ಬಿಜೆಪಿ ಲಜ್ಜೆಗೆಟ್ಟ, ಊಸರವಳ್ಳಿ ಪಕ್ಷ


Team Udayavani, Dec 15, 2017, 6:05 AM IST

Ban15121706Medn.jpg

ಕೊಪ್ಪಳ: ಬಿ.ಎಸ್‌.ಯಡಿಯೂರಪ್ಪ ಅಧಿ ಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದವರು. ಬಿಜೆಪಿ ಲಜ್ಜೆಗೆಟ್ಟವರ ಪಕ್ಷ. ಬರೀ ಬೆಂಕಿ ಹಚ್ಚುವುದೇ ಅವರ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.

ಕುಷ್ಟಗಿ ಹಾಗೂ ಕನಕಗಿರಿಯಲ್ಲಿ ಮಾತನಾಡಿದ ಅವರು, 2008-2013ರಲ್ಲಿ 110 ಸ್ಥಾನಗಳೊಂದಿಗೆ ಜನತೆ ಬಿಜೆಪಿಗೆ ಅಧಿಕಾರ ನೀಡಿದ್ದರೂ 5 ವರ್ಷದಲ್ಲಿ ಮೂರು ಜನ ಮುಖ್ಯಮಂತ್ರಿಗಳಾಗಿ ಸರಿಯಾಗಿ ಆಡಳಿತ ನಿರ್ವಹಿಸಲಾಗಲಿಲ್ಲ. ಸಿಎಂ ಆಗಿದ್ದ ಯಡಿಯೂರಪ್ಪ ಅವರು ನೇರವಾಗಿ ಚೆಕ್‌ ಮೂಲಕ ಲಂಚ ಪಡೆದು ಜೈಲಿಗೆ ಹೋದರು. ಸಿಎಂ ಆಗಿ ಜೈಲಿಗೆ ಹೋದವರು ಯಡಿಯೂರಪ್ಪ ಅವರೊಬ್ಬರೇ. ಅವರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಜನಾರ್ದನ ರೆಡ್ಡಿ, ಹಾಲಪ್ಪ, ಆನಂದ ಸಿಂಗ್‌, ಸುರೇಶ ಬಾಬು ಇವರೆಲ್ಲ ಜೈಲಿಗೆ ಹೋಗಿದ್ದು ಬೀಗತನಕ್ಕಾಗಿ ಎಂದು ವ್ಯಂಗ್ಯವಾಡಿದರು.

ಈಗ ಜನರು ಪರಿವರ್ತನೆಯಾಗಲಿ ಎಂದು ಪರಿವರ್ತನೆ ಯಾತ್ರೆ ಮಾಡುತ್ತಿದ್ದಾರೆ. ಮೊದಲು ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಪರಿವರ್ತನೆಯಾಗಲಿ. ಸತ್ತ ಹೆಣದ ಮೇಲೆ ರಾಜಕೀಯ ಮಾಡುವ ಬಿಜೆಪಿಯ ಇನ್ನೊಂದು ಹೆಸರೇ ಬೆಂಕಿ ಹಚ್ಚೋದು. ಅವರಿಗೆ 2-3 ನಾಲಿಗೆ ಇವೆ. ಊಸರವಳ್ಳಿ ಬಣ್ಣದಂತೆ ಮಾತು ಬದಲಿಸುತ್ತಿದ್ದಾರೆ ಎಂದರು.

ರೈತರ ಸಾಲ ಮನ್ನಾ ಮಾಡದಿದ್ದರೆ ಮೂಗು ಹಿಡಿದು ಸಾಲ ಮನ್ನಾ ಮಾಡಿಸುವೆ ಎಂದಿದ್ದ ಬಿಎಸ್‌ವೈ ಈಗ ಪ್ರಧಾನಿ ಮೋದಿ ಮೂಗು ಹಿಡಿದು ರೈತರ ರಾಷ್ಟ್ರೀಕೃತ ಬ್ಯಾಂಕ್‌ ಸಾಲ ಮನ್ನಾ ಮಾಡಿಸಲಿ. ಸಾಲ ಮನ್ನಾ ವಿಚಾರದಲ್ಲಿ ಲಾಲಿಪಪ್‌ ಎಂದಿದ್ದ ಜಾವಡೇಕರ್‌ಗೆ ಮಾನ, ಮರ್ಯಾದೆ ಇಲ್ಲ. ಇನ್ನು ಅನಂತಕುಮಾರ್‌ ಹೆಗಡೆ ಸಚಿವನಾಗೋದಕ್ಕೆ ನಾಲಾಯಕ್‌ ಎಂದರು.

ನಾನು ದಲಿತಪರ:
ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ದಲಿತರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡ್ತೀವಿ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಅವರು ಅಧಿ ಕಾರಕ್ಕೆ ಬರಲ್ಲ. ಇನ್ನು ಎಲ್ಲಿಂದ ಸ್ಥಾನ ಕೊಡ್ತಾರೆ. ಹಾಗಾದ್ರೆ ಜೆಡಿಎಸ್‌ ದಲಿತರಿಗೆ ಸಿಎಂ ಸ್ಥಾನ ಕೊಡ್ತೀವಿ ಎಂದು ಏಕೆ ಘೋಷಣೆ ಮಾಡುತ್ತಿಲ್ಲ. ದೇವೇಗೌಡರಿಗೆ ದಲಿತರ ಬಗ್ಗೆ ಎಷ್ಟು ಕಾಳಜಿಯಿದೆ ಎಂದು ನನಗೆ ಗೊತ್ತು. ತಮ್ಮ ಕೊನೆಯಾಸೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದು ಎಂದು ದೇವೇಗೌಡರೇ ಹೇಳಿದ್ದಾರೆ’ ಎಂದರು.

“ದಲಿತರು ಸಿಎಂ ಆಗುವುದು ನನ್ನಾಸೆ. ನಾನು ಶೇ.100ರಷ್ಟು ದಲಿತರ ಪರ. ದಲಿತರ ಮನೆಗೆ ಉಪಾಹಾರಕ್ಕೆ ತೆರಳಿದ್ದ ಯಡಿಯೂರಪ್ಪಗೆ ಅಷ್ಟೊಂದು ಅಭಿಮಾನ ಇದ್ದರೆ ದಲಿತರೊಂದಿಗೆ ಬೀಗತನ ಮಾಡಲಿ’ ಎಂದು ಸವಾಲು ಹಾಕಿದರು.

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಕೇಂದ್ರಕ್ಕೆ ಶೀಘ್ರ ಶಿಫಾರಸು
ಕೊಪ್ಪಳ:
“ವೀರಶೈವ-ಲಿಂಗಾಯತ ಧರ್ಮದ ವಿಚಾರದಲ್ಲಿ ನಾನು ಯಾವುದೇ ಧರ್ಮ, ಜಾತಿಯನ್ನು ಒಡೆಯುವ ಕೆಲಸ ಮಾಡಿಲ್ಲ. ಲಿಂಗಾಯತರೇ ಪ್ರತ್ಯೇಕ ಧರ್ಮಕ್ಕೆ ಒತ್ತಾಯಿಸಿದ್ದರು. ಹೀಗಾಗಿ ಇಬ್ಬರೂ ಒಟ್ಟಿಗೆ ಬನ್ನಿ ಎಂದಿದ್ದೆ. ಮೂರು ತಿಂಗಳಾದರೂ ಅವರು ಒಟ್ಟಾಗಿ ಬರಲಿಲ್ಲ. ಹೀಗಾಗಿ, ಶೀಘ್ರದಲ್ಲೇ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಈಗಾಗಲೆ ಮಾತೆ ಮಹಾದೇವಿ ಸೇರಿ ನನಗೆ ಪ್ರತ್ಯೇಕವಾಗಿ 5-6 ಮಂದಿ ಮನವಿ ಸಲ್ಲಿಸಿದ್ದಾರೆ. ಅದೆಲ್ಲವನ್ನೂ ಪರಿಶೀಲಿಸಿ ಅಲ್ಪಸಂಖ್ಯಾತ ಸ್ಥಾನಮಾನಕ್ಕಾಗಿ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು. ಧರ್ಮ ಒಡೆಯುವ ವಿಚಾರದಲ್ಲಿ ನಾನು ಬಸವರಾಜ ರಾಯರಡ್ಡಿ, ಎಂ.ಬಿ.ಪಾಟೀಲ ಸೇರಿ ಯಾವುದೇ ಸಚಿವರನ್ನು ನೇಮಕ ಮಾಡಿಲ್ಲ’ ಎಂದರು.

ರಾಹುಲ್‌ ಗಾಂಧಿ  ಹತ್ಯೆ ಎಂದ ಸಿಎಂ !
ಕೊಪ್ಪಳ:
ಜಿಲ್ಲೆಯ ಕುಷ್ಟಗಿಯಲ್ಲಿ ಬುಧವಾರ ಕಾಂಗ್ರೆಸ್‌ ಪಕ್ಷದಿಂದ ಆಯೋಜಿಸಿದ್ದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವ ಭರದಲ್ಲಿ ರಾಹುಲ್‌ ಗಾಂಧಿ  ಹತ್ಯೆಯಾದ ಸಂದರ್ಭದಲ್ಲಿ ನಾನು ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಸೋಲು ಕಾಣಬೇಕಾಯಿತು’ ಎಂದು ಹೇಳಿ ಪೇಚಿಗೆ ಸಿಲುಕಿದರು. 

ತಮ್ಮ ತಪ್ಪಿನ ಅರಿವಾಗುತ್ತಿದ್ದಂತೆ ಸಾವರಿಸಿಕೊಂಡ ಸಿಎಂ, ಇಲ್ಲಾ ಇಲ್ಲಾ ರಾಹುಲ್‌ ಗಾಂ ಧಿ ಅಲ್ಲ, ರಾಜೀವ್‌ ಗಾಂಧಿ  ಹತ್ಯೆ ನಡೆದ ಸಂದರ್ಭದಲ್ಲಿ ನಾನು ಸೋತೆ ಎಂದು ತಿದ್ದಿಕೊಂಡರು. ನಾನು 1991ರ ಅವ ಧಿಯಲ್ಲಿ ಕೊಪ್ಪಳ ಲೋಕಸಭಾ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದೆ. ಆ ವೇಳೆ ಕೇವಲ 11 ಸಾವಿರ ಮತಗಳ ಅಂತರದಿಂದ ನಾನು ಸೋಲಬೇಕಾಯಿತು. ರಾಜೀವ್‌ಗಾಂಧಿ  ಹತ್ಯೆಗಿಂತ ಮೊದಲೇ ಚುನಾವಣೆ ನಡೆದಿದ್ದರೆ ನಾನು ಕೊಪ್ಪಳದಲ್ಲಿ ಗೆಲ್ಲುತ್ತಿದ್ದೆ ಎಂದರು.

ಸಿಎಂಗೆ ಹಾರ ಹಾಕಲು ಅವಕಾಶ
ನೀಡದ್ದಕ್ಕೆ ಕಲ್ಲು, ಕುರ್ಚಿ ತೂರಾಟ
ಕುಷ್ಟಗಿ:
ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿಗೆ ಹೂಹಾರ ಹಾಕಲು ಪೊಲೀಸರು ಬಿಡದ ಕಾರಣ
ಅಸಮಾಧಾನಗೊಂಡ ಮುಖಂಡ, ಅಭಿಮಾನಿಗಳು ಪೊಲೀಸರ ಮೇಲೆ ಕಲ್ಲು, ಕುರ್ಚಿ ತೂರಾಟ ನಡೆಸಿದರು. ಸಿಎಂ
ಭಾಷಣದಲ್ಲಿ ಮುಖಂಡರ ಬೆವರಿಳಿಸಿದರು.

ಇಲ್ಲಿನ ಟಿಎಪಿಸಿಎಂಎಸ್‌ ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ದಿಲೀಪಕುಮಾರ್‌ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಲು ಮುಂದಾದರು. ಆದರೆ ಪೊಲೀಸರು ಭದ್ರತೆ ದೃಷ್ಟಿಯಿಂದ ಅವರನ್ನು ವೇದಿಕೆಗೆ ಬಿಡಲಿಲ್ಲ. ಇದರಿಂದ ಕೆರಳಿದ ದಿಲೀಪಕುಮಾರ ಅಭಿಮಾನಿಗಳು ಎಸ್ಪಿಯ ಮಾತನ್ನು ಲೆಕ್ಕಿಸದೆ ವೇದಿಕೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರಿಗೆ ಪೊಲೀಸರು ಬೆತ್ತದ ರುಚಿ ತೋರಿಸಿದರು. ಇದರ ವಿರುದಟಛಿವಾಗಿ ಕಾರ್ಯಕರ್ತರು ಪ್ರತಿಭಟಿಸಿ, ತಳ್ಳಾಟ ನೂಕಾಟ ನಡೆಸಿದರು.

ಪೊಲೀಸರು ಅವರನ್ನು ಮತ್ತೂಮ್ಮೆ ಚದುರಿಸಿದರು. ಕೋಪಗೊಂಡ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು, ಕುರ್ಚಿಗಳನ್ನು ತೂರಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪೊಲೀಸರು ಪರಿಸ್ಥಿತಿ ಸುಧಾರಿಸಿದರು.

ಈ ಮಧ್ಯೆ ಗಲಾಟೆ ಸದ್ದಿಗೆ ಸಿಎಂ ಸುಮ್ಮನಿರಿ ಎಂದು ಆದೇಶಿಸಿದರೂ, ಗದ್ದಲ ಹೆಚ್ಚಾದಾಗ, “ಈ ರೀತಿಯ ವರಸೆ ಬಿಡಬೇಕು. ಗದ್ದಲ ಮಾಡಿ, ಜನ ಸೇರಿಸಿ ಟಿಕೆಟ್‌ ನಿರೀಕ್ಷಿಸದಿರಿ. ಎಷ್ಟೇ ಪ್ರಭಾವ ಇದ್ದರೂ, ಎಷ್ಟೇ ಜನರನ್ನು ಕರೆದುಕೊಂಡು ಬಂದರೂ ಅಷ್ಟೇ. ಟಿಕೆಟ್‌ ಸಿಗದವರು ಗಲಾಟೆ ಮಾಡಿಸ್ತಾರೆ. ಟಿಕೆಟ್‌ ಖಚಿತವಾಗಿರುವವರು ಸುಮ್ಮನೆ ಇರ್ತಾರೆ ಎಂದು ಬೆವರಿಳಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.