ತುಂಬೆ ಡ್ಯಾಂ: ಮುಳುಗಡೆ ಜಮೀನಿಗೆ ಪರಿಹಾರಕ್ಕೆ ಸಿದ್ಧತೆ


Team Udayavani, Dec 14, 2017, 1:05 PM IST

tumbe-dam.jpg

ಬಂಟ್ವಾಳ: ಮನಪಾ ಕುಡಿಯುವ ನೀರಿಗಾಗಿ ನೇತ್ರಾವತಿ ನದಿಗೆ ತುಂಬೆಯಲ್ಲಿ ನಿರ್ಮಿಸಲಾಗಿರುವ ನೂತನ ಡ್ಯಾಂನಿಂದ ಮುಳುಗಡೆಗೊಳ್ಳುವ ಪ್ರದೇಶದ ಸಂತ್ರಸ್ತ ರೈತರಿಗೆ ಪರಿಹಾರ ವಿತರಣೆಗೆ ಸಿದ್ಧತೆಗಳಾಗಿದ್ದು, ಡಿ.13ರಂದು ಸಭೆ ನಡೆದಿದೆ.
ಮನಪಾ ಅಧಿಕಾರಿಗಳು, ತಹಶೀಲ್ದಾರ್‌ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಭೂಮಿ ಮುಳುಗಡೆ ಹೊಂದುವ ಸಂತ್ರಸ್ತರು ಪಾಲ್ಗೊಂಡಿದ್ದರು. ರಾಜ್ಯ ಸರಕಾರದಿಂದ ಈ ಪರಿಹಾರ ಉದ್ದೇಶಕ್ಕೆ 7 ಕೋ.ರೂ. ಬಿಡುಗಡೆ ಆಗಿದ್ದಾಗಿ ಮೂಲಗಳು ತಿಳಿಸಿವೆ.

ಡ್ಯಾಂನಲ್ಲಿ 5 ಮೀ. ಎತ್ತರಕ್ಕೆ ನೀರು ಸಂಗ್ರಹಗೊಳ್ಳಲಿದೆ. ಇದರಿಂದ 27 ರೈತರ ಒಟ್ಟು 20.53 ಎಕ್ರೆ ಪಟ್ಟಾ ಜಮೀನು ಮುಳುಗಡೆ ಆಗುವುದು. ಜಮೀನಿಗೆ ಪರಿಹಾರ ಮತ್ತು ಅವಶ್ಯ ಕಡತ, ದಾಖಲೆ ನೀಡುವಲ್ಲಿ ತಹಶೀಲ್ದಾರ್‌ ಪುರಂದರ ಹೆಗ್ಡೆ ಉಪಸ್ಥಿತಿಯಲ್ಲಿ ಮಾತುಕತೆ ನಡೆಯಿತು.

ಗ್ರಾಮವಾರು ವಿವರ
ಸಜೀಪಮುನ್ನೂರು ಗ್ರಾಮದಲ್ಲಿ 9 ಮಂದಿ ಖಾತೆದಾರರ 8.04 ಎಕರೆ, ಪಾಣೆಮಂಗಳೂರು ಗ್ರಾಮದ ಇಬ್ಬರು ಖಾತೆದಾರರ 0.78 ಎಕರೆ, ಕಳ್ಳಿಗೆ ಗ್ರಾಮದ 5 ಮಂದಿ ಖಾತೆದಾರರ 2.05 ಎಕರೆ, ಬಿ.ಮೂಡ ಗ್ರಾಮದ 11 ಮಂದಿ ಖಾತೆದಾರರ 9.66 ಎಕರೆ ಜಮೀನು ಮುಳುಗಡೆ ಆಗುವುದಾಗಿ ಕಂದಾಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಮುಳುಗಡೆ ಜಮೀನಿಗೆ ಸರಕಾರಿ ಮೌಲ್ಯದ ನಾಲ್ಕು ಪಟ್ಟು ಪರಿಹಾರ ಸಿಗುವುದಾಗಿ ಒಂದು ಮೂಲ ಮಾಹಿತಿ ನೀಡಿದೆ. ರಾಜ್ಯದ ಇತರ ಪ್ರದೇಶಗಳಲ್ಲಿ ಮುಳುಗಡೆ ಜಮೀನಿಗೆ ಪರಿಹಾರವನ್ನು ಇದೇ ಕ್ರಮದಲ್ಲಿ ನೀಡಲಾಗಿತ್ತು ಎಂದು ಉಲ್ಲೇಖೀಸಲಾಗಿದೆ.

ಖಾಸಗಿ ಪಟ್ಟಾದಾರರ 20.53 ಎಕರೆ ಜಮೀನು ಮುಳುಗಡೆಯಾಗುವುದರ ಜತೆಗೆ 12.59 ಎಕರೆ ಸರಕಾರಿ ಜಮೀನು ಕೂಡ ಮುಳುಗಡೆಯಾಗಲಿದೆ. ಅಂದರೆ ಒಟ್ಟು 33.12 ಎಕರೆ ಜಮೀನು ಮುಳುಗಡೆ ಆಗುವುದಾಗಿ ಮನಪಾ ಅಧಿಕೃತ ಮಾಹಿತಿಯನ್ನು ಉದ್ಧರಿಸಿ ಬಂಟ್ವಾಳ ತಾ. ಕಂದಾಯ ಇಲಾಖೆಯ ದಾಖಲೆ ತಿಳಿಸಿದೆ.

ಜಂಟಿ ಸರ್ವೇ
ಮುಳುಗಡೆ ಜಮೀನಿಗಾಗಿ ನೆಝ್ ಇನ್‌ಫ್ರಾಟೆಕ್‌ ಪ್ರೈ. ಲಿ., ಬಂಟ್ವಾಳ ತಾ| ಭೂಮಾಪನ ಇಲಾಖೆ ಸಿಬಂದಿ, ಆಯಾ ಗ್ರಾಮಗಳ ಗ್ರಾಮ ಕರಣಿಕರ ಸಹಿಯ ಜಂಟಿ ಸರ್ವೆ ನಡೆ ಸಿದ್ದಾಗಿ ವಿವರ ಹೇಳಿದೆ. ಬಂಟ್ವಾಳ ತಹಶೀಲ್ದಾರ್‌ ಕಚೇರಿಯಲ್ಲಿ ಬುಧವಾರ ಮುಳುಗಡೆ ಜಮೀನು ಪಟ್ಟಾದಾರರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ಮನಪಾ ಕಾ.ನಿ. ಎಂಜಿನಿಯರ್‌ ಮರಳಿ ಮಠ, ಭೂ ಸ್ವಾಧೀನ ಅಧಿಕಾರಿ ಗಾಯತ್ರಿ ನಾಯಕ್‌, ಮನಪಾ ನ್ಯಾಯವಾದಿ ದೀಪರಾಜ್‌ ಅಂಬಟ್‌, ಕಂದಾಯ ಅಧಿಕಾರಿ ರಾಮ ಉಪಸ್ಥಿತರಿದ್ದರು.

ವರ್ಷದ ಹಿಂದೆ ಮಂಜೂರು
ವರ್ಷದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಬೆಂಗ ಳೂರಿ ನಲ್ಲಿ ಮುಖ್ಯಮಂತ್ರಿಗಳ ಜತೆ ಸಮಾ ಲೋಚಿಸಿದ ಸಂದರ್ಭವೇ ಪ್ರಥಮ ಹಂತದ ಪರಿಹಾರಕ್ಕಾಗಿ ಅನುದಾನ ಮಂಜೂರಾತಿ ನೀಡಿದ್ದರು.

ಎರಡನೇ ಹಂತದ ಪರಿಹಾರ
ಪ್ರಸ್ತುತ ಹಂತದಲ್ಲಿ ನೀರು ಸಂಗ್ರಹ ಗೊಳ್ಳುವ ಮಟ್ಟವನ್ನು 5 ಮೀ. ಇರಿಸುವ ಉದ್ದೇಶ ಹೊಂದಿದ್ದು, ಇದರಿಂದ ಮುಳುಗಡೆಯಾಗುವ ಭೂಮಿಗೆ ಮಾತ್ರ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಹಂತದಲ್ಲಿ ನೀರಿನ ಮಟ್ಟವನ್ನು 6 ಮೀ.ಗೆ ಏರಿಸಿದಲ್ಲಿ ಉಳಿಕೆ ಮುಳುಗಡೆ ಭೂಮಿಗೆ ಪರಿಹಾರ ನೀಡುವ ಬಗ್ಗೆ ಚರ್ಚಿಲಾಗುತ್ತದೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.