ಮಹಾಸಮರ; ಮತಗಟ್ಟೆ ಸಮೀಕ್ಷೆ ಪ್ರಕಾರ ಗುಜರಾತ್ ಗದ್ದುಗೆ ಯಾರಿಗೆ ಗೊತ್ತೆ


Team Udayavani, Dec 14, 2017, 5:41 PM IST

Modi-Rahul.jpg

ಅಹಮ್ಮದಾಬಾದ್: ಹೈವೋಲ್ಟೇಜ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತವರೂರಲ್ಲಿ ಅಗ್ನಿಪರೀಕ್ಷೆಯಾಗಿರುವ ಚುನಾವಣೆ ಎಂದೇ ಬಿಂಬಿತವಾಗಿದ್ದ ಗುಜರಾತ್ ನಲ್ಲಿ ಗುರುವಾರ ಅಂತಿಮ ಹಂತದ ಮತದಾನ ಪ್ರಕ್ರಿಯೆ ಸಂಜೆ ಮುಕ್ತಾಯ ಕಂಡ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆ ಪ್ರಕಟಗೊಂಡಿದೆ.

ಡಿಸೆಂಬರ್ 9ರಂದು ಗುಜರಾತ್ ನಲ್ಲಿ ಮೊದಲ ಹಂತದ ಚುನಾವಣೆ ನಡೆದಿತ್ತು. ಒಟ್ಟು 89 ಕ್ಷೇತ್ರಗಳಲ್ಲಿ ಮತದಾನವಾಗಿತ್ತು. ಇಂದು ನಡೆದ 2ನೇ ಹಂತದಲ್ಲಿ 93 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

182 ಸದಸ್ಯ ಬಲ ಹೊಂದಿರುವ ಗುಜರಾತ್ ವಿಧಾನಸಭೆಯಲ್ಲಿ ಮತಗಟ್ಟೆ ಸಮೀಕ್ಷೆ ಪ್ರಕಾರ, ಬಿಜೆಪಿ 109 ಸ್ಥಾನ ಪಡೆಯಲಿದೆ. ಕಾಂಗ್ರೆಸ್ ಪಕ್ಷಕ್ಕೆ 70 ಸ್ಥಾನ, ಇತರರು 03 ಸ್ಥಾನ. ಅದೇ ರೀತಿ ಒಟ್ಟು 68 ಸದಸ್ಯ ಬಲದ ಹಿಮಾಚಲದಲ್ಲಿ ಈ ಬಾರಿ ಬಿಜೆಪಿ(68) ಗದ್ದುಗೆ ಏರುವ ಸಾಧ್ಯತೆ ಇದೆ ಎಂದು ಸಿ ವೋಟರ್ ತಿಳಿಸಿದೆ.

ಟೈಮ್ಸ್ ನೌ ಹಾಗೂ ವಿಎಂಆರ್ ಸಮೀಕ್ಷೆ ಪ್ರಕಾರ, ಗುಜರಾತ್ ನಲ್ಲಿ ಬಿಜೆಪಿ 106ರಿಂದ 116 ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್ ಪಕ್ಷ 63ರಿಂದ 73 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ.

ರಿಪಬ್ಲಿಕ್ ನ್ಯೂಸ್ ಪ್ರಕಾರ ಗುಜರಾತ್ ಮತದಾನ ನಂತರದ ಸಮೀಕ್ಷೆಯಲ್ಲಿ ಬಿಜೆಪಿ ಭರ್ಜರಿ 108 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಕಾಂಗ್ರೆಸ್ ಪಕ್ಷ 74 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ತಿಳಿಸಿದೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 40ರಿಂದ 50 ಸ್ಥಾನ, ಕಾಂಗ್ರೆಸ್ ಕೇವಲ 15 ರಿಂದ 20 ಸ್ಥಾನ ಪಡೆಯಲಿದೆ ಎಂದು ರಿಪಬ್ಲಿಕ್ ನ್ಯೂಸ್ ಸಮೀಕ್ಷೆ ಹೇಳಿದೆ.

ನ್ಯೂಸ್ ಎಕ್ಸ್ ಅಂಡ್ ಸಿಎನ್ ಎಕ್ಸ್ ಪ್ರಕಾರ ಬಿಜೆಪಿ 115, ಕಾಂಗ್ರೆಸ್ 65, ಇತರೆ 2 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಇಂಡಿಯಾ ಟುಡೇ ಆಕ್ಸಿಸ್ ಮತಗಟ್ಟೆ ಸಮೀಕ್ಷೆ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 51 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ ಕೇವಲ 17 ಸ್ಥಾನ ಗಳಿಸಲಿದೆ ಎಂದು ಹೇಳಿದೆ.

ಎಬಿಪಿ ನ್ಯೂಸ್, ಸಿಎಸ್ ಡಿಎಸ್ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ 47ರಿಂದ 55 ಸ್ಥಾನ ಗಳಿಸಲಿದ್ದು, ಕಾಂಗ್ರೆಸ್ 13ರಿಂದ 20 ಸ್ಥಾನ ಪಡೆಯಲಿದೆ.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.