ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಇ-ಸೇವೆ


Team Udayavani, Dec 16, 2017, 6:00 AM IST

Ambedkar-Development-Corpor.jpg

ಬೆಂಗಳೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮವು “ಬೆರಳ ತುದಿಯಲ್ಲಿ ಆಡಳಿತ: ಕ್ಷಣಮಾತ್ರದಲ್ಲಿ ಪ್ರಗತಿ ವರದಿ’ ಘೋಷ ವಾಕ್ಯದೊಂದಿಗೆ ಇದೀಗ ಸಂಪೂರ್ಣ “ಇ -ಆಡಳಿತ’ಮಯವಾಗಿದೆ.

ಫ‌ಲಾನುಭವಿಗಳು ಸಬ್ಸಿಡಿ, ಸಾಲ, ಸವಲತ್ತು ಪಡೆಯಲು ಜಿಲ್ಲಾ ಅಧಿಕಾರಿಗಳ ಕಚೇರಿ ಹಾಗೂ ಬ್ಯಾಂಕುಗಳಿಗೆ ಅಲೆದಾಡುವುದು ಹಾಗೂ ಕಮೀಷನ್‌ ಹಾವಳಿ ತಪ್ಪಿಸಲು ಹೊಸ ತಂತ್ರಾಂಶದ “ಸರಳ ಸ್ಪಂದನೆ’ ಹೆಸರಿನ ಇ-ಸೇವೆ ಆರಂಭಿಸಲಾಗಿದೆ.

ಇದರಿಂದಾಗಿ ಅರ್ಜಿ ಸಲ್ಲಿಸಿದವರಿಗೆ ಅದರ ಪ್ರಗತಿ ಬಗ್ಗೆ ಕಾಲ ಕಾಲಕ್ಕೆ ಮೊಬೈಲ್‌ ಮೂಲಕ ಎಸ್‌ಎಂಎಸ್‌ ಸಂದೇಶ ರವಾನೆಯಾಗುವುದರ ಜತೆಗೆ, ನಿಗದಿತ ಕಾಲಮಿತಿಯಲ್ಲಿ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ. ಇದೆಲ್ಲರ ಮಾಹಿತಿ “ಕಲ್ಯಾಣ್‌’ ಆ್ಯಪ್‌ನಲ್ಲಿ ಲಭ್ಯವಾಗಲಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ, ಅಂಬೇಡ್ಕರ್‌ ಅಭಿವೃದ್ಧಿ ನಿಗಮ ದೊಡ್ಡದಾಗಿ ಕಾರ್ಯವ್ಯಾಪ್ತಿ ಹೊಂದಿದ್ದು, ಈ ವರ್ಷ 1.68 ಲಕ್ಷ ಜನರಿಗೆ ಸವಲತ್ತು ಹಾಗೂ ಸಬ್ಸಿಡಿ , ಸಾಲ ವಿತರಿಸುವ ಕೆಲಸ ಮಾಡುತ್ತಿದೆ. ಫ‌ಲಾನುಭವಿಗಳು ಪ್ರತಿ ಬಾರಿ ಅರ್ಜಿ ಹಿಡಿದು ಪ್ರತಿ ಹಂತದ ಅಧಿಕಾರಿ ಹಾಗೂ ಬ್ಯಾಂಕುಗಳಿಗೆ ಅಲೆದಾಡುವುದು ತಪ್ಪಿಸಲು ಹೊಸ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಸವಲತ್ತು ಪಡೆಯಲು ಅಲೆದಾಡುವುದಕ್ಕಾಗಿಯೇ ಅಥವಾ ಸಬ್ಸಿಡಿಯ ಶೇ.50 ರಷ್ಟು ಹಣ ವೆಚ್ಚ ಮಾಡಿಕೊಳ್ಳುವುದೆಲ್ಲವೂ ನಡೆಯುತ್ತಿದೆ. ಇದರಿಂದ ನಮ್ಮ ಕಾರ್ಯಕ್ರಮಗಳೂ ಪೂರ್ಣಪ್ರಮಾಣದಲ್ಲಿ ಅವರಿಗೆ ತಲುಪದಂತಾಗಿದೆ. ಹೀಗಾಗಿ, ಮಾಹಿತಿ ತಂತ್ರಜ್ಞಾನವನ್ನು ಎಲ್ಲ ಹಂತಗಳಲ್ಲಿಯೂ ಅಳವಡಿಸಿಕೊಂಡು ಆಡಳಿತ ಸುಧಾರಣೆಗೆ ಮಹತ್ವದ ಹೆಜ್ಜೆಯನ್ನು ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಇಟ್ಟಿದೆ. ಇದರಿಂದ ಬೆರಳ ತುದಿಯಲ್ಲಿ ಆಡಳಿತ ಪರಿಕಲ್ಪನೆ ಅಕ್ಷರಶಃ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಸ್ವಯಂ ಉದ್ಯೋಗದಡಿ ಪರಿಶಿಷ್ಟ ಜಾತಿಯ 83474 ಫ‌ಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಿ 733.24 ಕೋಟಿ ರೂ. ವೆಚ್ಚ ಮಾಡಲಾಗಿದೆ. ಭೂ ಒಡೆತನ ಯೋಜನೆಯಡಿ 4125 ಭೂ ರಹಿತ ಕೃಷಿ ಕಾರ್ಮಿಕರಿಗೆ 5544.27 ಎಕರೆ ಜಮೀನು ವಿತರಿಸಲಾಗಿದೆ. ಗಂಗ ಕಲ್ಯಾಣ ಯೋಜನೆಯಡಿ 35272 ಕೊಳವೆ ಬಾವಿ ಕೊರೆದು 26949 ಕೊಳವೆ ಬಾವಿಗಳಿಗೆ ಪಂಪ್‌ಸೆಟ್‌ ಅಳವಡಿಸಿ 31204 ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಾಲಗಿದೆ ಎಂದು ವಿವರಿಸಿದರು.

ಏನಿದರ ಉಪಯೋಗ?
ನಿಗಮದ ವತಿಯಿಂದ ಸಾಲ ಸೌಲಭ್ಯ, ಸಬ್ಸಿಡಿ, ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸುವುದು ಸೇರಿದಂತೆ ಎಲ್ಲ ಯೋಜನೆಗಳಿಗೂ ಇ-ಸೇವಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದು ಫ‌ಲಾನುಭವಿಗಳಿಗೆ ತ್ವರಿತ ಸೇವೆ ಕಲ್ಪಿಸುವುದಷ್ಟೇ ಅಲ್ಲದೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಪ್ರಗತಿಯಾಗಿದೆ, ಅರ್ಜಿಗಳ ವಿಲೇವಾರಿ ಹಂತ ಏನು ? ಎಂಬುದು ಗೊತ್ತಾಗಲಿದೆ.

ಏನೇನು ಸೌಲಭ್ಯ?
ಅಂಬೇಡ್ಕರ್‌ ಅಭಿವೃದ್ಧಿ ನಿಗಮಕ್ಕೆ ಪರಿಶಿಷ್ಟ ಜಾತಿಯವರ ಅಭವೃದ್ಧಿಗಾಗಿ ಕಳೆದ ಐದು ವರ್ಷಗಳಲ್ಲಿ ಸರ್ಕಾರವು ಬಜೆಟ್‌ನಲ್ಲಿ 2643.90 ಕೋಟಿ ರೂ. ನಿಗದಿಪಡಿಸಿದ್ದು 334709 ಫ‌ಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸಲು ಗುರಿ ಹಮ್ಮಿಕೊಳ್ಳಲಾಗಿತ್ತು. 2017 ನವೆಂಬರ್‌ ಅಂತ್ಯಕ್ಕೆ 2185.85 ಕೋಟಿ ರೂ. ವೆಚ್ಚ ಮಾಡಿ 198281 ಫ‌ಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.