲಿ ಕೆಲ ಅಂಗಡಿಗಳನ್ನು ಹುಡುಕಿ, ಹುಡುಕಿ ಕಲ್ಲು ಎಸೆದಿದ್ದಾರೆ. ಇದೆಲ್ಲಾ ಬಿಜೆಪಿಯವರ ಚುನಾವಣಾ ರಾಜಕಾರಣ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಸಾವು ಸಂಭವಿಸಿದೆ. ವೈಯಕ್ತಿಕ ಕಾರಣಗಳಿಂದ ಸಾವನ್ನಪ್ಪಿದರೂ ಹಿಂದೂ ಎನ್ನುತ್ತಾರೆ. ನಾವೂ ಹಿಂದೂಗಳೇ ನಮಗೂ ಶ್ರದ್ಧಾಭಕ್ತಿ ಇದೆ. ಬೇಕಾದರೆ ಬಿಜೆಪಿಯವರು ನಾವು ಶ್ರೀರಾಮಸೇನೆಯವರು ಎಂದು ಹೇಳಿಕೊಳ್ಳಲಿ ಎಂದು ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.
ಪೋಸ್ಟ್ ಮಾರ್ಟ್ಂ ವರದಿ ಬರಲಿ, ಪೋಸ್ಟ್ ಮಾರ್ಟ್ಂ ವರದಿಯಲ್ಲಿ ಕೊಲೆ ಎಂದು ಬಂದರೆ. ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಪೋಸ್ಟ್ ಮಾರ್ಟ್ಂನ ವಿಡಿಯೋ ರೆಕಾರ್ಡ್ ಆಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್ ರೈ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!